Categories: ಕೋಲಾರ

ರೋಗಿಗಳಿಗೆ ಔಷಧಿಗಾಗಿ ಹೊರಗಡೆ ಚೀಟಿ ಕಳಸಿದರೆ ಕ್ರಮ-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕ ಆಸ್ಪತ್ರೆಗೆ ಬರುವ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಒದಗಿಸುವುದರ ಜೊತೆಗೆ‌ ಅಗತ್ಯವಾದ ಔಷಧಿಗಳ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಔಷಧಿಗಳಿಗೆ ರೋಗಿಗಳಿಗೆ ಹೊರಗೆ ತೆಗೆದುಕೊಳ್ಳಿ ಎಂದು ಚೀಟಿ ಬರೆದು ಕೊಡುವುದು ಹಣ ಕೇಳುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮಕ್ಕೆ ಶಿಫಾರಸು ಮಾಡಲಾಗುತ್ತದೆ ಎಂದು ವೈದ್ಯರಿಗೆ ಶಾಸಕ ಕೊತ್ತೂರು ಮಂಜುನಾಥ್ ಸೂಚನೆ ನೀಡಿದರು.

ನಗರದ ಕ್ಲಾಕ್ ಟವರ್ ಬಳಿಯಿರುವ ದರ್ಗಾ ಮೊಹಲ್ ಆಸ್ಪತ್ರೆಗೆ ಭೇಟಿ ಕುಂದುಕೊರತೆಗಳನ್ನು ಆಲಿಸಿದ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಂಬಿಕೆ ಬರುವಂತೆ ನಿಗಾ ವಹಿಸಬೇಕು ಈ ಆಸ್ಪತ್ರೆಯಲ್ಲಿ ಜನರ ಮೆಚ್ಚುಗೆ ಇದೆ ಆದರೆ ದುರುಪಯೋಗವಾಗಬಾರದು ಸರ್ಕಾರಿ ಆಸ್ಪತ್ರೆಯಲ್ಲಿನ ಚಿಕಿತ್ಸೆ ಉಚಿತ ಯಾರು ಕೂಡ ಹಣ ಕೊಡಬಾರದು ತೆಗೆದುಕೊಳ್ಳುವುದು ತಪ್ಪು ಅಷ್ಟೇ ಅಲ್ಲ ಲಂಚ ಕೊಡುವುದು ದೊಡ್ಡ ತಪ್ಪು ಆಸ್ಪತ್ರೆಯಲ್ಲಿ ಇಲ್ಲದೇ ಇರುವ ಔಷಧಗಳನ್ನು ಖರೀದಿ ಮಾಡಿ‌ ನಿಮಗೆ ನೀಡಬೇಕು ಎಂದರು

ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳನ್ನು ಎಂ.ಆರ್. ಸ್ಕ್ಯಾನ್ ಮತ್ತು ಸಿಟಿ ಸ್ಕ್ಯಾನ್‌ಗೆ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸದಂತೆ ಎಚ್ಚರ ವಹಿಸಬೇಕು ನಮ್ಮಲ್ಲಿರುವ ಎಸ್.ಎನ್ ಆರ್ ಜಿಲ್ಲಾ ಆಸ್ಪತ್ರೆಗೆ ಕಳಸಿ ಮುಂದಿನ ದಿನಗಳಲ್ಲಿ ಇಲ್ಲಿಯೇ ಅ ವ್ಯವಸ್ಥೆ ಮಾಡಲಾಗುತ್ತದೆ ರೋಗಿಗಳಿಗೆ ವೈದ್ಯರು, ಸಿಬ್ಬಂದಿ ಲಭ್ಯವಿರುವಂತೆ ನೋಡಿಕೊಳ್ಳಿ ಆಸ್ಪತ್ರೆಯಲ್ಲಿ ಕೆಟ್ಟು ಹೋಗಿರುವ ಲಿಫ್ಟ್ ಅನ್ನು ನಾಳೆಯೇ ದುರಸ್ತಿ ಮಾಡಿಸಿ ಆದಷ್ಟು ಬೇಗ ರಾಂಫ್ ವ್ಯವಸ್ಥೆ ಸಹ ಮಾಡಲಾಗುತ್ತದೆ ಆಸ್ಪತ್ರೆಯಲ್ಲಿ ನೀರಿಗೆ ಅಭಾವವಿದ್ದು ಅವಶ್ಯಕತೆ ಇರುವ ಬೋರ್ ವೆಲ್ ದುರಸ್ತಿ ಸೇರಿದಂತೆ ಕ್ರಮ ವಹಿಸಲು ನಗರಸಭೆ ಅಧಿಕಾರಿಗಳು ನೋಡಿಕೊಳ್ಳಲು ಸೂಚನೆ ನೀಡಿದರು‌

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ನಾರಾಯಣಸ್ವಾಮಿ ಮಾತನಾಡಿ ಆಸ್ಪತ್ರೆಯಲ್ಲಿ ಲಿಫ್ಟ್, ಮೆಡಿಕಲ್ ಗ್ಯಾಸ್ ಲೈಫ್ ಲೈನ್, ನೀರು ಸೇರಿದಂತೆ ಸೌಲಭ್ಯಗಳ ಬಗ್ಗೆ ಶಾಸಕರಿಗೆ ಮನವರಿಕೆ ಮಾಡಿದರು ಕೂಡಲೇ ಒದಗಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ ಅವಶ್ಯಕತೆ ಇರುವ ಬಗ್ಗೆ ಗಮನಕ್ಕೆ ತನ್ನಿ ಸರ್ಕಾರದಿಂದ ಅಥವಾ ಸಿಎಸ್ಆರ್ ಅನುದಾನದಿಂದ ಕೊಡಿಸುವ ಕೆಲಸ ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್, ಉಪಾಧ್ಯಕ್ಷೆ ಸಂಗೀತಾ, ಜಿಲ್ಲಾ ಆರೋಗ್ಯಾಧಿಕಾರಿ ಶ್ರೀನಿವಾಸ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಸೇರಿದಂತೆ ನಗರಸಭೆ ಸದಸ್ಯರು ಅಧಿಕಾರಿಗಳು ಕಾಂಗ್ರೆಸ್ ಮುಖಂಡರು ಇದ್ದರು

Ramesh Babu

Journalist

Recent Posts

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

12 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

18 hours ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

1 day ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

2 days ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

2 days ago