ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯಡಿ ಬೆಳೆ ವಿಮೆಗೆ ನೊಂದಾಯಿಸಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ಎಸ್.ಬಿ.ಐ ಜನರಲ್ ಇನ್ಶೂರೆನ್ ಕಂಪನಿ ಲಿಮಿಟೆಡ್ ಇವರ ಸಹಯೋಗದೊಂದಿಗೆ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಆಸಕ್ತ ರೈತರು ಭೂಮಿ ದಾಖಲೆಗಳಾದ ಪಹಣಿ/ಕಂದಾಯ ರಶೀತಿ/ಖಾತೆ ಪುಸ್ತಕ/ಬ್ಯಾಂಕ್ ಪಾಸ್ ಪುಸ್ತಕ ಮತ್ತು ಆದಾರ್ ಕಾರ್ಡ್ ದಾಖಲೆಗಳೊಂದಿಗೆ ಹತ್ತಿರದ ಬ್ಯಾಂಕ್, ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಬೆಳೆ ವಿಮೆ ಮಾಡಿಸಲು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಯಾವ ಬೆಳೆಗೆ ಎಷ್ಟು ವಿಮೆ ಸಿಗಲಿದೆ ಎಂಬುದನ್ನು ನೋಡುವುದಾದರೆ….
ರಾಗಿ (ಮಳೆಯಾಶ್ರಿತ) ಬೆಳೆಗೆ ರೈತರು ಪ್ರೀಮಿಯಂ ಮೊತ್ತ ಎಕರೆಗೆ 399.2 ರೂ.ಪಾವತಿಸಿದರೆ ವಿಮಾ ಮೊತ್ತ 19,960/- ರೂ. ಪಡೆಯಬಹುದು.
ರಾಗಿ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 466.4/- ರೂ ಪಾವತಿಸಿದರೆ 23,320/- ವಿಮಾ ಮೊತ್ತ ಪಡೆಯಬಹುದು.
ಭತ್ತ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 868.8/- ರೂ ಪಾವತಿಸಿದರೆ 43,440/- ರೂ ವಿಮಾ ಮೊತ್ತ ಪಡೆಯಬಹುದು.
ಮುಸುಕಿನ ಜೋಳ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 609.6/- ರೂ ಪಾವತಿಸಿದರೆ 30,480/- ರೂ ವಿಮಾ ಮೊತ್ತ ಪಡೆಯಬಹುದು.
ಮುಸುಕಿನ ಜೋಳ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 540/- ಪಾವತಿಸಿದರೆ ವಿಮಾ ಮೊತ್ತ 27,000/- ಪಡೆಯಬಹುದು.
ಹುರಳಿ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 188/- ರೂ ಪಾವತಿಸಿದರೆ ವಿಮಾ ಮೊತ್ತ 9,400/- ಪಡೆಯಬಹುದು.
ನೆಲಗಡಲೆ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 523/- ಪಾವತಿಸಿದರೆ 26,160/- ವಿಮಾ ಮೊತ್ತ ಪಡೆಯಬಹುದು.
ತೊಗರಿ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 460/- ಪಾವತಿಸಿದರೆ 23,040/- ವಿಮಾ ಮೊತ್ತ ಪಡೆಯಬಹುದು.
ತೊಗರಿ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 482/- ಪಾವತಿಸಿದರೆ 24,120/- ವಿಮಾ ಮೊತ್ತ ಪಡೆಯಬಹುದು.
ಟಮೊಟೊ ಬೆಳೆಗೆ ರೈತರು ಪ್ರೀಮಿಯಂ ಮೊತ್ತ ಎಕರೆಗೆ 3396/- ಪಾವತಿಸಿದರೆ ವಿಮಾ ಮೊತ್ತ 67,920/- ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ರೈತರು ಬೆಳೆ ವಿಮಾ ಸಂಸ್ಥೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಸಹಕಾರ ಇಲಾಖೆ ಹಾಗೂ ಬೆಳೆ ಸಾಲ ನೀಡುವ ಬ್ಯಾಂಕ್ ಅಥವಾ ಸಹಕಾರಿ ಬ್ಯಾಂಕ್ಗಳನ್ನು ಸಂಪರ್ಕಿಸಲು ಬೆಂಗಳೂರು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರಾದ ಬಿ.ಜಿ ಕಲಾವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…