ರೊಬೋಟಿಕ್ ಶಸ್ತ್ರಚಿಕಿತ್ಸೆ ಮಹಿಳೆಯರಿಗಾಗಿ ನವ ಆಶಾ ಕಿರಣ: ಡಾ. ಸಭಿಹಾ

ಬೆಂಗಳೂರು, ವೈಟ್‌ ಫೀಲ್ದ್‌ – ಕಳೆದ 7 ವರ್ಷಗಳಿಂದ ಅಸಾಮಾನ್ಯ ಗರ್ಭಾಶಯ ರಕ್ತಸ್ರಾವ ಮತ್ತು ಪೆಲ್ವಿಕ್ ನೋವಿನಿಂದ ಬಳಲುತ್ತಿದ್ದ ಆಂಧ್ರ ಮೂಲದ 42 ವರ್ಷದ ಮಹಿಳೆಗೆ, ಮೆಡಿಕವರ್ ಆಸ್ಪತ್ರೆ ವೈಟ್‌ಫೀಲ್ಡ್‌ನ ಹಿರಿಯ ಸ್ತ್ರೀರೋಗ ತಜ್ಞೆ ಡಾ. ಸಭಿಹಾ ಅಂಜುಮ್ ಅವರಿಂದ ನಿಟ್ಟುಸಿರು ಬಿಡುವಂತಾಗಿದೆ.

ಈಕೆ ಎರಡು ಬಾರಿ ಸೀಸೇರಿಯನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈಗಾಗಲೇ ಎರಡು ಬಾರಿ D&C ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು, ಆದರೂ ಯಾವುದೇ ಪರಿಹಾರ ದೊರಕಿಲ್ಲ. ಪರಿಸ್ಥಿತಿ ಹಂತ ಹಂತವಾಗಿ ಗಂಭೀರವಾಗಿ, ಗರ್ಭಾಶಯದ ಕ್ಯಾನ್ಸರ್ ಶಂಕೆ ಏರಿತು.

ಮೆಡಿಕವರ್‌ನಲ್ಲಿ ಹೆಚ್ಚಿನ ತಪಾಸಣೆಯ ಬಳಿಕ, ಸೀಸೇರಿಯನ್‌ನಿಂದ ಉಂಟಾದ ಗಟ್ಟಿಯಾದ ಅಂಟಿಕೆಗಳಿಂದ ಗರ್ಭಾಶಯ ಸುತ್ತಲಿನ ಅಂಗಗಳಿಗೆ ಬೆಸೆದುಕೊಂಡಿರುವುದು ತಿಳಿಯಿತು. ಸಾಮಾನ್ಯ ಶಸ್ತ್ರಚಿಕಿತ್ಸೆಯಲ್ಲಿ ಇದು ಅಪಾಯಕಾರಿಯಾಗಿತ್ತು.

ಡಾ. ಸಭಿಹಾ ಅವರು ರೊಬೋಟಿಕ್ ತಂತ್ರಜ್ಞಾನ ಬಳಸಿ ರೊಬೋಟಿಕ್ ಹಿಸ್ಟರೆಕ್ಟಮಿ (ಗರ್ಭಾಶಯ ತೆಗೆದುಹಾಕುವ ಶಸ್ತ್ರಚಿಕಿತ್ಸೆ) ನಡೆಸಿದರು. ಶಸ್ತ್ರಚಿಕಿತ್ಸೆಯಲ್ಲಿ ಅವರು ಅಂಟಿಕೆಗಳನ್ನು ಒಂದೊಂದಾಗಿ ಬೇರ್ಪಡಿಸಿ, ಗರ್ಭಾಶಯವನ್ನು ಸುರಕ್ಷಿತವಾಗಿ ತೆಗೆದುಹಾಕಿದರು.

“ಇಂತಹ ಗಂಭೀರ ಪ್ರಕರಣಗಳಲ್ಲಿ ರೊಬೋಟಿಕ್ ತಂತ್ರಜ್ಞಾನ ನಿಖರ ದೃಷ್ಟಿ ಮತ್ತು ನಿಖರ ನಿಯಂತ್ರಣ ಒದಗಿಸುತ್ತದೆ. ಇದು ರಕ್ತಸ್ರಾವ ಕಡಿಮೆ ಮಾಡುತ್ತದೆ, ನೋವು ಕಡಿಮೆ ಆಗುತ್ತದೆ ಮತ್ತು ಗುಣಮುಖತೆ ವೇಗವಾಗಿ ನಡೆಯುತ್ತದೆ,” ಎನ್ನುತ್ತಾರೆ ಡಾ. ಸಭಿಹಾ.

ಈ ಶಸ್ತ್ರಚಿಕಿತ್ಸೆ ನಂತರ ರೋಗಿಗೆ ಯಾವುದೇ ತೊಂದರೆ ಆಗದೆ, 24 ಗಂಟೆಗಳಲ್ಲಿ ಡಿಸ್ಚಾರ್ಜ್ ಮಾಡಲಾಯಿತು.ಈ ಪ್ರಕರಣವು, ಹಳೆಯ ಸೀಸೇರಿಯನ್ ಮಾಡಿದ ಮಹಿಳೆಯರಲ್ಲಿ, ಗರ್ಭಾಶಯ ಸಂಬಂಧಿತ ಸಮಸ್ಯೆಗಳಿಗೆ ರೊಬೋಟಿಕ್ ಶಸ್ತ್ರಚಿಕಿತ್ಸೆ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ.

Ramesh Babu

Journalist

Recent Posts

ನಾಳೆ ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್‌ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜನೆ

ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ವತಿಯಿಂದ ಸಂವಿಧಾನ…

4 hours ago

ವ್ಯಕ್ತಿಯೋರ್ವ ನೇಣಿಗೆ ಶರಣು

  ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಸಾದುಮಠದಲ್ಲಿ ನಡೆದಿದೆ.. ಊರ ಹೊರವಲಯದಲ್ಲಿರುವ ಹಲಸಿನ ಮರಕ್ಕೆ…

5 hours ago

ತಿಂಗಳಾಂತ್ಯಕ್ಕೆ ಮೊದಲ ಬಗರ್ ಹುಕುಂ ಸಮಿತಿ ಸಭೆ – ಶಾಸಕ ಧೀರಜ್ ಮುನಿರಾಜು

ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100…

6 hours ago

ಭೂ ಮಾಪನ ಕಾರ್ಯ ಸ್ಥಗಿತ, ರೈತರ ಆಕ್ರೋಶ: ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…

6 hours ago

ಮಹಿಳೆಯರ ಸಬಲೀಕರಣಕ್ಕೆ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆ ಜಾರಿ- ಬಿಜೆಪಿ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್

ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…

7 hours ago

ಆಶಾ ಭೋಸ್ಲೆ…..ಸುಮಾರು 12000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದವರು- ಅವರಿಗೆ ‌ಭಾವಪೂರ್ಣ ಶ್ರದ್ಧಾಂಜಲಿ……

ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…

18 hours ago