Categories: ಕೋಲಾರ

ರೈಲ್ವೆ ಕೋಚ್ ಕಾರ್ಖಾನೆ ಸ್ಥಾಪನೆಗೆ ಒತ್ತಾಯಿಸಿ ರೈತ ಸಂಘದಿಂದ ಕುಮಾರಸ್ವಾಮಿಗೆ ಮನವಿ

ಕೋಲಾರ: ಸ್ಥಗಿತಗೊಂಡಿರುವ ಜಿಲ್ಲೆಯ ರೈಲ್ವೆ ಕೋಚ್ ಕಾರ್ಖಾನೆಗೆ ಮರುಜೀವ ಕೊಟ್ಟು, ಸ್ಥಳೀಯ ಕಾರ್ಖಾನೆಗಳನ್ನು ರೈತ ಮಕ್ಕಗಳಿಗೆ ಉದ್ಯೋಗ ನೀಡುವ ಕಾನೂನು ಪ್ರಭಲಗೊಳಿಸಬೇಕೆಂದು ರೈತ ಸಂಘದಿಂದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಸುಮಾರು ೧೫ ವರ್ಷಗಳ ಹಿಂದೆ ಕೇಂದ್ರ ಸಚಿವರಾಗಿದ್ದ ಕೆ.ಹೆಚ್.ಮುನಿಯಪ್ಪ ರವರ ಅವಧಿಯಲ್ಲಿ ಶ್ರೀನಿವಾಸಪುರ ವ್ಯಾಪ್ತಿಯಲ್ಲಿ ಶಂಕುಸ್ಥಾಪನೆಗೊಂಡಿರುವ ರೈಲ್ವೆ ಕೋಚ್ ಕಾರ್ಖಾನೆಗೆ ಪೂಜೆಗೆ ಮಾತ್ರ ಸೀಮಿತವಾಗಿ ಇದುವರೆವಿಗೂ ಯಾವುದೇ ಕಾಮಗಾರಿ ಮಾಡದೆ ನಿರ್ಲಕ್ಷೆ ಮಾಡುತ್ತಿರುವ ಕಾರ್ಖಾನೆಗೆ ಕೇಂದ್ರ ಸಚಿವರಾದ ತಾವುಗಳು ಮರು ಜೀವ ಕೊಟ್ಟು ಸ್ಥಳೀಯರಿಗೆ ಉದ್ಯೋಗದ ಅವಕಾಶ ನೀಡಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮನವಿ ಮೂಲಕ ಒತ್ತಾಯಿಸಿದರು.

ಅರಣ್ಯ ಅಧಿಕಾರಿಗಳು ಬಡವರ ಭೂ ಒತ್ತುವರಿಯನ್ನು ತೆರವುಗೊಳಿಸಿ ಬಲಾಡ್ಯರು ರಾಜಕೀಯ ದುರಿಣರು ಮಾಜಿ ಸಭಾಪತಿಗಳಾದ ಕೆ.ಎನ್.ರಮೇಶ್ ಕುಮಾರ್ ರವರು ಒತ್ತುವರಿ ಮಾಡಿಕೊಂಡಿರುವ ೬೫ ಎಕರೆ ಅರಣ್ಯ ಭೂಮಿಯನ್ನು ತೆರವುಗೊಳಿಸಲು ಕೇಂದ್ರ ಸರ್ಕಾರದಿಂದ ಸೂಚನೆ ಮಾಡಿದ್ದರೂ ತಾಂತ್ರಿಕ ದೋಷದ ನೆಪದಲ್ಲಿ ಕಂದಾಯ ಸರ್ವೆ ಅಧಿಕಾರಿಗಳು ರೈತ ವಿರೋಧಿ ದೋರಣೆ ಅನುಸರಿಸುತ್ತಿದ್ದಾರೆ. ಕೂಡಲೇ ಅರಣ್ಯ ಸಚಿವರ ಜೊತೆ ಮಾತನಾಡಿ ಮಾಜಿ ಶಾಸಕರ ಅರಣ್ಯ ಭೂಮಿಯನ್ನು ತೆರವುಗೊಳಿಸಬೇಕು. ಇಲ್ಲವೆ ಒತ್ತುವರಿ ಮಾಡಿಕೊಂಡಿರುವ ಬಡವರ ಭೂಮಿ ಹಿಂದಿರುಗಿಸಲು ಅರಣ್ಯ ಅಧಿಕಾರಿಗಳಿಗೆ ಸೂಚನೆ ಮಾಡಬೇಕೆಂದು ಒತ್ತಾಯಿಸಿದರು.

ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಮಾತನಾಡಿ ಜಿಲ್ಲೆಯ ಬಿ.ಇ.ಎಂ.ಎಲ್. ಕಾರ್ಖಾನೆಯಲ್ಲಿ ಹತ್ತಾರು ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ಕಾರ್ಮಿಕರನ್ನು ಖಾಯಂಗೊಳಿಸಲು ಆಡಳಿತ ಮಂಡಳಿ ವಿಫಲವಾಗಿದೆ. ಗುತ್ತಿಗೆ ಕಾರ್ಮಿಕರನ್ನು ಖಾಯಂ ಗೊಳಿಸುವ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿದರು.

ಜಿಲ್ಲಾದ್ಯಂತ ಕೈಗಾರಿಕಾ ಅಭಿವೃದ್ದಿಗೆ ಭೂಮಿ ಕಳೆದುಕೊಂಡಿರುವ ರೈತ ಮಕ್ಕಳಿಗೆ ಉದ್ಯೋಗ ನೀಡುತ್ತಿಲ್ಲ. ಸ್ಥಳೀಯರ ಉದ್ಯೋಗವನ್ನು ಹೊರರಾಜ್ಯದ ಕಾರ್ಮಿಕರಿಗೆ ಮಾರಾಟಕ್ಕಿಟ್ಟಿದ್ದಾರೆ. ಸ್ಥಳೀಯವಾಗಿರುವ ರೈತ ಮಕ್ಕಳು ಪದವಿಧರರು ಉದ್ಯೋಗಕ್ಕಾಗಿ ಬೆಂಗಳೂರು ಕಡೆ ಮುಖಾ ಮಾಡಬೇಕಾದ ಪರಿಸ್ಥಿತಿ ಇದೆ. ಕೂಡಲೇ ಕೇಂದ್ರ ಸರ್ಕಾರ ಸ್ಥಳೀಯ ರೈತ ಮಕ್ಕಳಿಗೆ ಉದ್ಯೋಗ ನೀಡಲು ಕಾನೂನು ರಚನೆ ಮಾಡಬೇಕೆಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರವರು ರಮೇಶ್ ಕುಮಾರ್ ರವರ ಅರಣ್ಯ ಭೂ ಒತ್ತುವರಿ ಬಗ್ಗೆ ಈಗಾಗಲೇ ಅರಣ್ಯ ಸಚಿವರ ಬಗ್ಗೆ ಚರ್ಚೆ ಮಾಡಿದ್ದೇನೆ. ಜೊತೆಗೆ ರೈಲ್ವೆ ಕೋಚ್ ಕಾರ್ಖಾನೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಕಾರ್ಖಾನೆ ಸ್ಥಾಪನೆ ಮಾಡುವ ಭರವಸೆ ನೀಡುವ ಭರವಸೆಯನ್ನು ನೀಡಿದರು.

ಮನವಿ ನೀಡುವಾಗ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ತಾ.ಅದ್ಯಕ್ಷ ಮೂರಂಡಹಳ್ಳಿ ಶಿವಾರಡ್ಡಿ, ತರ‍್ನಹಳ್ಳಿ ಆಂಜಿನಪ್ಪ, ಪುತ್ತೇರಿ ರಾಜು, ಮಂಗಸಂದ್ರ ತಿಮ್ಮಣ್ಣ ಮುಂತಾದವರು ಇದ್ದರು.

Ramesh Babu

Journalist

Recent Posts

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

1 hour ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

5 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

7 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

9 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

1 day ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago