ತೊಂಡೆಬಾವಿ ಮತ್ತು ಮಾಕಳಿ ದುರ್ಗ ರೈಲು ನಿಲ್ದಾಣಗಳ ಮಾರ್ಗ ಮಧ್ಯೆ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಯಸ್ಸು: ಸುಮಾರು 25 ರಿಂದ 30 ವರ್ಷ ವಯಸ್ಸು ಆಗಿರಬಹುದು ಎಂದು ಅಂದಾಜಿಸಲಾಗಿದೆ. ಮೃತನ ಹೆಸರು ಮತ್ತು ವಾರಸುದಾರರು ಯಾರು ಪತ್ತೆ ಆಗಿರುವುದಿಲ್ಲ.
ಮೃತನ ಚಹರೆ:
ಮೃತರು ಸುಮಾರು 5.5ಅಡಿ ಎತ್ತರ, ಸಾಧಾರಣ ಗೋಧಿ ಮೈ ಬಣ್ಣ, ಕೋಲು ಮುಖ, ಗಿಡ್ಡನೆಯ ಮೂಗು, ತಲೆಯಲ್ಲಿ ಅರ್ಧ ಇಂಚು ಉದ್ದದ ಕಪ್ಪನೆಯ ತಲೆ ಕೂದಲು, ಸಣ್ಣನೆಯ ಗಡ್ಡ ಮೀಸೆ, ಸಾಧಾರಣ ಶರೀರವನ್ನು ಹೊಂದಿರುತ್ತಾರೆ.
ಶವದ ಮೈಮೇಲೆ ಕಡು ಆಕಾಶ ನೀಲಿ ತಿಳಿ ಕೆಂಪು ಬಣ್ಣದ ಉದ್ದ ಮತ್ತು ಅಡ್ಡನೆಯ ಗೆರೆಗಳಿರುವ ಚೌಕಳಿ ಶರ್ಟ್, ಬಿಳಿ ಬಣ್ಣದ ಉದ್ದನೆಯ ಗೆರೆಗಳಿರುವ ಶರ್ಟ್, ಕಂದು ಬಣ್ಣದ ಒಳಚಡ್ಡಿ, ಕಡು ಕಂದು ಬಣ್ಣದ ಬನಿಯನ್, ತಿಳಿಹಸಿರು ಬಣ್ಣದ ಬರ್ಮುಡಾ ನಿಕ್ಕರ್, ಸೊಂಟದಲ್ಲಿ ಎರಡು ಎಳೆ ಕೆಂಪನೆಯ ಉಡದಾರ ಇದ್ದು, ಅದರಲ್ಲಿ ಒಂದು ತಾಯತವಿರುತ್ತದೆ.
ಕೊರಳಲ್ಲಿ ಒಂದು ಎಳೆ ಕಪ್ಪನೆಯ ದಾರವಿದ್ದು, ಅದರಲ್ಲಿ ಒಂದು ತಾಯತವಿದ್ದು, ಗಾಜಿನ ಮಣಿಗಳ ರೀತಿಯಲ್ಲಿರುವ ಒಂದು ಸರ ಇರುತ್ತದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ಜಗದೀಶ್.ಆರ್ ಪಿ ಎಸ್ ಐ ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಬೆಂಗಳೂರು ಮೊಬೈಲ್ ಸಂಖ್ಯೆ 948080211 ಹಾಗೂ ಅಶ್ವತ್ಥ್. ಜಿ.ಎನ್ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಹೊರಉಪ ಠಾಣೆ Ph no. 9480802143 ಇವರುಗಳನ್ನು ಸಂಪರ್ಕಿಸಬೇಕಾಗಿ ಕೋರಿದೆ.
ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ…
ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಲಂಚದ ಹಣ ಬಿಸಾಡಿ ಪರಾರಿಯಾಗಿದ್ದ ಎಫ್ಡಿಸಿ ಶ್ಯಾಮಲಾ ಹಾಗೂ ಇಬ್ಬರು ಸಹಾಯಕರು ಕೊನೆಗೂ ಲೋಕಾಯುಕ್ತ ಬಲೆಗೆ…
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್…
ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…