ರೈಲ್ವೆ ಹಳಿಗಳ ಮೇಲೆ ದುಷ್ಕರ್ಮಿಗಳು ಸೈಜ್ ಕಲ್ಲು ಇಟ್ಟಿದ್ದರಿಂದ ರೈಲಿನ ಮುಂಭಾಗ ಹಾನಿಯಾಗಿದೆ, ಸ್ಥಳಕ್ಕೆ ರೈಲ್ವೇ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಮತ್ತು ವಡ್ಡರಹಳ್ಳಿ ರೈಲ್ವೆ ಸ್ಟೇಷನ್ ನಡುವಿನ ನಂದಿ ಮೋರಿ ಬಳಿ ಘಟನೆ ನಡೆದಿದೆ, ಕಳೆದ ಶನಿವಾರ ಸಂಜೆ 6 ಗಂಟೆ ಸಮಯದಲ್ಲಿ ದುಷ್ಕರ್ಮಿಗಳು ರೈಲ್ವೆ ಹಳಿ ಮೇಲೆ ಸೈಜ್ ಕಲ್ಲು ಇಟ್ಟಿದ್ದಾರೆ, ಇದೇ ಮಾರ್ಗದಲ್ಲಿ ಬಂದ ರೈಲಿಗೆ ಸೈಜ್ ಕಲ್ಲು ತಾಕಿದೆ, ಚಾಲಕ ರೈಲನ್ನು ನಿಲ್ಲಿಸಿ ನೋಡಿದ್ದಾಗ ಕೆಳಗಡೆ ಸೈಜ್ ಕಲ್ಲು ಪತ್ತೆಯಾಗಿದೆ, ಹಳಿಯ ಮೇಲಿದ್ದ ಸೈಜ್ ಕಲ್ಲು ಹೊರ ಹಾಕಿ ರೈಲು ಚಾಲನೆ ಮಾಡಿದ್ದಾನೆ ಚಾಲಕ.
ಸೈಜ್ ಕಲ್ಲಿನಿಂದ ರೈಲಿನ ಮುಂಭಾಗದಲ್ಲಿ ಸಣ್ಣ ಪ್ರಮಾಣದಲ್ಲಿ ಹಾನಿಯಾಗಿದೆ, ಘಟನೆ ಗಂಭೀರತೆ ಅರಿತ ರೈಲ್ವೇ ಪೊಲೀಸ್ ವರಿಷ್ಠಾಧಿಕಾರಿ ಡಾ.ಸೌಮ್ಯಲತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಯಾವ ಕಾರಣಕ್ಕೆ ದುಷ್ಕರ್ಮಿಗಳು ಕಲ್ಲನ್ನು ಇಟ್ಟಿದ್ದಾರೆಂಬ ಮಾಹಿತಿ ಇಲ್ಲ, ಘಟನಾ ಸ್ಥಳದ ಸುತ್ತಮುತ್ತ ಕುಡುಕರು ಎಣ್ಣೆ ಪಾರ್ಟಿ ಮಾಡುತ್ತಾರೆ, ಕುಡುಕರೇ ಸೈಜ್ ಕಲ್ಲು ಇಟ್ಟಿರುವ ಸಂಶಯ ವ್ಯಕ್ತವಾಗಿದೆ. ಘಟನೆಯಿಂದ ಎಚ್ಚೆತ್ತ ರೈಲ್ವೇ ಪೊಲೀಸರು ಈ ಮಾರ್ಗದಲ್ಲಿ ಕಾವಲು ಕಾಯವು ಗ್ಯಾಂಗ್ ಮ್ಯಾನ್ ಗಳ ಸಂಖ್ಯೆಯನ್ನ ಹೆಚ್ಚಿಸಿದ್ದಾರೆ.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…