ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಬೇಕೆಂದು ಸಾರ್ವಜನಿಕರ ಒತ್ತಾಯ ಮಾಡಿದ್ದರು ಈ ಕುರಿತು “ಪಬ್ಲಿಕ್ ಮಿರ್ಚಿ” ವರದಿ ಮಾಡಿತ್ತು, “ಪಬ್ಲಿಕ್ ಮಿರ್ಚಿ” ವರದಿ ಬೆನ್ನಲ್ಲೇ ಶಾಸಕ ಧೀರಜ್ ಮುನಿರಾಜ್ ಅವರು ಸದನದಲ್ಲಿ ಈ ಕುರಿತು ಪ್ರಸ್ತಾಪಿಸಿ ಗೃಹ ಸಚಿವ ಡಾ.ಪರಮೇಶ್ವರ್ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆ ಅತೀ ಶೀಘ್ರವಾಗಿ ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಾಡಿಕೊಡಲಾಗುವುದು ಎಂದು ಭರವಸೆ ನೀಡುತ್ತೇನೆ. ಇದರ ಬಗ್ಗೆ ಪ್ರಸ್ತಾವನೆ ನೀಡಲು ತಿಳಿಸಿದ್ದೇವೆ ಎಂದು ಗೃಹ ಸಚಿವ ಡಾ.ಪರಮೇಶ್ವರ್ ಅವರು ಭರವಸೆ ನೀಡಿದ್ದರು.
ದೊಡ್ಡಬಳ್ಳಾಪುರ ನಗರದ ರೈಲ್ವೆ ನಿಲ್ದಾಣ ಸಮೀಪ ಬೆಂಗಳೂರು ರಾಜ್ಯ ಹೆದ್ದಾರಿಯ ಬದಿಯಲ್ಲಿ ದೊಡ್ಡಬಳ್ಳಾಪುರ ನಗರ ಸಂಚಾರ ಪೊಲೀಸ್ ಠಾಣೆ ಮತ್ತು ಪೊಲೀಸ್ ಕವಾಯತು ಮೈದಾನಕ್ಕಾಗಿ ಮೀಸಲಿಟ್ಟಿರುವ 2 ಎಕರೆ 17 ಗುಂಟೆ ಸ್ಥಳಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಡಿವೈಎಸ್ ಪಿ ರವಿ ಪಿ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ಥಳ ಪರಿಶೀಲನೆ ನಂತರ “ಪಬ್ಲಿಕ್ ಮಿರ್ಚಿ” ನ್ಯೂಸ್ ವೆಬ್ ಸೈಟ್ ನೊಂದಿಗೆ ಮಾತನಾಡಿದ ಪೊಲೀಸ್ ಅಧೀಕ್ಷಕ ಸಿ.ಕೆ.ಬಾಬಾ, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಹಾದುಹೋಗಿದ್ದು, ಇಲ್ಲಿ ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿವೆ. ಅದೇರೀತಿ ಏಷ್ಯಾದ ಎರಡನೇ ಅತಿದೊಡ್ಡ ಕೈಗಾರಿಕ ಪ್ರದೇಶವಿದೆ. ಇಲ್ಲಿನ ಕಾರ್ಖಾನೆಗಳಿಗೆ ಲಕ್ಷಾಂತರ ಜನ ದೂರದ ಊರುಗಳಿಂದ ಕಾರ್ಮಿಕರು ಬರುತ್ತಾರೆ. ಈ ಹಿನ್ನೆಲೆ ಇಲ್ಲಿ ಸಂಚಾರ ದಟ್ಟಣೆಯೂ ಸಹ ಹೆಚ್ಚಾಗಿದೆ. ಆದ್ದರಿಂದ ಅಪಘಾತ ಹಾಗೂ ಸಂಚಾರ ದಟ್ಟಣೆ ನಿಯಂತ್ರಿಸಲು ದೊಡ್ಡಬಳ್ಳಾಪುರಕ್ಕೆ ಸಂಚಾರಿ ಠಾಣೆ ಅತ್ಯವಶ್ಯಕವಾಗಿ ಬೇಕು ಬೇಕು ಎಂದು ಹೇಳಿದರು.
2025-26ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಸಂಚಾರ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಆರ್ಥಿಕ ನೆರವು ನೀಡುವ ಕುರಿತು ಪ್ರಸ್ತಾಪಿಸಲಾಗಿದೆ.
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…