Categories: ಕೋಲಾರ

ರೈಲ್ವೆ ಕೋಚ್ ಕಾರ್ಖಾನೆ ಸ್ಥಾಪನೆಗೆ ಒತ್ತಾಯಿಸಿ ರೈತ ಸಂಘದಿಂದ ಕುಮಾರಸ್ವಾಮಿಗೆ ಮನವಿ

ಕೋಲಾರ: ಸ್ಥಗಿತಗೊಂಡಿರುವ ಜಿಲ್ಲೆಯ ರೈಲ್ವೆ ಕೋಚ್ ಕಾರ್ಖಾನೆಗೆ ಮರುಜೀವ ಕೊಟ್ಟು, ಸ್ಥಳೀಯ ಕಾರ್ಖಾನೆಗಳನ್ನು ರೈತ ಮಕ್ಕಗಳಿಗೆ ಉದ್ಯೋಗ ನೀಡುವ ಕಾನೂನು ಪ್ರಭಲಗೊಳಿಸಬೇಕೆಂದು ರೈತ ಸಂಘದಿಂದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಸುಮಾರು ೧೫ ವರ್ಷಗಳ ಹಿಂದೆ ಕೇಂದ್ರ ಸಚಿವರಾಗಿದ್ದ ಕೆ.ಹೆಚ್.ಮುನಿಯಪ್ಪ ರವರ ಅವಧಿಯಲ್ಲಿ ಶ್ರೀನಿವಾಸಪುರ ವ್ಯಾಪ್ತಿಯಲ್ಲಿ ಶಂಕುಸ್ಥಾಪನೆಗೊಂಡಿರುವ ರೈಲ್ವೆ ಕೋಚ್ ಕಾರ್ಖಾನೆಗೆ ಪೂಜೆಗೆ ಮಾತ್ರ ಸೀಮಿತವಾಗಿ ಇದುವರೆವಿಗೂ ಯಾವುದೇ ಕಾಮಗಾರಿ ಮಾಡದೆ ನಿರ್ಲಕ್ಷೆ ಮಾಡುತ್ತಿರುವ ಕಾರ್ಖಾನೆಗೆ ಕೇಂದ್ರ ಸಚಿವರಾದ ತಾವುಗಳು ಮರು ಜೀವ ಕೊಟ್ಟು ಸ್ಥಳೀಯರಿಗೆ ಉದ್ಯೋಗದ ಅವಕಾಶ ನೀಡಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮನವಿ ಮೂಲಕ ಒತ್ತಾಯಿಸಿದರು.

ಅರಣ್ಯ ಅಧಿಕಾರಿಗಳು ಬಡವರ ಭೂ ಒತ್ತುವರಿಯನ್ನು ತೆರವುಗೊಳಿಸಿ ಬಲಾಡ್ಯರು ರಾಜಕೀಯ ದುರಿಣರು ಮಾಜಿ ಸಭಾಪತಿಗಳಾದ ಕೆ.ಎನ್.ರಮೇಶ್ ಕುಮಾರ್ ರವರು ಒತ್ತುವರಿ ಮಾಡಿಕೊಂಡಿರುವ ೬೫ ಎಕರೆ ಅರಣ್ಯ ಭೂಮಿಯನ್ನು ತೆರವುಗೊಳಿಸಲು ಕೇಂದ್ರ ಸರ್ಕಾರದಿಂದ ಸೂಚನೆ ಮಾಡಿದ್ದರೂ ತಾಂತ್ರಿಕ ದೋಷದ ನೆಪದಲ್ಲಿ ಕಂದಾಯ ಸರ್ವೆ ಅಧಿಕಾರಿಗಳು ರೈತ ವಿರೋಧಿ ದೋರಣೆ ಅನುಸರಿಸುತ್ತಿದ್ದಾರೆ. ಕೂಡಲೇ ಅರಣ್ಯ ಸಚಿವರ ಜೊತೆ ಮಾತನಾಡಿ ಮಾಜಿ ಶಾಸಕರ ಅರಣ್ಯ ಭೂಮಿಯನ್ನು ತೆರವುಗೊಳಿಸಬೇಕು. ಇಲ್ಲವೆ ಒತ್ತುವರಿ ಮಾಡಿಕೊಂಡಿರುವ ಬಡವರ ಭೂಮಿ ಹಿಂದಿರುಗಿಸಲು ಅರಣ್ಯ ಅಧಿಕಾರಿಗಳಿಗೆ ಸೂಚನೆ ಮಾಡಬೇಕೆಂದು ಒತ್ತಾಯಿಸಿದರು.

ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಮಾತನಾಡಿ ಜಿಲ್ಲೆಯ ಬಿ.ಇ.ಎಂ.ಎಲ್. ಕಾರ್ಖಾನೆಯಲ್ಲಿ ಹತ್ತಾರು ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ಕಾರ್ಮಿಕರನ್ನು ಖಾಯಂಗೊಳಿಸಲು ಆಡಳಿತ ಮಂಡಳಿ ವಿಫಲವಾಗಿದೆ. ಗುತ್ತಿಗೆ ಕಾರ್ಮಿಕರನ್ನು ಖಾಯಂ ಗೊಳಿಸುವ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿದರು.

ಜಿಲ್ಲಾದ್ಯಂತ ಕೈಗಾರಿಕಾ ಅಭಿವೃದ್ದಿಗೆ ಭೂಮಿ ಕಳೆದುಕೊಂಡಿರುವ ರೈತ ಮಕ್ಕಳಿಗೆ ಉದ್ಯೋಗ ನೀಡುತ್ತಿಲ್ಲ. ಸ್ಥಳೀಯರ ಉದ್ಯೋಗವನ್ನು ಹೊರರಾಜ್ಯದ ಕಾರ್ಮಿಕರಿಗೆ ಮಾರಾಟಕ್ಕಿಟ್ಟಿದ್ದಾರೆ. ಸ್ಥಳೀಯವಾಗಿರುವ ರೈತ ಮಕ್ಕಳು ಪದವಿಧರರು ಉದ್ಯೋಗಕ್ಕಾಗಿ ಬೆಂಗಳೂರು ಕಡೆ ಮುಖಾ ಮಾಡಬೇಕಾದ ಪರಿಸ್ಥಿತಿ ಇದೆ. ಕೂಡಲೇ ಕೇಂದ್ರ ಸರ್ಕಾರ ಸ್ಥಳೀಯ ರೈತ ಮಕ್ಕಳಿಗೆ ಉದ್ಯೋಗ ನೀಡಲು ಕಾನೂನು ರಚನೆ ಮಾಡಬೇಕೆಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರವರು ರಮೇಶ್ ಕುಮಾರ್ ರವರ ಅರಣ್ಯ ಭೂ ಒತ್ತುವರಿ ಬಗ್ಗೆ ಈಗಾಗಲೇ ಅರಣ್ಯ ಸಚಿವರ ಬಗ್ಗೆ ಚರ್ಚೆ ಮಾಡಿದ್ದೇನೆ. ಜೊತೆಗೆ ರೈಲ್ವೆ ಕೋಚ್ ಕಾರ್ಖಾನೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಕಾರ್ಖಾನೆ ಸ್ಥಾಪನೆ ಮಾಡುವ ಭರವಸೆ ನೀಡುವ ಭರವಸೆಯನ್ನು ನೀಡಿದರು.

ಮನವಿ ನೀಡುವಾಗ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ತಾ.ಅದ್ಯಕ್ಷ ಮೂರಂಡಹಳ್ಳಿ ಶಿವಾರಡ್ಡಿ, ತರ‍್ನಹಳ್ಳಿ ಆಂಜಿನಪ್ಪ, ಪುತ್ತೇರಿ ರಾಜು, ಮಂಗಸಂದ್ರ ತಿಮ್ಮಣ್ಣ ಮುಂತಾದವರು ಇದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

11 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

20 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

21 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago