Categories: ಕೋಲಾರ

ರೈಲ್ವೆ ಕೋಚ್ ಕಾರ್ಖಾನೆ ಸ್ಥಾಪನೆಗೆ ಒತ್ತಾಯಿಸಿ ರೈತ ಸಂಘದಿಂದ ಕುಮಾರಸ್ವಾಮಿಗೆ ಮನವಿ

ಕೋಲಾರ: ಸ್ಥಗಿತಗೊಂಡಿರುವ ಜಿಲ್ಲೆಯ ರೈಲ್ವೆ ಕೋಚ್ ಕಾರ್ಖಾನೆಗೆ ಮರುಜೀವ ಕೊಟ್ಟು, ಸ್ಥಳೀಯ ಕಾರ್ಖಾನೆಗಳನ್ನು ರೈತ ಮಕ್ಕಗಳಿಗೆ ಉದ್ಯೋಗ ನೀಡುವ ಕಾನೂನು ಪ್ರಭಲಗೊಳಿಸಬೇಕೆಂದು ರೈತ ಸಂಘದಿಂದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಸುಮಾರು ೧೫ ವರ್ಷಗಳ ಹಿಂದೆ ಕೇಂದ್ರ ಸಚಿವರಾಗಿದ್ದ ಕೆ.ಹೆಚ್.ಮುನಿಯಪ್ಪ ರವರ ಅವಧಿಯಲ್ಲಿ ಶ್ರೀನಿವಾಸಪುರ ವ್ಯಾಪ್ತಿಯಲ್ಲಿ ಶಂಕುಸ್ಥಾಪನೆಗೊಂಡಿರುವ ರೈಲ್ವೆ ಕೋಚ್ ಕಾರ್ಖಾನೆಗೆ ಪೂಜೆಗೆ ಮಾತ್ರ ಸೀಮಿತವಾಗಿ ಇದುವರೆವಿಗೂ ಯಾವುದೇ ಕಾಮಗಾರಿ ಮಾಡದೆ ನಿರ್ಲಕ್ಷೆ ಮಾಡುತ್ತಿರುವ ಕಾರ್ಖಾನೆಗೆ ಕೇಂದ್ರ ಸಚಿವರಾದ ತಾವುಗಳು ಮರು ಜೀವ ಕೊಟ್ಟು ಸ್ಥಳೀಯರಿಗೆ ಉದ್ಯೋಗದ ಅವಕಾಶ ನೀಡಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮನವಿ ಮೂಲಕ ಒತ್ತಾಯಿಸಿದರು.

ಅರಣ್ಯ ಅಧಿಕಾರಿಗಳು ಬಡವರ ಭೂ ಒತ್ತುವರಿಯನ್ನು ತೆರವುಗೊಳಿಸಿ ಬಲಾಡ್ಯರು ರಾಜಕೀಯ ದುರಿಣರು ಮಾಜಿ ಸಭಾಪತಿಗಳಾದ ಕೆ.ಎನ್.ರಮೇಶ್ ಕುಮಾರ್ ರವರು ಒತ್ತುವರಿ ಮಾಡಿಕೊಂಡಿರುವ ೬೫ ಎಕರೆ ಅರಣ್ಯ ಭೂಮಿಯನ್ನು ತೆರವುಗೊಳಿಸಲು ಕೇಂದ್ರ ಸರ್ಕಾರದಿಂದ ಸೂಚನೆ ಮಾಡಿದ್ದರೂ ತಾಂತ್ರಿಕ ದೋಷದ ನೆಪದಲ್ಲಿ ಕಂದಾಯ ಸರ್ವೆ ಅಧಿಕಾರಿಗಳು ರೈತ ವಿರೋಧಿ ದೋರಣೆ ಅನುಸರಿಸುತ್ತಿದ್ದಾರೆ. ಕೂಡಲೇ ಅರಣ್ಯ ಸಚಿವರ ಜೊತೆ ಮಾತನಾಡಿ ಮಾಜಿ ಶಾಸಕರ ಅರಣ್ಯ ಭೂಮಿಯನ್ನು ತೆರವುಗೊಳಿಸಬೇಕು. ಇಲ್ಲವೆ ಒತ್ತುವರಿ ಮಾಡಿಕೊಂಡಿರುವ ಬಡವರ ಭೂಮಿ ಹಿಂದಿರುಗಿಸಲು ಅರಣ್ಯ ಅಧಿಕಾರಿಗಳಿಗೆ ಸೂಚನೆ ಮಾಡಬೇಕೆಂದು ಒತ್ತಾಯಿಸಿದರು.

ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಮಾತನಾಡಿ ಜಿಲ್ಲೆಯ ಬಿ.ಇ.ಎಂ.ಎಲ್. ಕಾರ್ಖಾನೆಯಲ್ಲಿ ಹತ್ತಾರು ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ಕಾರ್ಮಿಕರನ್ನು ಖಾಯಂಗೊಳಿಸಲು ಆಡಳಿತ ಮಂಡಳಿ ವಿಫಲವಾಗಿದೆ. ಗುತ್ತಿಗೆ ಕಾರ್ಮಿಕರನ್ನು ಖಾಯಂ ಗೊಳಿಸುವ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿದರು.

ಜಿಲ್ಲಾದ್ಯಂತ ಕೈಗಾರಿಕಾ ಅಭಿವೃದ್ದಿಗೆ ಭೂಮಿ ಕಳೆದುಕೊಂಡಿರುವ ರೈತ ಮಕ್ಕಳಿಗೆ ಉದ್ಯೋಗ ನೀಡುತ್ತಿಲ್ಲ. ಸ್ಥಳೀಯರ ಉದ್ಯೋಗವನ್ನು ಹೊರರಾಜ್ಯದ ಕಾರ್ಮಿಕರಿಗೆ ಮಾರಾಟಕ್ಕಿಟ್ಟಿದ್ದಾರೆ. ಸ್ಥಳೀಯವಾಗಿರುವ ರೈತ ಮಕ್ಕಳು ಪದವಿಧರರು ಉದ್ಯೋಗಕ್ಕಾಗಿ ಬೆಂಗಳೂರು ಕಡೆ ಮುಖಾ ಮಾಡಬೇಕಾದ ಪರಿಸ್ಥಿತಿ ಇದೆ. ಕೂಡಲೇ ಕೇಂದ್ರ ಸರ್ಕಾರ ಸ್ಥಳೀಯ ರೈತ ಮಕ್ಕಳಿಗೆ ಉದ್ಯೋಗ ನೀಡಲು ಕಾನೂನು ರಚನೆ ಮಾಡಬೇಕೆಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರವರು ರಮೇಶ್ ಕುಮಾರ್ ರವರ ಅರಣ್ಯ ಭೂ ಒತ್ತುವರಿ ಬಗ್ಗೆ ಈಗಾಗಲೇ ಅರಣ್ಯ ಸಚಿವರ ಬಗ್ಗೆ ಚರ್ಚೆ ಮಾಡಿದ್ದೇನೆ. ಜೊತೆಗೆ ರೈಲ್ವೆ ಕೋಚ್ ಕಾರ್ಖಾನೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಕಾರ್ಖಾನೆ ಸ್ಥಾಪನೆ ಮಾಡುವ ಭರವಸೆ ನೀಡುವ ಭರವಸೆಯನ್ನು ನೀಡಿದರು.

ಮನವಿ ನೀಡುವಾಗ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ತಾ.ಅದ್ಯಕ್ಷ ಮೂರಂಡಹಳ್ಳಿ ಶಿವಾರಡ್ಡಿ, ತರ‍್ನಹಳ್ಳಿ ಆಂಜಿನಪ್ಪ, ಪುತ್ತೇರಿ ರಾಜು, ಮಂಗಸಂದ್ರ ತಿಮ್ಮಣ್ಣ ಮುಂತಾದವರು ಇದ್ದರು.

Ramesh Babu

Journalist

Recent Posts

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

5 minutes ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

2 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

2 hours ago

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

9 hours ago

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

19 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

20 hours ago