ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಸೋಮವಾರ ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡ ಜಿ. ಲಕ್ಷ್ಮೀಪತಿ, ವೈದ್ಯಾಧಿಕಾರಿ ಡಾ. ಫರ್ಹಾನಾ ಅವರು ಆಸ್ಪತ್ರೆಗೆ ಬರುವ ರೈತರು ಹಾಗೂ ಸಾರ್ವಜನಿಕರನ್ನು ಗೌರವದಿಂದ ನಡೆಸಿಕೊಳ್ಳುತ್ತಿಲ್ಲ. ತಲೆನೋವು, ಜ್ವರ, ಕೆಮ್ಮು, ನೆಗಡಿ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ಬಂದ ರೋಗಿಗಳೊಂದಿಗೆ ಏಕವಚನದಲ್ಲಿ ಮಾತನಾಡಿ ಅವಮಾನಿಸುತ್ತಾರೆ ಎಂದು ಆರೋಪಿಸಿದರು.

ಪ್ರತಿದಿನ ಸುಮಾರು ಹತ್ತು ದೂರುಗಳು ವೈದ್ಯಾಧಿಕಾರಿಯ ವರ್ತನೆ ಕುರಿತು ಬರುತ್ತಿವೆ. ಹೆಚ್ಚಿನ ಪ್ರಶ್ನೆ ಕೇಳಿದರೆ ಪೊಲೀಸ್ ಠಾಣೆಗೆ ದೂರು ನೀಡುವುದಾಗಿ ರೋಗಿಗಳಿಗೆ ಬೆದರಿಕೆ ಹಾಕುತ್ತಾರೆ. ಸಾರ್ವಜನಿಕರೊಂದಿಗೆ ಕನಿಷ್ಠ ಸೌಜನ್ಯದಿಂದ ವರ್ತಿಸದ ಇಂತಹ ವೈದ್ಯರು ನಮ್ಮೂರಿಗೆ ಬೇಡ. ಅವರನ್ನು ತಕ್ಷಣವೇ ವರ್ಗಾವಣೆ ಮಾಡಿ ಹೊಸ ವೈದ್ಯರನ್ನು ನೇಮಿಸಬೇಕು ಎಂದು ಒತ್ತಾಯಿಸಿದರು.

ಈ ಸಂಬಂಧ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲೂ ನಿರ್ಣಯ ಕೈಗೊಳ್ಳಲಾಗಿದೆ. ಒಂದು ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ದೂರು ಸಲ್ಲಿಸಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಶಾರದಾ ಗ್ರಾಮಸ್ಥರ ಅಹವಾಲು ಆಲಿಸಿದರು. ಬಳಿಕ ಮಾತನಾಡಿ, ವೈದ್ಯಾಧಿಕಾರಿಯ ವಿರುದ್ಧ ಈ ಹಿಂದೆಯೂ ಇಂತಹ ದೂರುಗಳು ಬಂದಿದ್ದವು. ವರ್ತನೆ ಸರಿಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ಆದರೂ ಇದೇ ರೀತಿಯ ಘಟನೆಗಳು ಪುನರಾವರ್ತನೆಯಾಗುತ್ತಿರುವುದು ಸರಿಯಲ್ಲ. ಗ್ರಾಮಸ್ಥರ ಮನವಿಯನ್ನು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ವರದಿ ಸಲ್ಲಿಸಿ ಮುಂದಿನ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು.

ಈ ವೇಳೆ ಪಿಡಿಓ ಕಾಂತರಾಜು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಜ್ಯೋತಿ, ಚಾಂದಿನಿ ಹಾಗೂ ಗ್ರಾಮಸ್ಥರಾದ ಆನಂದ್, ರಮೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Ramesh Babu

Journalist

Recent Posts

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

20 minutes ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

14 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

17 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago