ಗೌರಿಬಿದನೂರು ಮತ್ತು ದೇವರಪಲ್ಲಿ ರೈಲು ನಿಲ್ದಾಣಗಳ ಮಧ್ಯೆ ವಿದುರಾಶ್ವತ್ಥ ಹತ್ತಿರ ಅಪರಿಚಿತ ಮಹಿಳೆ ರೈಲಿಗೆ ಸಿಲುಕಿ ಇಂದು ಮೃತಪಟ್ಟಿದ್ದಾಳೆ.
ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಯು.ಡಿ ಆರ್.ನಂ. 11/2025 ಕಲಂ 194 BNSS ರೀತ್ಯಾ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ವಯಸ್ಸು ಸುಮಾರು 60 ವರ್ಷವಾಗಿರಬಹುದು, ಮೃತಳ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.
*ಚಹರೆ* – 5.2 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ದುಂಡನೆಯ ಮುಖ, ತಲೆಯಲ್ಲಿ ಸುಮಾರು ಒಂದು ಅಡಿ ಉದ್ದದ ಕಪ್ಪು- ಬಿಳಿ ಮಿಶ್ರಿತ ತಲೆ ಕೂದಲು ಇದೆ. ಸಾಧಾರಣವಾದ ಮೈಕಟ್ಟು ಹೊಂದಿರುತ್ತಾರೆ. ಮೃತಳ ಬಳಿ ಒಂದು ಎಲೆ ಅಡಿಕೆ ಚೀಲ ಇರುತ್ತದೆ.
*ಬಟ್ಟೆಗಳು* – ಪಿಂಕ್ ಕುಂಕಮ ಬಣ್ಣದ ಜಾಕೆಟ್ ನೀಲಿ-ಬಿಳಿ ಮಿಶ್ರಿತ ಹೂ ಡಿಸೈನ್ ವುಳ್ಳ ಬಿಸ್ಕತ್ ಕಲರ್ ಸೀರೆ, ತಿಳಿ ಹಸಿರು ಬಣ್ಣದ ಒಳಲಂಗ ಇದ್ದು ಕಾಲಿನಲ್ಲಿ ಬಿಳಿಯ ಒಂದು ಜೊತೆ ಚಪ್ಪಲಿ ಇದೆ. ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143, 9902193960 ಸಂಪರ್ಕಿಸಲು ಕೋರಲಾಗಿದೆ.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…