ತೊಂಡೆಬಾವಿ ಮತ್ತು ಮಾಕಳಿ ದುರ್ಗ ರೈಲು ನಿಲ್ದಾಣಗಳ ಮಾರ್ಗ ಮಧ್ಯೆ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಯಸ್ಸು: ಸುಮಾರು 25 ರಿಂದ 30 ವರ್ಷ ವಯಸ್ಸು ಆಗಿರಬಹುದು ಎಂದು ಅಂದಾಜಿಸಲಾಗಿದೆ. ಮೃತನ ಹೆಸರು ಮತ್ತು ವಾರಸುದಾರರು ಯಾರು ಪತ್ತೆ ಆಗಿರುವುದಿಲ್ಲ.
ಮೃತನ ಚಹರೆ:
ಮೃತರು ಸುಮಾರು 5.5ಅಡಿ ಎತ್ತರ, ಸಾಧಾರಣ ಗೋಧಿ ಮೈ ಬಣ್ಣ, ಕೋಲು ಮುಖ, ಗಿಡ್ಡನೆಯ ಮೂಗು, ತಲೆಯಲ್ಲಿ ಅರ್ಧ ಇಂಚು ಉದ್ದದ ಕಪ್ಪನೆಯ ತಲೆ ಕೂದಲು, ಸಣ್ಣನೆಯ ಗಡ್ಡ ಮೀಸೆ, ಸಾಧಾರಣ ಶರೀರವನ್ನು ಹೊಂದಿರುತ್ತಾರೆ.
ಶವದ ಮೈಮೇಲೆ ಕಡು ಆಕಾಶ ನೀಲಿ ತಿಳಿ ಕೆಂಪು ಬಣ್ಣದ ಉದ್ದ ಮತ್ತು ಅಡ್ಡನೆಯ ಗೆರೆಗಳಿರುವ ಚೌಕಳಿ ಶರ್ಟ್, ಬಿಳಿ ಬಣ್ಣದ ಉದ್ದನೆಯ ಗೆರೆಗಳಿರುವ ಶರ್ಟ್, ಕಂದು ಬಣ್ಣದ ಒಳಚಡ್ಡಿ, ಕಡು ಕಂದು ಬಣ್ಣದ ಬನಿಯನ್, ತಿಳಿಹಸಿರು ಬಣ್ಣದ ಬರ್ಮುಡಾ ನಿಕ್ಕರ್, ಸೊಂಟದಲ್ಲಿ ಎರಡು ಎಳೆ ಕೆಂಪನೆಯ ಉಡದಾರ ಇದ್ದು, ಅದರಲ್ಲಿ ಒಂದು ತಾಯತವಿರುತ್ತದೆ.
ಕೊರಳಲ್ಲಿ ಒಂದು ಎಳೆ ಕಪ್ಪನೆಯ ದಾರವಿದ್ದು, ಅದರಲ್ಲಿ ಒಂದು ತಾಯತವಿದ್ದು, ಗಾಜಿನ ಮಣಿಗಳ ರೀತಿಯಲ್ಲಿರುವ ಒಂದು ಸರ ಇರುತ್ತದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ಜಗದೀಶ್.ಆರ್ ಪಿ ಎಸ್ ಐ ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಬೆಂಗಳೂರು ಮೊಬೈಲ್ ಸಂಖ್ಯೆ 948080211 ಹಾಗೂ ಅಶ್ವತ್ಥ್. ಜಿ.ಎನ್ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಹೊರಉಪ ಠಾಣೆ Ph no. 9480802143 ಇವರುಗಳನ್ನು ಸಂಪರ್ಕಿಸಬೇಕಾಗಿ ಕೋರಿದೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…