ರೈಲ್ವೆ ನಿಲ್ದಾಣ ಸಮೀಪ ಎರಡು ಎಕರೆ ವಿಸ್ತೀರ್ಣದಲ್ಲಿ ಸಂಚಾರಿ ಠಾಣೆ ನಿರ್ಮಿಸಲು ತೀರ್ಮಾನ: ಸ್ಥಳ ಪರಿಶೀಲಿಸಿದ ಡಿಸಿ, ಎಸ್ಪಿ, ಡಿವೈಎಸ್‌ಪಿ, ತಹಶೀಲ್ದಾರ್

ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಬೇಕೆಂದು ಸಾರ್ವಜನಿಕರ ಒತ್ತಾಯ ಮಾಡಿದ್ದರು ಈ ಕುರಿತು “ಪಬ್ಲಿಕ್ ಮಿರ್ಚಿ” ವರದಿ ಮಾಡಿತ್ತು, “ಪಬ್ಲಿಕ್ ಮಿರ್ಚಿ” ವರದಿ ಬೆನ್ನಲ್ಲೇ ಶಾಸಕ ಧೀರಜ್ ಮುನಿರಾಜ್ ಅವರು ಸದನದಲ್ಲಿ ಈ ಕುರಿತು ಪ್ರಸ್ತಾಪಿಸಿ ಗೃಹ ಸಚಿವ ಡಾ.ಪರಮೇಶ್ವರ್ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆ ಅತೀ ಶೀಘ್ರವಾಗಿ ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಾಡಿಕೊಡಲಾಗುವುದು ಎಂದು ಭರವಸೆ ನೀಡುತ್ತೇನೆ. ಇದರ ಬಗ್ಗೆ ಪ್ರಸ್ತಾವನೆ ನೀಡಲು ತಿಳಿಸಿದ್ದೇವೆ ಎಂದು ಗೃಹ ಸಚಿವ ಡಾ.ಪರಮೇಶ್ವರ್ ಅವರು ಭರವಸೆ ನೀಡಿದ್ದರು.

ದೊಡ್ಡಬಳ್ಳಾಪುರ ನಗರದ ರೈಲ್ವೆ ನಿಲ್ದಾಣ ಸಮೀಪ ಬೆಂಗಳೂರು ರಾಜ್ಯ ಹೆದ್ದಾರಿಯ ಬದಿಯಲ್ಲಿ ದೊಡ್ಡಬಳ್ಳಾಪುರ ನಗರ ಸಂಚಾರ ಪೊಲೀಸ್ ಠಾಣೆ ಮತ್ತು ಪೊಲೀಸ್ ಕವಾಯತು ಮೈದಾನಕ್ಕಾಗಿ ಮೀಸಲಿಟ್ಟಿರುವ 2 ಎಕರೆ 17 ಗುಂಟೆ ಸ್ಥಳಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಡಿವೈಎಸ್ ಪಿ ರವಿ ಪಿ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳ ಪರಿಶೀಲನೆ ನಂತರ “ಪಬ್ಲಿಕ್ ಮಿರ್ಚಿ” ನ್ಯೂಸ್ ವೆಬ್ ಸೈಟ್ ನೊಂದಿಗೆ ಮಾತನಾಡಿದ ಪೊಲೀಸ್ ಅಧೀಕ್ಷಕ ಸಿ.ಕೆ.ಬಾಬಾ, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ರಾಜ್ಯ‌‌ ಹಾಗೂ ರಾಷ್ಟ್ರೀಯ ಹೆದ್ದಾರಿ ಹಾದುಹೋಗಿದ್ದು, ಇಲ್ಲಿ ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿವೆ. ಅದೇರೀತಿ ಏಷ್ಯಾದ ಎರಡನೇ ಅತಿದೊಡ್ಡ ಕೈಗಾರಿಕ ಪ್ರದೇಶವಿದೆ. ಇಲ್ಲಿನ ಕಾರ್ಖಾನೆಗಳಿಗೆ ಲಕ್ಷಾಂತರ ಜನ ದೂರದ ಊರುಗಳಿಂದ ಕಾರ್ಮಿಕರು ಬರುತ್ತಾರೆ. ಈ ಹಿನ್ನೆಲೆ ಇಲ್ಲಿ ಸಂಚಾರ ದಟ್ಟಣೆಯೂ ಸಹ ಹೆಚ್ಚಾಗಿದೆ. ಆದ್ದರಿಂದ ಅಪಘಾತ‌ ಹಾಗೂ ಸಂಚಾರ ದಟ್ಟಣೆ ನಿಯಂತ್ರಿಸಲು ದೊಡ್ಡಬಳ್ಳಾಪುರಕ್ಕೆ ಸಂಚಾರಿ ಠಾಣೆ ಅತ್ಯವಶ್ಯಕವಾಗಿ ಬೇಕು ಬೇಕು ಎಂದು ಹೇಳಿದರು.

2025-26ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಸಂಚಾರ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಆರ್ಥಿಕ ನೆರವು ನೀಡುವ ಕುರಿತು ಪ್ರಸ್ತಾಪಿಸಲಾಗಿದೆ.

Ramesh Babu

Journalist

Recent Posts

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

41 minutes ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

1 hour ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

7 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

8 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

12 hours ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

13 hours ago