ತೊಂಡೆಬಾವಿ ಮತ್ತು ಮಾಕಳಿ ದುರ್ಗ ರೈಲು ನಿಲ್ದಾಣಗಳ ಮಾರ್ಗ ಮಧ್ಯೆ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಯಸ್ಸು: ಸುಮಾರು 25 ರಿಂದ 30 ವರ್ಷ ವಯಸ್ಸು ಆಗಿರಬಹುದು ಎಂದು ಅಂದಾಜಿಸಲಾಗಿದೆ. ಮೃತನ ಹೆಸರು ಮತ್ತು ವಾರಸುದಾರರು ಯಾರು ಪತ್ತೆ ಆಗಿರುವುದಿಲ್ಲ.
ಮೃತನ ಚಹರೆ:
ಮೃತರು ಸುಮಾರು 5.5ಅಡಿ ಎತ್ತರ, ಸಾಧಾರಣ ಗೋಧಿ ಮೈ ಬಣ್ಣ, ಕೋಲು ಮುಖ, ಗಿಡ್ಡನೆಯ ಮೂಗು, ತಲೆಯಲ್ಲಿ ಅರ್ಧ ಇಂಚು ಉದ್ದದ ಕಪ್ಪನೆಯ ತಲೆ ಕೂದಲು, ಸಣ್ಣನೆಯ ಗಡ್ಡ ಮೀಸೆ, ಸಾಧಾರಣ ಶರೀರವನ್ನು ಹೊಂದಿರುತ್ತಾರೆ.
ಶವದ ಮೈಮೇಲೆ ಕಡು ಆಕಾಶ ನೀಲಿ ತಿಳಿ ಕೆಂಪು ಬಣ್ಣದ ಉದ್ದ ಮತ್ತು ಅಡ್ಡನೆಯ ಗೆರೆಗಳಿರುವ ಚೌಕಳಿ ಶರ್ಟ್, ಬಿಳಿ ಬಣ್ಣದ ಉದ್ದನೆಯ ಗೆರೆಗಳಿರುವ ಶರ್ಟ್, ಕಂದು ಬಣ್ಣದ ಒಳಚಡ್ಡಿ, ಕಡು ಕಂದು ಬಣ್ಣದ ಬನಿಯನ್, ತಿಳಿಹಸಿರು ಬಣ್ಣದ ಬರ್ಮುಡಾ ನಿಕ್ಕರ್, ಸೊಂಟದಲ್ಲಿ ಎರಡು ಎಳೆ ಕೆಂಪನೆಯ ಉಡದಾರ ಇದ್ದು, ಅದರಲ್ಲಿ ಒಂದು ತಾಯತವಿರುತ್ತದೆ.
ಕೊರಳಲ್ಲಿ ಒಂದು ಎಳೆ ಕಪ್ಪನೆಯ ದಾರವಿದ್ದು, ಅದರಲ್ಲಿ ಒಂದು ತಾಯತವಿದ್ದು, ಗಾಜಿನ ಮಣಿಗಳ ರೀತಿಯಲ್ಲಿರುವ ಒಂದು ಸರ ಇರುತ್ತದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ಜಗದೀಶ್.ಆರ್ ಪಿ ಎಸ್ ಐ ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಬೆಂಗಳೂರು ಮೊಬೈಲ್ ಸಂಖ್ಯೆ 948080211 ಹಾಗೂ ಅಶ್ವತ್ಥ್. ಜಿ.ಎನ್ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಹೊರಉಪ ಠಾಣೆ Ph no. 9480802143 ಇವರುಗಳನ್ನು ಸಂಪರ್ಕಿಸಬೇಕಾಗಿ ಕೋರಿದೆ.
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…
ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…