ಗೌರಿಬಿದನೂರು ಮತ್ತು ದೇವರಪಲ್ಲಿ ರೈಲು ನಿಲ್ದಾಣಗಳ ಮಧ್ಯೆ ವಿದುರಾಶ್ವತ್ಥ ಹತ್ತಿರ ಅಪರಿಚಿತ ಮಹಿಳೆ ರೈಲಿಗೆ ಸಿಲುಕಿ ಇಂದು ಮೃತಪಟ್ಟಿದ್ದಾಳೆ.
ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಯು.ಡಿ ಆರ್.ನಂ. 11/2025 ಕಲಂ 194 BNSS ರೀತ್ಯಾ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ವಯಸ್ಸು ಸುಮಾರು 60 ವರ್ಷವಾಗಿರಬಹುದು, ಮೃತಳ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.
*ಚಹರೆ* – 5.2 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ದುಂಡನೆಯ ಮುಖ, ತಲೆಯಲ್ಲಿ ಸುಮಾರು ಒಂದು ಅಡಿ ಉದ್ದದ ಕಪ್ಪು- ಬಿಳಿ ಮಿಶ್ರಿತ ತಲೆ ಕೂದಲು ಇದೆ. ಸಾಧಾರಣವಾದ ಮೈಕಟ್ಟು ಹೊಂದಿರುತ್ತಾರೆ. ಮೃತಳ ಬಳಿ ಒಂದು ಎಲೆ ಅಡಿಕೆ ಚೀಲ ಇರುತ್ತದೆ.
*ಬಟ್ಟೆಗಳು* – ಪಿಂಕ್ ಕುಂಕಮ ಬಣ್ಣದ ಜಾಕೆಟ್ ನೀಲಿ-ಬಿಳಿ ಮಿಶ್ರಿತ ಹೂ ಡಿಸೈನ್ ವುಳ್ಳ ಬಿಸ್ಕತ್ ಕಲರ್ ಸೀರೆ, ತಿಳಿ ಹಸಿರು ಬಣ್ಣದ ಒಳಲಂಗ ಇದ್ದು ಕಾಲಿನಲ್ಲಿ ಬಿಳಿಯ ಒಂದು ಜೊತೆ ಚಪ್ಪಲಿ ಇದೆ. ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143, 9902193960 ಸಂಪರ್ಕಿಸಲು ಕೋರಲಾಗಿದೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…