ವಿಶ್ವಕಪ್ ಕಾಯುವಿಕೆಗೆ ತೆರೆ ಬಿದ್ದಿದೆ, 17 ವಷ೯ಗಳ ನಂತರ ಭಾರತ ತಂಡ ಟಿ-20 ವಿಶ್ವಕಪ್ ಗೆಲ್ಲುವ ಮೂಲಕ ಕೋಟ್ಯಂತರ ಭಾರತೀಯರ ಕನಸು ನನಸು ಮಾಡುವ ಮೂಲಕ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ.
ಅತ್ಯಂತ ರೋಚಕತೆಯಿಂದ ಕೂಡಿದ್ದ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಮಾಕ್ರಂ ನಾಯಕತ್ವದ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್ ಗಳ ಭರ್ಜರಿ ಜಯ ಸಾಧಿಸಿದರು.
ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆರಂಭಿಸಿತು, ಆರಂಭಿಕ ಆಘಾತ ಅನುಭವಿಸಿದ ತಂಡಕ್ಕೆ ಆಸರೆಯಾಗಿ ನಿಂತವರು ವಿರಾಟ್ ಕೊಹ್ಲಿ (76) ಹಾಗೂ ಆಲ್ ರೌಂಡರ್ ಅಕ್ಷರ್ ಪಟೇಲ್ (47) ಉತ್ತಮ ಜೊತೆಯಾಟ ಹಾಗೂ ಶಿವಂ ದುಬೆ (27) ರನ್ ಗಳಿಸಿ ತಂಡದ ಮೊತ್ತವನ್ನು 170ರ ಗಡಿ ದಾಟಿಸಿದರು.
176 ರನ್ ಗುರಿ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ ಆರಂಭಿಕ ಆಘಾತ ಅನುಭವಿಸಿದರೂ ಸಹ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕ್ವಿಂಟಾನ್ ಡಿ ಕಾಕ್ (39), ಸ್ಟಬ್ಸ್(31), ಕ್ಲಾಸನ್ (52) ಹಾಗೂ ಡೇವಿಡ್ ಮಿಲ್ಲರ್ (21) ರನ್ ಗಳಿಸಿ ಗೆಲುವಿನ ದಡಕ್ಕೆ ಬಂದು ನಿಲ್ಲಿಸಿದರು.
ಆದರೆ, ಭಾರತದ ಬೌಲಿಂಗ್ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಬುಮ್ರಾ, ಅಶ೯ದೀಪ್ ಹಾಗೂ ಹಾದಿ೯ಕ್ ಪಾಂಡ್ಯ ದಕ್ಷಿಣ ಆಫ್ರಿಕಾದ ಕಡೆ ವಾಲುತ್ತಿದ್ದ ಪಂದ್ಯವನ್ನು ಕಸಿದುಕೊಂಡರು.
ಕನ್ನಡಿಗ ರಾಹುಲ್ ದ್ರಾವಿಡ್ ಅವರು ಆಟಗಾರನಾಗಿ ಕಪ್ ಗೆಲ್ಲುವಲ್ಲಿ ವಿಫಲರಾದರೂ ಸಹ ಭಾರತ ತಂಡದ ಕೋಚ್ ಆಗಿ ಟಿ-ಟ್ವೆಂಟಿ ವಿಶ್ವಕಪ್ ಗೆಲ್ಲಿಸುವಲ್ಲಿ ಸಫಲರಾಗಿದ್ದಾರೆ.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…