Categories: ಕೋಲಾರ

ರೋಗಿಗಳಿಗೆ ಔಷಧಿಗಾಗಿ ಹೊರಗಡೆ ಚೀಟಿ ಕಳಸಿದರೆ ಕ್ರಮ-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕ ಆಸ್ಪತ್ರೆಗೆ ಬರುವ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಒದಗಿಸುವುದರ ಜೊತೆಗೆ‌ ಅಗತ್ಯವಾದ ಔಷಧಿಗಳ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಔಷಧಿಗಳಿಗೆ ರೋಗಿಗಳಿಗೆ ಹೊರಗೆ ತೆಗೆದುಕೊಳ್ಳಿ ಎಂದು ಚೀಟಿ ಬರೆದು ಕೊಡುವುದು ಹಣ ಕೇಳುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮಕ್ಕೆ ಶಿಫಾರಸು ಮಾಡಲಾಗುತ್ತದೆ ಎಂದು ವೈದ್ಯರಿಗೆ ಶಾಸಕ ಕೊತ್ತೂರು ಮಂಜುನಾಥ್ ಸೂಚನೆ ನೀಡಿದರು.

ನಗರದ ಕ್ಲಾಕ್ ಟವರ್ ಬಳಿಯಿರುವ ದರ್ಗಾ ಮೊಹಲ್ ಆಸ್ಪತ್ರೆಗೆ ಭೇಟಿ ಕುಂದುಕೊರತೆಗಳನ್ನು ಆಲಿಸಿದ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಂಬಿಕೆ ಬರುವಂತೆ ನಿಗಾ ವಹಿಸಬೇಕು ಈ ಆಸ್ಪತ್ರೆಯಲ್ಲಿ ಜನರ ಮೆಚ್ಚುಗೆ ಇದೆ ಆದರೆ ದುರುಪಯೋಗವಾಗಬಾರದು ಸರ್ಕಾರಿ ಆಸ್ಪತ್ರೆಯಲ್ಲಿನ ಚಿಕಿತ್ಸೆ ಉಚಿತ ಯಾರು ಕೂಡ ಹಣ ಕೊಡಬಾರದು ತೆಗೆದುಕೊಳ್ಳುವುದು ತಪ್ಪು ಅಷ್ಟೇ ಅಲ್ಲ ಲಂಚ ಕೊಡುವುದು ದೊಡ್ಡ ತಪ್ಪು ಆಸ್ಪತ್ರೆಯಲ್ಲಿ ಇಲ್ಲದೇ ಇರುವ ಔಷಧಗಳನ್ನು ಖರೀದಿ ಮಾಡಿ‌ ನಿಮಗೆ ನೀಡಬೇಕು ಎಂದರು

ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳನ್ನು ಎಂ.ಆರ್. ಸ್ಕ್ಯಾನ್ ಮತ್ತು ಸಿಟಿ ಸ್ಕ್ಯಾನ್‌ಗೆ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸದಂತೆ ಎಚ್ಚರ ವಹಿಸಬೇಕು ನಮ್ಮಲ್ಲಿರುವ ಎಸ್.ಎನ್ ಆರ್ ಜಿಲ್ಲಾ ಆಸ್ಪತ್ರೆಗೆ ಕಳಸಿ ಮುಂದಿನ ದಿನಗಳಲ್ಲಿ ಇಲ್ಲಿಯೇ ಅ ವ್ಯವಸ್ಥೆ ಮಾಡಲಾಗುತ್ತದೆ ರೋಗಿಗಳಿಗೆ ವೈದ್ಯರು, ಸಿಬ್ಬಂದಿ ಲಭ್ಯವಿರುವಂತೆ ನೋಡಿಕೊಳ್ಳಿ ಆಸ್ಪತ್ರೆಯಲ್ಲಿ ಕೆಟ್ಟು ಹೋಗಿರುವ ಲಿಫ್ಟ್ ಅನ್ನು ನಾಳೆಯೇ ದುರಸ್ತಿ ಮಾಡಿಸಿ ಆದಷ್ಟು ಬೇಗ ರಾಂಫ್ ವ್ಯವಸ್ಥೆ ಸಹ ಮಾಡಲಾಗುತ್ತದೆ ಆಸ್ಪತ್ರೆಯಲ್ಲಿ ನೀರಿಗೆ ಅಭಾವವಿದ್ದು ಅವಶ್ಯಕತೆ ಇರುವ ಬೋರ್ ವೆಲ್ ದುರಸ್ತಿ ಸೇರಿದಂತೆ ಕ್ರಮ ವಹಿಸಲು ನಗರಸಭೆ ಅಧಿಕಾರಿಗಳು ನೋಡಿಕೊಳ್ಳಲು ಸೂಚನೆ ನೀಡಿದರು‌

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ನಾರಾಯಣಸ್ವಾಮಿ ಮಾತನಾಡಿ ಆಸ್ಪತ್ರೆಯಲ್ಲಿ ಲಿಫ್ಟ್, ಮೆಡಿಕಲ್ ಗ್ಯಾಸ್ ಲೈಫ್ ಲೈನ್, ನೀರು ಸೇರಿದಂತೆ ಸೌಲಭ್ಯಗಳ ಬಗ್ಗೆ ಶಾಸಕರಿಗೆ ಮನವರಿಕೆ ಮಾಡಿದರು ಕೂಡಲೇ ಒದಗಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ ಅವಶ್ಯಕತೆ ಇರುವ ಬಗ್ಗೆ ಗಮನಕ್ಕೆ ತನ್ನಿ ಸರ್ಕಾರದಿಂದ ಅಥವಾ ಸಿಎಸ್ಆರ್ ಅನುದಾನದಿಂದ ಕೊಡಿಸುವ ಕೆಲಸ ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್, ಉಪಾಧ್ಯಕ್ಷೆ ಸಂಗೀತಾ, ಜಿಲ್ಲಾ ಆರೋಗ್ಯಾಧಿಕಾರಿ ಶ್ರೀನಿವಾಸ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಸೇರಿದಂತೆ ನಗರಸಭೆ ಸದಸ್ಯರು ಅಧಿಕಾರಿಗಳು ಕಾಂಗ್ರೆಸ್ ಮುಖಂಡರು ಇದ್ದರು

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

3 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

4 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

6 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

15 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

16 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

18 hours ago