ವಿಶ್ವಕಪ್ ಕಾಯುವಿಕೆಗೆ ತೆರೆ ಬಿದ್ದಿದೆ, 17 ವಷ೯ಗಳ ನಂತರ ಭಾರತ ತಂಡ ಟಿ-20 ವಿಶ್ವಕಪ್ ಗೆಲ್ಲುವ ಮೂಲಕ ಕೋಟ್ಯಂತರ ಭಾರತೀಯರ ಕನಸು ನನಸು ಮಾಡುವ ಮೂಲಕ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ.
ಅತ್ಯಂತ ರೋಚಕತೆಯಿಂದ ಕೂಡಿದ್ದ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಮಾಕ್ರಂ ನಾಯಕತ್ವದ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್ ಗಳ ಭರ್ಜರಿ ಜಯ ಸಾಧಿಸಿದರು.
ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆರಂಭಿಸಿತು, ಆರಂಭಿಕ ಆಘಾತ ಅನುಭವಿಸಿದ ತಂಡಕ್ಕೆ ಆಸರೆಯಾಗಿ ನಿಂತವರು ವಿರಾಟ್ ಕೊಹ್ಲಿ (76) ಹಾಗೂ ಆಲ್ ರೌಂಡರ್ ಅಕ್ಷರ್ ಪಟೇಲ್ (47) ಉತ್ತಮ ಜೊತೆಯಾಟ ಹಾಗೂ ಶಿವಂ ದುಬೆ (27) ರನ್ ಗಳಿಸಿ ತಂಡದ ಮೊತ್ತವನ್ನು 170ರ ಗಡಿ ದಾಟಿಸಿದರು.
176 ರನ್ ಗುರಿ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ ಆರಂಭಿಕ ಆಘಾತ ಅನುಭವಿಸಿದರೂ ಸಹ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕ್ವಿಂಟಾನ್ ಡಿ ಕಾಕ್ (39), ಸ್ಟಬ್ಸ್(31), ಕ್ಲಾಸನ್ (52) ಹಾಗೂ ಡೇವಿಡ್ ಮಿಲ್ಲರ್ (21) ರನ್ ಗಳಿಸಿ ಗೆಲುವಿನ ದಡಕ್ಕೆ ಬಂದು ನಿಲ್ಲಿಸಿದರು.
ಆದರೆ, ಭಾರತದ ಬೌಲಿಂಗ್ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಬುಮ್ರಾ, ಅಶ೯ದೀಪ್ ಹಾಗೂ ಹಾದಿ೯ಕ್ ಪಾಂಡ್ಯ ದಕ್ಷಿಣ ಆಫ್ರಿಕಾದ ಕಡೆ ವಾಲುತ್ತಿದ್ದ ಪಂದ್ಯವನ್ನು ಕಸಿದುಕೊಂಡರು.
ಕನ್ನಡಿಗ ರಾಹುಲ್ ದ್ರಾವಿಡ್ ಅವರು ಆಟಗಾರನಾಗಿ ಕಪ್ ಗೆಲ್ಲುವಲ್ಲಿ ವಿಫಲರಾದರೂ ಸಹ ಭಾರತ ತಂಡದ ಕೋಚ್ ಆಗಿ ಟಿ-ಟ್ವೆಂಟಿ ವಿಶ್ವಕಪ್ ಗೆಲ್ಲಿಸುವಲ್ಲಿ ಸಫಲರಾಗಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…