ರೈಲ್ವೆ ಹಳಿಗಳ ಮೇಲೆ ದುಷ್ಕರ್ಮಿಗಳು ಸೈಜ್ ಕಲ್ಲು ಇಟ್ಟಿದ್ದರಿಂದ ರೈಲಿನ ಮುಂಭಾಗ ಹಾನಿಯಾಗಿದೆ, ಸ್ಥಳಕ್ಕೆ ರೈಲ್ವೇ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಮತ್ತು ವಡ್ಡರಹಳ್ಳಿ ರೈಲ್ವೆ ಸ್ಟೇಷನ್ ನಡುವಿನ ನಂದಿ ಮೋರಿ ಬಳಿ ಘಟನೆ ನಡೆದಿದೆ, ಕಳೆದ ಶನಿವಾರ ಸಂಜೆ 6 ಗಂಟೆ ಸಮಯದಲ್ಲಿ ದುಷ್ಕರ್ಮಿಗಳು ರೈಲ್ವೆ ಹಳಿ ಮೇಲೆ ಸೈಜ್ ಕಲ್ಲು ಇಟ್ಟಿದ್ದಾರೆ, ಇದೇ ಮಾರ್ಗದಲ್ಲಿ ಬಂದ ರೈಲಿಗೆ ಸೈಜ್ ಕಲ್ಲು ತಾಕಿದೆ, ಚಾಲಕ ರೈಲನ್ನು ನಿಲ್ಲಿಸಿ ನೋಡಿದ್ದಾಗ ಕೆಳಗಡೆ ಸೈಜ್ ಕಲ್ಲು ಪತ್ತೆಯಾಗಿದೆ, ಹಳಿಯ ಮೇಲಿದ್ದ ಸೈಜ್ ಕಲ್ಲು ಹೊರ ಹಾಕಿ ರೈಲು ಚಾಲನೆ ಮಾಡಿದ್ದಾನೆ ಚಾಲಕ.
ಸೈಜ್ ಕಲ್ಲಿನಿಂದ ರೈಲಿನ ಮುಂಭಾಗದಲ್ಲಿ ಸಣ್ಣ ಪ್ರಮಾಣದಲ್ಲಿ ಹಾನಿಯಾಗಿದೆ, ಘಟನೆ ಗಂಭೀರತೆ ಅರಿತ ರೈಲ್ವೇ ಪೊಲೀಸ್ ವರಿಷ್ಠಾಧಿಕಾರಿ ಡಾ.ಸೌಮ್ಯಲತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಯಾವ ಕಾರಣಕ್ಕೆ ದುಷ್ಕರ್ಮಿಗಳು ಕಲ್ಲನ್ನು ಇಟ್ಟಿದ್ದಾರೆಂಬ ಮಾಹಿತಿ ಇಲ್ಲ, ಘಟನಾ ಸ್ಥಳದ ಸುತ್ತಮುತ್ತ ಕುಡುಕರು ಎಣ್ಣೆ ಪಾರ್ಟಿ ಮಾಡುತ್ತಾರೆ, ಕುಡುಕರೇ ಸೈಜ್ ಕಲ್ಲು ಇಟ್ಟಿರುವ ಸಂಶಯ ವ್ಯಕ್ತವಾಗಿದೆ. ಘಟನೆಯಿಂದ ಎಚ್ಚೆತ್ತ ರೈಲ್ವೇ ಪೊಲೀಸರು ಈ ಮಾರ್ಗದಲ್ಲಿ ಕಾವಲು ಕಾಯವು ಗ್ಯಾಂಗ್ ಮ್ಯಾನ್ ಗಳ ಸಂಖ್ಯೆಯನ್ನ ಹೆಚ್ಚಿಸಿದ್ದಾರೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…