ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ ರೈಲು ಹಳಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದು, ಈ ಸಂಬಂಧ ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 114/2026ರಡಿ ಕಲಂ 194 ಬಿಎನ್ಎಸ್ಎಸ್ ಪ್ರಕಾರ ಪ್ರಕರಣ ದಾಖಲಾಗಿದ್ದು, ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.
ಮೃತ ವ್ಯಕ್ತಿಯು ಸುಮಾರು 165 ಸೆಂ.ಮೀ. ಎತ್ತರ, ಎಣ್ಣೆಕೆಂಪು ಮೈಬಣ್ಣ, ಕೋಲುಮುಖ, ಸಣ್ಣನೆಯ ಶರೀರ ಹೊಂದಿದ್ದು, ಕಪ್ಪು ಗಡ್ಡ-ಮೀಸೆ ಹಾಗೂ ತಲೆಯಲ್ಲಿ ಕಪ್ಪು ಕೂದಲು ಹೊಂದಿದ್ದಾರೆ. ಎಡ ಎದೆಯ ಮೇಲೆ “ಅನಿತ” ಎಂಬ ಹೆಸರಿನೊಂದಿಗೆ ಸ್ಟಾರ್ ಗುರುತಿನ ಹಚ್ಚೆ ಇದೆ.
ಮೃತರು ಪಿಂಕ್ ಬಣ್ಣದ ಟಿ-ಶರ್ಟ್ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು.
ಮೃತರ ಗುರುತು ಅಥವಾ ಅವರ ವಾರಸುದಾರರ ಬಗ್ಗೆ ಮಾಹಿತಿ ತಿಳಿದಿರುವವರು ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 9108630967, 9902193960 ಅಥವಾ ರೈಲ್ವೆ ಪಿಎಸ್ಐ 9480802118 ಸಂಪರ್ಕಿಸುವಂತೆ ರೈಲ್ವೆ ಪೊಲೀಸರು ಮನವಿ ಮಾಡಿದ್ದಾರೆ.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…