ರೊಬೋಟಿಕ್ ಶಸ್ತ್ರಚಿಕಿತ್ಸೆ ಮಹಿಳೆಯರಿಗಾಗಿ ನವ ಆಶಾ ಕಿರಣ: ಡಾ. ಸಭಿಹಾ

ಬೆಂಗಳೂರು, ವೈಟ್‌ ಫೀಲ್ದ್‌ – ಕಳೆದ 7 ವರ್ಷಗಳಿಂದ ಅಸಾಮಾನ್ಯ ಗರ್ಭಾಶಯ ರಕ್ತಸ್ರಾವ ಮತ್ತು ಪೆಲ್ವಿಕ್ ನೋವಿನಿಂದ ಬಳಲುತ್ತಿದ್ದ ಆಂಧ್ರ ಮೂಲದ 42 ವರ್ಷದ ಮಹಿಳೆಗೆ, ಮೆಡಿಕವರ್ ಆಸ್ಪತ್ರೆ ವೈಟ್‌ಫೀಲ್ಡ್‌ನ ಹಿರಿಯ ಸ್ತ್ರೀರೋಗ ತಜ್ಞೆ ಡಾ. ಸಭಿಹಾ ಅಂಜುಮ್ ಅವರಿಂದ ನಿಟ್ಟುಸಿರು ಬಿಡುವಂತಾಗಿದೆ.

ಈಕೆ ಎರಡು ಬಾರಿ ಸೀಸೇರಿಯನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈಗಾಗಲೇ ಎರಡು ಬಾರಿ D&C ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು, ಆದರೂ ಯಾವುದೇ ಪರಿಹಾರ ದೊರಕಿಲ್ಲ. ಪರಿಸ್ಥಿತಿ ಹಂತ ಹಂತವಾಗಿ ಗಂಭೀರವಾಗಿ, ಗರ್ಭಾಶಯದ ಕ್ಯಾನ್ಸರ್ ಶಂಕೆ ಏರಿತು.

ಮೆಡಿಕವರ್‌ನಲ್ಲಿ ಹೆಚ್ಚಿನ ತಪಾಸಣೆಯ ಬಳಿಕ, ಸೀಸೇರಿಯನ್‌ನಿಂದ ಉಂಟಾದ ಗಟ್ಟಿಯಾದ ಅಂಟಿಕೆಗಳಿಂದ ಗರ್ಭಾಶಯ ಸುತ್ತಲಿನ ಅಂಗಗಳಿಗೆ ಬೆಸೆದುಕೊಂಡಿರುವುದು ತಿಳಿಯಿತು. ಸಾಮಾನ್ಯ ಶಸ್ತ್ರಚಿಕಿತ್ಸೆಯಲ್ಲಿ ಇದು ಅಪಾಯಕಾರಿಯಾಗಿತ್ತು.

ಡಾ. ಸಭಿಹಾ ಅವರು ರೊಬೋಟಿಕ್ ತಂತ್ರಜ್ಞಾನ ಬಳಸಿ ರೊಬೋಟಿಕ್ ಹಿಸ್ಟರೆಕ್ಟಮಿ (ಗರ್ಭಾಶಯ ತೆಗೆದುಹಾಕುವ ಶಸ್ತ್ರಚಿಕಿತ್ಸೆ) ನಡೆಸಿದರು. ಶಸ್ತ್ರಚಿಕಿತ್ಸೆಯಲ್ಲಿ ಅವರು ಅಂಟಿಕೆಗಳನ್ನು ಒಂದೊಂದಾಗಿ ಬೇರ್ಪಡಿಸಿ, ಗರ್ಭಾಶಯವನ್ನು ಸುರಕ್ಷಿತವಾಗಿ ತೆಗೆದುಹಾಕಿದರು.

“ಇಂತಹ ಗಂಭೀರ ಪ್ರಕರಣಗಳಲ್ಲಿ ರೊಬೋಟಿಕ್ ತಂತ್ರಜ್ಞಾನ ನಿಖರ ದೃಷ್ಟಿ ಮತ್ತು ನಿಖರ ನಿಯಂತ್ರಣ ಒದಗಿಸುತ್ತದೆ. ಇದು ರಕ್ತಸ್ರಾವ ಕಡಿಮೆ ಮಾಡುತ್ತದೆ, ನೋವು ಕಡಿಮೆ ಆಗುತ್ತದೆ ಮತ್ತು ಗುಣಮುಖತೆ ವೇಗವಾಗಿ ನಡೆಯುತ್ತದೆ,” ಎನ್ನುತ್ತಾರೆ ಡಾ. ಸಭಿಹಾ.

ಈ ಶಸ್ತ್ರಚಿಕಿತ್ಸೆ ನಂತರ ರೋಗಿಗೆ ಯಾವುದೇ ತೊಂದರೆ ಆಗದೆ, 24 ಗಂಟೆಗಳಲ್ಲಿ ಡಿಸ್ಚಾರ್ಜ್ ಮಾಡಲಾಯಿತು.ಈ ಪ್ರಕರಣವು, ಹಳೆಯ ಸೀಸೇರಿಯನ್ ಮಾಡಿದ ಮಹಿಳೆಯರಲ್ಲಿ, ಗರ್ಭಾಶಯ ಸಂಬಂಧಿತ ಸಮಸ್ಯೆಗಳಿಗೆ ರೊಬೋಟಿಕ್ ಶಸ್ತ್ರಚಿಕಿತ್ಸೆ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ.

Ramesh Babu

Journalist

Recent Posts

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

5 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

5 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

9 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

11 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

23 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

1 day ago