ತೊಂಡೆಬಾವಿ ಮತ್ತು ಮಾಕಳಿ ದುರ್ಗ ರೈಲು ನಿಲ್ದಾಣಗಳ ಮಾರ್ಗ ಮಧ್ಯೆ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಯಸ್ಸು: ಸುಮಾರು 25 ರಿಂದ 30 ವರ್ಷ ವಯಸ್ಸು ಆಗಿರಬಹುದು ಎಂದು ಅಂದಾಜಿಸಲಾಗಿದೆ. ಮೃತನ ಹೆಸರು ಮತ್ತು ವಾರಸುದಾರರು ಯಾರು ಪತ್ತೆ ಆಗಿರುವುದಿಲ್ಲ.
ಮೃತನ ಚಹರೆ:
ಮೃತರು ಸುಮಾರು 5.5ಅಡಿ ಎತ್ತರ, ಸಾಧಾರಣ ಗೋಧಿ ಮೈ ಬಣ್ಣ, ಕೋಲು ಮುಖ, ಗಿಡ್ಡನೆಯ ಮೂಗು, ತಲೆಯಲ್ಲಿ ಅರ್ಧ ಇಂಚು ಉದ್ದದ ಕಪ್ಪನೆಯ ತಲೆ ಕೂದಲು, ಸಣ್ಣನೆಯ ಗಡ್ಡ ಮೀಸೆ, ಸಾಧಾರಣ ಶರೀರವನ್ನು ಹೊಂದಿರುತ್ತಾರೆ.
ಶವದ ಮೈಮೇಲೆ ಕಡು ಆಕಾಶ ನೀಲಿ ತಿಳಿ ಕೆಂಪು ಬಣ್ಣದ ಉದ್ದ ಮತ್ತು ಅಡ್ಡನೆಯ ಗೆರೆಗಳಿರುವ ಚೌಕಳಿ ಶರ್ಟ್, ಬಿಳಿ ಬಣ್ಣದ ಉದ್ದನೆಯ ಗೆರೆಗಳಿರುವ ಶರ್ಟ್, ಕಂದು ಬಣ್ಣದ ಒಳಚಡ್ಡಿ, ಕಡು ಕಂದು ಬಣ್ಣದ ಬನಿಯನ್, ತಿಳಿಹಸಿರು ಬಣ್ಣದ ಬರ್ಮುಡಾ ನಿಕ್ಕರ್, ಸೊಂಟದಲ್ಲಿ ಎರಡು ಎಳೆ ಕೆಂಪನೆಯ ಉಡದಾರ ಇದ್ದು, ಅದರಲ್ಲಿ ಒಂದು ತಾಯತವಿರುತ್ತದೆ.
ಕೊರಳಲ್ಲಿ ಒಂದು ಎಳೆ ಕಪ್ಪನೆಯ ದಾರವಿದ್ದು, ಅದರಲ್ಲಿ ಒಂದು ತಾಯತವಿದ್ದು, ಗಾಜಿನ ಮಣಿಗಳ ರೀತಿಯಲ್ಲಿರುವ ಒಂದು ಸರ ಇರುತ್ತದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ಜಗದೀಶ್.ಆರ್ ಪಿ ಎಸ್ ಐ ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಬೆಂಗಳೂರು ಮೊಬೈಲ್ ಸಂಖ್ಯೆ 948080211 ಹಾಗೂ ಅಶ್ವತ್ಥ್. ಜಿ.ಎನ್ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಹೊರಉಪ ಠಾಣೆ Ph no. 9480802143 ಇವರುಗಳನ್ನು ಸಂಪರ್ಕಿಸಬೇಕಾಗಿ ಕೋರಿದೆ.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…