ವಿಶ್ವಕಪ್ ಕಾಯುವಿಕೆಗೆ ತೆರೆ ಬಿದ್ದಿದೆ, 17 ವಷ೯ಗಳ ನಂತರ ಭಾರತ ತಂಡ ಟಿ-20 ವಿಶ್ವಕಪ್ ಗೆಲ್ಲುವ ಮೂಲಕ ಕೋಟ್ಯಂತರ ಭಾರತೀಯರ ಕನಸು ನನಸು ಮಾಡುವ ಮೂಲಕ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ.
ಅತ್ಯಂತ ರೋಚಕತೆಯಿಂದ ಕೂಡಿದ್ದ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಮಾಕ್ರಂ ನಾಯಕತ್ವದ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್ ಗಳ ಭರ್ಜರಿ ಜಯ ಸಾಧಿಸಿದರು.
ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆರಂಭಿಸಿತು, ಆರಂಭಿಕ ಆಘಾತ ಅನುಭವಿಸಿದ ತಂಡಕ್ಕೆ ಆಸರೆಯಾಗಿ ನಿಂತವರು ವಿರಾಟ್ ಕೊಹ್ಲಿ (76) ಹಾಗೂ ಆಲ್ ರೌಂಡರ್ ಅಕ್ಷರ್ ಪಟೇಲ್ (47) ಉತ್ತಮ ಜೊತೆಯಾಟ ಹಾಗೂ ಶಿವಂ ದುಬೆ (27) ರನ್ ಗಳಿಸಿ ತಂಡದ ಮೊತ್ತವನ್ನು 170ರ ಗಡಿ ದಾಟಿಸಿದರು.
176 ರನ್ ಗುರಿ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ ಆರಂಭಿಕ ಆಘಾತ ಅನುಭವಿಸಿದರೂ ಸಹ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕ್ವಿಂಟಾನ್ ಡಿ ಕಾಕ್ (39), ಸ್ಟಬ್ಸ್(31), ಕ್ಲಾಸನ್ (52) ಹಾಗೂ ಡೇವಿಡ್ ಮಿಲ್ಲರ್ (21) ರನ್ ಗಳಿಸಿ ಗೆಲುವಿನ ದಡಕ್ಕೆ ಬಂದು ನಿಲ್ಲಿಸಿದರು.
ಆದರೆ, ಭಾರತದ ಬೌಲಿಂಗ್ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಬುಮ್ರಾ, ಅಶ೯ದೀಪ್ ಹಾಗೂ ಹಾದಿ೯ಕ್ ಪಾಂಡ್ಯ ದಕ್ಷಿಣ ಆಫ್ರಿಕಾದ ಕಡೆ ವಾಲುತ್ತಿದ್ದ ಪಂದ್ಯವನ್ನು ಕಸಿದುಕೊಂಡರು.
ಕನ್ನಡಿಗ ರಾಹುಲ್ ದ್ರಾವಿಡ್ ಅವರು ಆಟಗಾರನಾಗಿ ಕಪ್ ಗೆಲ್ಲುವಲ್ಲಿ ವಿಫಲರಾದರೂ ಸಹ ಭಾರತ ತಂಡದ ಕೋಚ್ ಆಗಿ ಟಿ-ಟ್ವೆಂಟಿ ವಿಶ್ವಕಪ್ ಗೆಲ್ಲಿಸುವಲ್ಲಿ ಸಫಲರಾಗಿದ್ದಾರೆ.
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…