ರೈಲ್ವೆ ಹಳಿಗಳ ಮೇಲೆ ದುಷ್ಕರ್ಮಿಗಳು ಸೈಜ್ ಕಲ್ಲು ಇಟ್ಟಿದ್ದರಿಂದ ರೈಲಿನ ಮುಂಭಾಗ ಹಾನಿಯಾಗಿದೆ, ಸ್ಥಳಕ್ಕೆ ರೈಲ್ವೇ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಮತ್ತು ವಡ್ಡರಹಳ್ಳಿ ರೈಲ್ವೆ ಸ್ಟೇಷನ್ ನಡುವಿನ ನಂದಿ ಮೋರಿ ಬಳಿ ಘಟನೆ ನಡೆದಿದೆ, ಕಳೆದ ಶನಿವಾರ ಸಂಜೆ 6 ಗಂಟೆ ಸಮಯದಲ್ಲಿ ದುಷ್ಕರ್ಮಿಗಳು ರೈಲ್ವೆ ಹಳಿ ಮೇಲೆ ಸೈಜ್ ಕಲ್ಲು ಇಟ್ಟಿದ್ದಾರೆ, ಇದೇ ಮಾರ್ಗದಲ್ಲಿ ಬಂದ ರೈಲಿಗೆ ಸೈಜ್ ಕಲ್ಲು ತಾಕಿದೆ, ಚಾಲಕ ರೈಲನ್ನು ನಿಲ್ಲಿಸಿ ನೋಡಿದ್ದಾಗ ಕೆಳಗಡೆ ಸೈಜ್ ಕಲ್ಲು ಪತ್ತೆಯಾಗಿದೆ, ಹಳಿಯ ಮೇಲಿದ್ದ ಸೈಜ್ ಕಲ್ಲು ಹೊರ ಹಾಕಿ ರೈಲು ಚಾಲನೆ ಮಾಡಿದ್ದಾನೆ ಚಾಲಕ.
ಸೈಜ್ ಕಲ್ಲಿನಿಂದ ರೈಲಿನ ಮುಂಭಾಗದಲ್ಲಿ ಸಣ್ಣ ಪ್ರಮಾಣದಲ್ಲಿ ಹಾನಿಯಾಗಿದೆ, ಘಟನೆ ಗಂಭೀರತೆ ಅರಿತ ರೈಲ್ವೇ ಪೊಲೀಸ್ ವರಿಷ್ಠಾಧಿಕಾರಿ ಡಾ.ಸೌಮ್ಯಲತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಯಾವ ಕಾರಣಕ್ಕೆ ದುಷ್ಕರ್ಮಿಗಳು ಕಲ್ಲನ್ನು ಇಟ್ಟಿದ್ದಾರೆಂಬ ಮಾಹಿತಿ ಇಲ್ಲ, ಘಟನಾ ಸ್ಥಳದ ಸುತ್ತಮುತ್ತ ಕುಡುಕರು ಎಣ್ಣೆ ಪಾರ್ಟಿ ಮಾಡುತ್ತಾರೆ, ಕುಡುಕರೇ ಸೈಜ್ ಕಲ್ಲು ಇಟ್ಟಿರುವ ಸಂಶಯ ವ್ಯಕ್ತವಾಗಿದೆ. ಘಟನೆಯಿಂದ ಎಚ್ಚೆತ್ತ ರೈಲ್ವೇ ಪೊಲೀಸರು ಈ ಮಾರ್ಗದಲ್ಲಿ ಕಾವಲು ಕಾಯವು ಗ್ಯಾಂಗ್ ಮ್ಯಾನ್ ಗಳ ಸಂಖ್ಯೆಯನ್ನ ಹೆಚ್ಚಿಸಿದ್ದಾರೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…