Categories: ಕೋಲಾರ

ರೋಗಿಗಳಿಗೆ ಔಷಧಿಗಾಗಿ ಹೊರಗಡೆ ಚೀಟಿ ಕಳಸಿದರೆ ಕ್ರಮ-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕ ಆಸ್ಪತ್ರೆಗೆ ಬರುವ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಒದಗಿಸುವುದರ ಜೊತೆಗೆ‌ ಅಗತ್ಯವಾದ ಔಷಧಿಗಳ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಔಷಧಿಗಳಿಗೆ ರೋಗಿಗಳಿಗೆ ಹೊರಗೆ ತೆಗೆದುಕೊಳ್ಳಿ ಎಂದು ಚೀಟಿ ಬರೆದು ಕೊಡುವುದು ಹಣ ಕೇಳುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮಕ್ಕೆ ಶಿಫಾರಸು ಮಾಡಲಾಗುತ್ತದೆ ಎಂದು ವೈದ್ಯರಿಗೆ ಶಾಸಕ ಕೊತ್ತೂರು ಮಂಜುನಾಥ್ ಸೂಚನೆ ನೀಡಿದರು.

ನಗರದ ಕ್ಲಾಕ್ ಟವರ್ ಬಳಿಯಿರುವ ದರ್ಗಾ ಮೊಹಲ್ ಆಸ್ಪತ್ರೆಗೆ ಭೇಟಿ ಕುಂದುಕೊರತೆಗಳನ್ನು ಆಲಿಸಿದ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಂಬಿಕೆ ಬರುವಂತೆ ನಿಗಾ ವಹಿಸಬೇಕು ಈ ಆಸ್ಪತ್ರೆಯಲ್ಲಿ ಜನರ ಮೆಚ್ಚುಗೆ ಇದೆ ಆದರೆ ದುರುಪಯೋಗವಾಗಬಾರದು ಸರ್ಕಾರಿ ಆಸ್ಪತ್ರೆಯಲ್ಲಿನ ಚಿಕಿತ್ಸೆ ಉಚಿತ ಯಾರು ಕೂಡ ಹಣ ಕೊಡಬಾರದು ತೆಗೆದುಕೊಳ್ಳುವುದು ತಪ್ಪು ಅಷ್ಟೇ ಅಲ್ಲ ಲಂಚ ಕೊಡುವುದು ದೊಡ್ಡ ತಪ್ಪು ಆಸ್ಪತ್ರೆಯಲ್ಲಿ ಇಲ್ಲದೇ ಇರುವ ಔಷಧಗಳನ್ನು ಖರೀದಿ ಮಾಡಿ‌ ನಿಮಗೆ ನೀಡಬೇಕು ಎಂದರು

ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳನ್ನು ಎಂ.ಆರ್. ಸ್ಕ್ಯಾನ್ ಮತ್ತು ಸಿಟಿ ಸ್ಕ್ಯಾನ್‌ಗೆ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸದಂತೆ ಎಚ್ಚರ ವಹಿಸಬೇಕು ನಮ್ಮಲ್ಲಿರುವ ಎಸ್.ಎನ್ ಆರ್ ಜಿಲ್ಲಾ ಆಸ್ಪತ್ರೆಗೆ ಕಳಸಿ ಮುಂದಿನ ದಿನಗಳಲ್ಲಿ ಇಲ್ಲಿಯೇ ಅ ವ್ಯವಸ್ಥೆ ಮಾಡಲಾಗುತ್ತದೆ ರೋಗಿಗಳಿಗೆ ವೈದ್ಯರು, ಸಿಬ್ಬಂದಿ ಲಭ್ಯವಿರುವಂತೆ ನೋಡಿಕೊಳ್ಳಿ ಆಸ್ಪತ್ರೆಯಲ್ಲಿ ಕೆಟ್ಟು ಹೋಗಿರುವ ಲಿಫ್ಟ್ ಅನ್ನು ನಾಳೆಯೇ ದುರಸ್ತಿ ಮಾಡಿಸಿ ಆದಷ್ಟು ಬೇಗ ರಾಂಫ್ ವ್ಯವಸ್ಥೆ ಸಹ ಮಾಡಲಾಗುತ್ತದೆ ಆಸ್ಪತ್ರೆಯಲ್ಲಿ ನೀರಿಗೆ ಅಭಾವವಿದ್ದು ಅವಶ್ಯಕತೆ ಇರುವ ಬೋರ್ ವೆಲ್ ದುರಸ್ತಿ ಸೇರಿದಂತೆ ಕ್ರಮ ವಹಿಸಲು ನಗರಸಭೆ ಅಧಿಕಾರಿಗಳು ನೋಡಿಕೊಳ್ಳಲು ಸೂಚನೆ ನೀಡಿದರು‌

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ನಾರಾಯಣಸ್ವಾಮಿ ಮಾತನಾಡಿ ಆಸ್ಪತ್ರೆಯಲ್ಲಿ ಲಿಫ್ಟ್, ಮೆಡಿಕಲ್ ಗ್ಯಾಸ್ ಲೈಫ್ ಲೈನ್, ನೀರು ಸೇರಿದಂತೆ ಸೌಲಭ್ಯಗಳ ಬಗ್ಗೆ ಶಾಸಕರಿಗೆ ಮನವರಿಕೆ ಮಾಡಿದರು ಕೂಡಲೇ ಒದಗಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ ಅವಶ್ಯಕತೆ ಇರುವ ಬಗ್ಗೆ ಗಮನಕ್ಕೆ ತನ್ನಿ ಸರ್ಕಾರದಿಂದ ಅಥವಾ ಸಿಎಸ್ಆರ್ ಅನುದಾನದಿಂದ ಕೊಡಿಸುವ ಕೆಲಸ ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್, ಉಪಾಧ್ಯಕ್ಷೆ ಸಂಗೀತಾ, ಜಿಲ್ಲಾ ಆರೋಗ್ಯಾಧಿಕಾರಿ ಶ್ರೀನಿವಾಸ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಸೇರಿದಂತೆ ನಗರಸಭೆ ಸದಸ್ಯರು ಅಧಿಕಾರಿಗಳು ಕಾಂಗ್ರೆಸ್ ಮುಖಂಡರು ಇದ್ದರು

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

44 minutes ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

56 minutes ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

9 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

22 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

24 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

1 day ago