ರೈಲ್ವೆ ಸ್ಟೇಷನ್ ವೃತ್ತಕ್ಕೆ ಸಿಗ್ನಲ್ ದೀಪ, ಸಿಸಿಟಿವಿಗೆ ಚಾಲನೆ: ದೊಡ್ಡಬಳ್ಳಾಪುರಕ್ಕೆ ಟ್ರಾಫಿಕ್ ಪೊಲೀಸ್ ಸ್ಟೇಷನ್ ಗೆ ಪ್ರಸ್ತಾವನೆ- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್

ದೊಡ್ಡಬಳ್ಳಾಪುರ ಮತ್ತು ಚಂದಾಪುರಕ್ಕೆ ಶೀಘ್ರವಾಗಿ ಟ್ರಾಫಿಲ್ ಪೊಲೀಸ್ ಸ್ಟೇಷನ್ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ತಿಳಿಸಿದರು.

ನಗರದ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಅಸ್ಟಿಮೋ ಫೈ ಪ್ರೈವೆಟ್ ಲಿಮಿಟೆಡ್ ಕಂಪನಿಯ ಸಿಎಸ್ಆರ್ ನಿಧಿಯಡಿ ಪೊಲೀಸ್ ಇಲಾಖೆ ವತಿಯಿಂದ ಸಿಗ್ನಲ್ ದೀಪ ಮತ್ತು ಆತ್ಯಾಧುನಿಕ ಸಿಸಿಟಿವಿಗೆ ಚಾಲನೆ ನೀಡಿ, ಬಳಿಕ ಅವರು ಮಾತನಾಡಿದರು.

ಸಿಗ್ನಲ್ ದೀಪ ಮತ್ತು ಸಿಸಿಟಿವಿಯ ಅಳವಡಿಕೆಯಿಂದ ಟ್ರಾಫಿಕ್ ನಿರ್ವಹಣೆಗೆ ಅನುಕೂಲವಾಗುತ್ತದೆ. ಈ ಭಾಗದಲ್ಲಿ ಅಪಘಾತಗಳು, ಹಿಟ್ ಅಂಡ್ ರನ್ ಸಂಖ್ಯೆ ಅಧಿಕವಾಗಿತ್ತು ಈ ಸಿಸಿಟಿವಿಗಳಿಂದ ಅಪಘಾತ ಪ್ರಕರಣಗಳ ಪತ್ತೆಗೂ ಸಹಕರಿಯಾಗಲಿದೆ. ಮುಂದಿನ ದಿನಗಳಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಪ್ರಮುಖ ವೃತ್ತ, ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಕ್ರಮವಹಿಸಲಾಗಿದೆ. ಎಂದರು.

ನಗರಸಭಾ ಉಪಾಧ್ಯಕ್ಷ ಮಲ್ಲೇಶ್ ಮಾತನಾಡಿ ಇಲ್ಲಿನ ಜನರ ಬೇಡಿಕೆ ಮತ್ತು ಪೊಲೀಸ್ ಇಲಾಖೆಯ ಸಹಭಾಗಿತ್ವದಲ್ಲಿ ಉತ್ತಮವಾಗಿ ನಿರ್ವಹಣೆ ಮಾಡಲಾಗುವುದು ಎಂದರು.

ಡಿವೈಎಸ್ಪಿ ಪಾಂಡುರಂಗ, ನಗರಸಭೆ ಅಧ್ಯಕ್ಷೆ ಸುಮಿತ್ರಾ, ಉಪಾಧ್ಯಕ್ಷ ಮಲ್ಲೇಶ್, ಅಸ್ಟಿಮೋ ಫೈ ಪ್ರೈವೆಟ್ ಲಿಮಿಟೆಡ್ ಕಂಪನಿಯ ಪ್ಲಾಂಟ್ ಜನರಲ್ ವಿನಾಯಕ ಹೆಗಡೆ, ಸಿನಿಯರ್ ಮ್ಯಾನೇಜರ್ ಪ್ರಕಾಶ್, ಮ್ಯಾನೇಜರ್ ಪ್ರದೀಪ, ಎಚ್.ಆರ್ ಮನೋಹರ್, ಇನ್ಸ್ಪೆಕ್ಟರ್ ಗಳಾದ ಅಮರೇಶ್ ಗೌಡ, ಕಲ್ಲಪ್ಪ ಇದ್ದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

9 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

10 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

16 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago