ರೈಲ್ವೆ ಹಳಿಗಳ ಮೇಲೆ ದುಷ್ಕರ್ಮಿಗಳು ಸೈಜ್ ಕಲ್ಲು ಇಟ್ಟಿದ್ದರಿಂದ ರೈಲಿನ ಮುಂಭಾಗ ಹಾನಿಯಾಗಿದೆ, ಸ್ಥಳಕ್ಕೆ ರೈಲ್ವೇ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಮತ್ತು ವಡ್ಡರಹಳ್ಳಿ ರೈಲ್ವೆ ಸ್ಟೇಷನ್ ನಡುವಿನ ನಂದಿ ಮೋರಿ ಬಳಿ ಘಟನೆ ನಡೆದಿದೆ, ಕಳೆದ ಶನಿವಾರ ಸಂಜೆ 6 ಗಂಟೆ ಸಮಯದಲ್ಲಿ ದುಷ್ಕರ್ಮಿಗಳು ರೈಲ್ವೆ ಹಳಿ ಮೇಲೆ ಸೈಜ್ ಕಲ್ಲು ಇಟ್ಟಿದ್ದಾರೆ, ಇದೇ ಮಾರ್ಗದಲ್ಲಿ ಬಂದ ರೈಲಿಗೆ ಸೈಜ್ ಕಲ್ಲು ತಾಕಿದೆ, ಚಾಲಕ ರೈಲನ್ನು ನಿಲ್ಲಿಸಿ ನೋಡಿದ್ದಾಗ ಕೆಳಗಡೆ ಸೈಜ್ ಕಲ್ಲು ಪತ್ತೆಯಾಗಿದೆ, ಹಳಿಯ ಮೇಲಿದ್ದ ಸೈಜ್ ಕಲ್ಲು ಹೊರ ಹಾಕಿ ರೈಲು ಚಾಲನೆ ಮಾಡಿದ್ದಾನೆ ಚಾಲಕ.
ಸೈಜ್ ಕಲ್ಲಿನಿಂದ ರೈಲಿನ ಮುಂಭಾಗದಲ್ಲಿ ಸಣ್ಣ ಪ್ರಮಾಣದಲ್ಲಿ ಹಾನಿಯಾಗಿದೆ, ಘಟನೆ ಗಂಭೀರತೆ ಅರಿತ ರೈಲ್ವೇ ಪೊಲೀಸ್ ವರಿಷ್ಠಾಧಿಕಾರಿ ಡಾ.ಸೌಮ್ಯಲತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಯಾವ ಕಾರಣಕ್ಕೆ ದುಷ್ಕರ್ಮಿಗಳು ಕಲ್ಲನ್ನು ಇಟ್ಟಿದ್ದಾರೆಂಬ ಮಾಹಿತಿ ಇಲ್ಲ, ಘಟನಾ ಸ್ಥಳದ ಸುತ್ತಮುತ್ತ ಕುಡುಕರು ಎಣ್ಣೆ ಪಾರ್ಟಿ ಮಾಡುತ್ತಾರೆ, ಕುಡುಕರೇ ಸೈಜ್ ಕಲ್ಲು ಇಟ್ಟಿರುವ ಸಂಶಯ ವ್ಯಕ್ತವಾಗಿದೆ. ಘಟನೆಯಿಂದ ಎಚ್ಚೆತ್ತ ರೈಲ್ವೇ ಪೊಲೀಸರು ಈ ಮಾರ್ಗದಲ್ಲಿ ಕಾವಲು ಕಾಯವು ಗ್ಯಾಂಗ್ ಮ್ಯಾನ್ ಗಳ ಸಂಖ್ಯೆಯನ್ನ ಹೆಚ್ಚಿಸಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…