ದೊಡ್ಡಬಳ್ಳಾಪುರ ಮತ್ತು ಚಂದಾಪುರಕ್ಕೆ ಶೀಘ್ರವಾಗಿ ಟ್ರಾಫಿಲ್ ಪೊಲೀಸ್ ಸ್ಟೇಷನ್ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ತಿಳಿಸಿದರು.
ನಗರದ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಅಸ್ಟಿಮೋ ಫೈ ಪ್ರೈವೆಟ್ ಲಿಮಿಟೆಡ್ ಕಂಪನಿಯ ಸಿಎಸ್ಆರ್ ನಿಧಿಯಡಿ ಪೊಲೀಸ್ ಇಲಾಖೆ ವತಿಯಿಂದ ಸಿಗ್ನಲ್ ದೀಪ ಮತ್ತು ಆತ್ಯಾಧುನಿಕ ಸಿಸಿಟಿವಿಗೆ ಚಾಲನೆ ನೀಡಿ, ಬಳಿಕ ಅವರು ಮಾತನಾಡಿದರು.
ಸಿಗ್ನಲ್ ದೀಪ ಮತ್ತು ಸಿಸಿಟಿವಿಯ ಅಳವಡಿಕೆಯಿಂದ ಟ್ರಾಫಿಕ್ ನಿರ್ವಹಣೆಗೆ ಅನುಕೂಲವಾಗುತ್ತದೆ. ಈ ಭಾಗದಲ್ಲಿ ಅಪಘಾತಗಳು, ಹಿಟ್ ಅಂಡ್ ರನ್ ಸಂಖ್ಯೆ ಅಧಿಕವಾಗಿತ್ತು ಈ ಸಿಸಿಟಿವಿಗಳಿಂದ ಅಪಘಾತ ಪ್ರಕರಣಗಳ ಪತ್ತೆಗೂ ಸಹಕರಿಯಾಗಲಿದೆ. ಮುಂದಿನ ದಿನಗಳಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಪ್ರಮುಖ ವೃತ್ತ, ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಕ್ರಮವಹಿಸಲಾಗಿದೆ. ಎಂದರು.
ನಗರಸಭಾ ಉಪಾಧ್ಯಕ್ಷ ಮಲ್ಲೇಶ್ ಮಾತನಾಡಿ ಇಲ್ಲಿನ ಜನರ ಬೇಡಿಕೆ ಮತ್ತು ಪೊಲೀಸ್ ಇಲಾಖೆಯ ಸಹಭಾಗಿತ್ವದಲ್ಲಿ ಉತ್ತಮವಾಗಿ ನಿರ್ವಹಣೆ ಮಾಡಲಾಗುವುದು ಎಂದರು.
ಡಿವೈಎಸ್ಪಿ ಪಾಂಡುರಂಗ, ನಗರಸಭೆ ಅಧ್ಯಕ್ಷೆ ಸುಮಿತ್ರಾ, ಉಪಾಧ್ಯಕ್ಷ ಮಲ್ಲೇಶ್, ಅಸ್ಟಿಮೋ ಫೈ ಪ್ರೈವೆಟ್ ಲಿಮಿಟೆಡ್ ಕಂಪನಿಯ ಪ್ಲಾಂಟ್ ಜನರಲ್ ವಿನಾಯಕ ಹೆಗಡೆ, ಸಿನಿಯರ್ ಮ್ಯಾನೇಜರ್ ಪ್ರಕಾಶ್, ಮ್ಯಾನೇಜರ್ ಪ್ರದೀಪ, ಎಚ್.ಆರ್ ಮನೋಹರ್, ಇನ್ಸ್ಪೆಕ್ಟರ್ ಗಳಾದ ಅಮರೇಶ್ ಗೌಡ, ಕಲ್ಲಪ್ಪ ಇದ್ದರು.
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...
ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…
ಜಾತ್ರೆ ನಡೆದ ಮರು ದಿನವೇ ಲಕ್ಷ್ಮೀ ದೇವಾಲಯದಲ್ಲಿ ಕಳ್ಳತನ ನಡೆದಿರುವ ಘಟನೆ ದೊಡ್ಡಬಳ್ಳಾಪುರದ ಹಾದ್ರೀಪುರ ಗ್ರಾಮದಲ್ಲಿ ನಡೆದಿದೆ... ದೇವಾಲಯದ ಬಾಗಿಲು…
ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಉದ್ದೇಶದಿಂದ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ…
ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…
ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…