ರೊಬೋಟಿಕ್ ಶಸ್ತ್ರಚಿಕಿತ್ಸೆ ಮಹಿಳೆಯರಿಗಾಗಿ ನವ ಆಶಾ ಕಿರಣ: ಡಾ. ಸಭಿಹಾ

ಬೆಂಗಳೂರು, ವೈಟ್‌ ಫೀಲ್ದ್‌ – ಕಳೆದ 7 ವರ್ಷಗಳಿಂದ ಅಸಾಮಾನ್ಯ ಗರ್ಭಾಶಯ ರಕ್ತಸ್ರಾವ ಮತ್ತು ಪೆಲ್ವಿಕ್ ನೋವಿನಿಂದ ಬಳಲುತ್ತಿದ್ದ ಆಂಧ್ರ ಮೂಲದ 42 ವರ್ಷದ ಮಹಿಳೆಗೆ, ಮೆಡಿಕವರ್ ಆಸ್ಪತ್ರೆ ವೈಟ್‌ಫೀಲ್ಡ್‌ನ ಹಿರಿಯ ಸ್ತ್ರೀರೋಗ ತಜ್ಞೆ ಡಾ. ಸಭಿಹಾ ಅಂಜುಮ್ ಅವರಿಂದ ನಿಟ್ಟುಸಿರು ಬಿಡುವಂತಾಗಿದೆ.

ಈಕೆ ಎರಡು ಬಾರಿ ಸೀಸೇರಿಯನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈಗಾಗಲೇ ಎರಡು ಬಾರಿ D&C ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು, ಆದರೂ ಯಾವುದೇ ಪರಿಹಾರ ದೊರಕಿಲ್ಲ. ಪರಿಸ್ಥಿತಿ ಹಂತ ಹಂತವಾಗಿ ಗಂಭೀರವಾಗಿ, ಗರ್ಭಾಶಯದ ಕ್ಯಾನ್ಸರ್ ಶಂಕೆ ಏರಿತು.

ಮೆಡಿಕವರ್‌ನಲ್ಲಿ ಹೆಚ್ಚಿನ ತಪಾಸಣೆಯ ಬಳಿಕ, ಸೀಸೇರಿಯನ್‌ನಿಂದ ಉಂಟಾದ ಗಟ್ಟಿಯಾದ ಅಂಟಿಕೆಗಳಿಂದ ಗರ್ಭಾಶಯ ಸುತ್ತಲಿನ ಅಂಗಗಳಿಗೆ ಬೆಸೆದುಕೊಂಡಿರುವುದು ತಿಳಿಯಿತು. ಸಾಮಾನ್ಯ ಶಸ್ತ್ರಚಿಕಿತ್ಸೆಯಲ್ಲಿ ಇದು ಅಪಾಯಕಾರಿಯಾಗಿತ್ತು.

ಡಾ. ಸಭಿಹಾ ಅವರು ರೊಬೋಟಿಕ್ ತಂತ್ರಜ್ಞಾನ ಬಳಸಿ ರೊಬೋಟಿಕ್ ಹಿಸ್ಟರೆಕ್ಟಮಿ (ಗರ್ಭಾಶಯ ತೆಗೆದುಹಾಕುವ ಶಸ್ತ್ರಚಿಕಿತ್ಸೆ) ನಡೆಸಿದರು. ಶಸ್ತ್ರಚಿಕಿತ್ಸೆಯಲ್ಲಿ ಅವರು ಅಂಟಿಕೆಗಳನ್ನು ಒಂದೊಂದಾಗಿ ಬೇರ್ಪಡಿಸಿ, ಗರ್ಭಾಶಯವನ್ನು ಸುರಕ್ಷಿತವಾಗಿ ತೆಗೆದುಹಾಕಿದರು.

“ಇಂತಹ ಗಂಭೀರ ಪ್ರಕರಣಗಳಲ್ಲಿ ರೊಬೋಟಿಕ್ ತಂತ್ರಜ್ಞಾನ ನಿಖರ ದೃಷ್ಟಿ ಮತ್ತು ನಿಖರ ನಿಯಂತ್ರಣ ಒದಗಿಸುತ್ತದೆ. ಇದು ರಕ್ತಸ್ರಾವ ಕಡಿಮೆ ಮಾಡುತ್ತದೆ, ನೋವು ಕಡಿಮೆ ಆಗುತ್ತದೆ ಮತ್ತು ಗುಣಮುಖತೆ ವೇಗವಾಗಿ ನಡೆಯುತ್ತದೆ,” ಎನ್ನುತ್ತಾರೆ ಡಾ. ಸಭಿಹಾ.

ಈ ಶಸ್ತ್ರಚಿಕಿತ್ಸೆ ನಂತರ ರೋಗಿಗೆ ಯಾವುದೇ ತೊಂದರೆ ಆಗದೆ, 24 ಗಂಟೆಗಳಲ್ಲಿ ಡಿಸ್ಚಾರ್ಜ್ ಮಾಡಲಾಯಿತು.ಈ ಪ್ರಕರಣವು, ಹಳೆಯ ಸೀಸೇರಿಯನ್ ಮಾಡಿದ ಮಹಿಳೆಯರಲ್ಲಿ, ಗರ್ಭಾಶಯ ಸಂಬಂಧಿತ ಸಮಸ್ಯೆಗಳಿಗೆ ರೊಬೋಟಿಕ್ ಶಸ್ತ್ರಚಿಕಿತ್ಸೆ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ.

Ramesh Babu

Journalist

Recent Posts

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

3 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

14 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

15 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

19 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

1 day ago