ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಸೋಮವಾರ ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡ ಜಿ. ಲಕ್ಷ್ಮೀಪತಿ, ವೈದ್ಯಾಧಿಕಾರಿ ಡಾ. ಫರ್ಹಾನಾ ಅವರು ಆಸ್ಪತ್ರೆಗೆ ಬರುವ ರೈತರು ಹಾಗೂ ಸಾರ್ವಜನಿಕರನ್ನು ಗೌರವದಿಂದ ನಡೆಸಿಕೊಳ್ಳುತ್ತಿಲ್ಲ. ತಲೆನೋವು, ಜ್ವರ, ಕೆಮ್ಮು, ನೆಗಡಿ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ಬಂದ ರೋಗಿಗಳೊಂದಿಗೆ ಏಕವಚನದಲ್ಲಿ ಮಾತನಾಡಿ ಅವಮಾನಿಸುತ್ತಾರೆ ಎಂದು ಆರೋಪಿಸಿದರು.
ಪ್ರತಿದಿನ ಸುಮಾರು ಹತ್ತು ದೂರುಗಳು ವೈದ್ಯಾಧಿಕಾರಿಯ ವರ್ತನೆ ಕುರಿತು ಬರುತ್ತಿವೆ. ಹೆಚ್ಚಿನ ಪ್ರಶ್ನೆ ಕೇಳಿದರೆ ಪೊಲೀಸ್ ಠಾಣೆಗೆ ದೂರು ನೀಡುವುದಾಗಿ ರೋಗಿಗಳಿಗೆ ಬೆದರಿಕೆ ಹಾಕುತ್ತಾರೆ. ಸಾರ್ವಜನಿಕರೊಂದಿಗೆ ಕನಿಷ್ಠ ಸೌಜನ್ಯದಿಂದ ವರ್ತಿಸದ ಇಂತಹ ವೈದ್ಯರು ನಮ್ಮೂರಿಗೆ ಬೇಡ. ಅವರನ್ನು ತಕ್ಷಣವೇ ವರ್ಗಾವಣೆ ಮಾಡಿ ಹೊಸ ವೈದ್ಯರನ್ನು ನೇಮಿಸಬೇಕು ಎಂದು ಒತ್ತಾಯಿಸಿದರು.
ಈ ಸಂಬಂಧ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲೂ ನಿರ್ಣಯ ಕೈಗೊಳ್ಳಲಾಗಿದೆ. ಒಂದು ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ದೂರು ಸಲ್ಲಿಸಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಶಾರದಾ ಗ್ರಾಮಸ್ಥರ ಅಹವಾಲು ಆಲಿಸಿದರು. ಬಳಿಕ ಮಾತನಾಡಿ, ವೈದ್ಯಾಧಿಕಾರಿಯ ವಿರುದ್ಧ ಈ ಹಿಂದೆಯೂ ಇಂತಹ ದೂರುಗಳು ಬಂದಿದ್ದವು. ವರ್ತನೆ ಸರಿಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ಆದರೂ ಇದೇ ರೀತಿಯ ಘಟನೆಗಳು ಪುನರಾವರ್ತನೆಯಾಗುತ್ತಿರುವುದು ಸರಿಯಲ್ಲ. ಗ್ರಾಮಸ್ಥರ ಮನವಿಯನ್ನು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ವರದಿ ಸಲ್ಲಿಸಿ ಮುಂದಿನ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು.
ಈ ವೇಳೆ ಪಿಡಿಓ ಕಾಂತರಾಜು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಜ್ಯೋತಿ, ಚಾಂದಿನಿ ಹಾಗೂ ಗ್ರಾಮಸ್ಥರಾದ ಆನಂದ್, ರಮೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…