ದೊಡ್ಡಬಳ್ಳಾಪುರ ಮತ್ತು ಚಂದಾಪುರಕ್ಕೆ ಶೀಘ್ರವಾಗಿ ಟ್ರಾಫಿಲ್ ಪೊಲೀಸ್ ಸ್ಟೇಷನ್ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ತಿಳಿಸಿದರು.
ನಗರದ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಅಸ್ಟಿಮೋ ಫೈ ಪ್ರೈವೆಟ್ ಲಿಮಿಟೆಡ್ ಕಂಪನಿಯ ಸಿಎಸ್ಆರ್ ನಿಧಿಯಡಿ ಪೊಲೀಸ್ ಇಲಾಖೆ ವತಿಯಿಂದ ಸಿಗ್ನಲ್ ದೀಪ ಮತ್ತು ಆತ್ಯಾಧುನಿಕ ಸಿಸಿಟಿವಿಗೆ ಚಾಲನೆ ನೀಡಿ, ಬಳಿಕ ಅವರು ಮಾತನಾಡಿದರು.
ಸಿಗ್ನಲ್ ದೀಪ ಮತ್ತು ಸಿಸಿಟಿವಿಯ ಅಳವಡಿಕೆಯಿಂದ ಟ್ರಾಫಿಕ್ ನಿರ್ವಹಣೆಗೆ ಅನುಕೂಲವಾಗುತ್ತದೆ. ಈ ಭಾಗದಲ್ಲಿ ಅಪಘಾತಗಳು, ಹಿಟ್ ಅಂಡ್ ರನ್ ಸಂಖ್ಯೆ ಅಧಿಕವಾಗಿತ್ತು ಈ ಸಿಸಿಟಿವಿಗಳಿಂದ ಅಪಘಾತ ಪ್ರಕರಣಗಳ ಪತ್ತೆಗೂ ಸಹಕರಿಯಾಗಲಿದೆ. ಮುಂದಿನ ದಿನಗಳಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಪ್ರಮುಖ ವೃತ್ತ, ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಕ್ರಮವಹಿಸಲಾಗಿದೆ. ಎಂದರು.
ನಗರಸಭಾ ಉಪಾಧ್ಯಕ್ಷ ಮಲ್ಲೇಶ್ ಮಾತನಾಡಿ ಇಲ್ಲಿನ ಜನರ ಬೇಡಿಕೆ ಮತ್ತು ಪೊಲೀಸ್ ಇಲಾಖೆಯ ಸಹಭಾಗಿತ್ವದಲ್ಲಿ ಉತ್ತಮವಾಗಿ ನಿರ್ವಹಣೆ ಮಾಡಲಾಗುವುದು ಎಂದರು.
ಡಿವೈಎಸ್ಪಿ ಪಾಂಡುರಂಗ, ನಗರಸಭೆ ಅಧ್ಯಕ್ಷೆ ಸುಮಿತ್ರಾ, ಉಪಾಧ್ಯಕ್ಷ ಮಲ್ಲೇಶ್, ಅಸ್ಟಿಮೋ ಫೈ ಪ್ರೈವೆಟ್ ಲಿಮಿಟೆಡ್ ಕಂಪನಿಯ ಪ್ಲಾಂಟ್ ಜನರಲ್ ವಿನಾಯಕ ಹೆಗಡೆ, ಸಿನಿಯರ್ ಮ್ಯಾನೇಜರ್ ಪ್ರಕಾಶ್, ಮ್ಯಾನೇಜರ್ ಪ್ರದೀಪ, ಎಚ್.ಆರ್ ಮನೋಹರ್, ಇನ್ಸ್ಪೆಕ್ಟರ್ ಗಳಾದ ಅಮರೇಶ್ ಗೌಡ, ಕಲ್ಲಪ್ಪ ಇದ್ದರು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…