ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಸರಳವಾಗಿ ಜನ್ಮದಿನ ಆಚರಿಸಿಕೊಂಡ 24 ವರ್ಷದ ಯುವಕ ಎಂ.ಹೇಮಂತ್ ರಾಜ್

ತನ್ನ ಹುಟ್ಟುಹಬ್ಬದ ಪ್ರಯುಕ್ತ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣು ಹಂಪಲು ನೀಡುವ ಮೂಲಕ ಸರಳವಾಗಿ ಆಚರಿಸಿಕೊಂಡು ಇತರರಿಗೆ ಮಾದರಿಯಾದ 24 ವರ್ಷದ ಯುವಕ ಹೇಮಂತ್ ರಾಜ್.

ಪ್ರಸ್ತುತ ದಿನಗಳಲ್ಲಿ ಯುವಕರು ತಮ್ಮ ಹುಟ್ಟುಹಬ್ಬದಂದು ದುಂದು ವೆಚ್ಚ ಮಾಡಿ ಬಹಳ ವಿಜೃಂಭಣೆಯಿಂದ ಬರ್ತಡೆ ಆಚರಿಸಿಕೊಳ್ಳುವುದುಂಟು. ಆದರೆ ಯುವಕ ಹೇಮಂತ್ ರಾಜ್ ಸಮಾಜ ಸೇವೆ ಮಾಡುವ ಮೂಲಕ ವಿಭಿನ್ನವಾಗಿ ಜನ್ಮದಿನವನ್ನು ಆಚರಿಸಿಕೊಂಡಿದ್ದಾರೆ.

ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ಬೆ.ನಗರದ ವಿದ್ಯಾರ್ಥಿ ಘಟಕ ಪ್ರಧಾನ ಕಾರ್ಯದರ್ಶಿ ಹೇಮಂತ್ ರಾಜ್, ಸಮಾಜಮುಖಿ ಕೆಲಸ ಮಾಡುವ ಉದ್ದೇಶದಿಂದ ಜನರ ಕಷ್ಟಗಳನ್ನು ಅರಿತು ಇಲ್ಲದವರ ಕಷ್ಟಗಳಿಗೆ ನೆರವಾಗಬೇಕು. ಆದ್ದರಿಂದ ನನ್ನ ಹುಟ್ಟುಹಬ್ಬ ದಿನದಂದು ಸಾರ್ವಜನಿಕ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣು ಹಂಪಲು ನೀಡಿ ಅರ್ಥಪೂರ್ಣವಾಗಿ ಬರ್ತಡೆ ಆಚರಿಸಿಕೊಳ್ಳಲಾಯಿತು. ಮುಂದೆಯೂ ಇದೇರೀತಿ ಬಡವರಿಗೆ ನೆರವಾಗುವ ಮೂಲಕ ಹುಟ್ಟಿದ ದಿನವನ್ನು ಆಚರಿಸಿಕೊಳ್ಳುವೆ ಎಂದರು.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

3 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

4 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

6 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

10 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

15 hours ago