ರೋಚಕ ಫೈನಲ್ ಪಂದ್ಯದಲ್ಲಿ ಗೆದ್ದು ಬೀಗಿದ ಟೀಮ್ ಇಂಡಿಯಾ:, ಟಿ-20 ಕ್ರಿಕೆಟ್ ಗೆ ಭಾರತವೇ ಬಾಸ್!

ವಿಶ್ವಕಪ್ ಕಾಯುವಿಕೆಗೆ ತೆರೆ ಬಿದ್ದಿದೆ, 17 ವಷ೯ಗಳ ನಂತರ ಭಾರತ ತಂಡ ಟಿ-20 ವಿಶ್ವಕಪ್ ಗೆಲ್ಲುವ ಮೂಲಕ ಕೋಟ್ಯಂತರ ಭಾರತೀಯರ ಕನಸು ನನಸು ಮಾಡುವ ಮೂಲಕ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ.

ಅತ್ಯಂತ ರೋಚಕತೆಯಿಂದ ಕೂಡಿದ್ದ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಮಾಕ್ರಂ ನಾಯಕತ್ವದ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್ ಗಳ ಭರ್ಜರಿ ಜಯ ಸಾಧಿಸಿದರು.

ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆರಂಭಿಸಿತು, ಆರಂಭಿಕ ಆಘಾತ ಅನುಭವಿಸಿದ ತಂಡಕ್ಕೆ ಆಸರೆಯಾಗಿ ನಿಂತವರು ವಿರಾಟ್ ಕೊಹ್ಲಿ (76) ಹಾಗೂ ಆಲ್ ರೌಂಡರ್ ಅಕ್ಷರ್ ಪಟೇಲ್ (47) ಉತ್ತಮ ಜೊತೆಯಾಟ ಹಾಗೂ ಶಿವಂ ದುಬೆ (27) ರನ್ ಗಳಿಸಿ ತಂಡದ ಮೊತ್ತವನ್ನು 170ರ ಗಡಿ ದಾಟಿಸಿದರು.

176 ರನ್ ಗುರಿ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ ಆರಂಭಿಕ ಆಘಾತ ಅನುಭವಿಸಿದರೂ ಸಹ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕ್ವಿಂಟಾನ್ ಡಿ ಕಾಕ್ (39), ಸ್ಟಬ್ಸ್(31), ಕ್ಲಾಸನ್ (52) ಹಾಗೂ ಡೇವಿಡ್ ಮಿಲ್ಲರ್ (21) ರನ್ ಗಳಿಸಿ ಗೆಲುವಿನ ದಡಕ್ಕೆ ಬಂದು ನಿಲ್ಲಿಸಿದರು.

ಆದರೆ, ಭಾರತದ ಬೌಲಿಂಗ್ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಬುಮ್ರಾ, ಅಶ೯ದೀಪ್ ಹಾಗೂ ಹಾದಿ೯ಕ್ ಪಾಂಡ್ಯ ದಕ್ಷಿಣ ಆಫ್ರಿಕಾದ ಕಡೆ ವಾಲುತ್ತಿದ್ದ ಪಂದ್ಯವನ್ನು ಕಸಿದುಕೊಂಡರು.

ಟೂರ್ನಿಯಲ್ಲಿ ಉತ್ತಮ ಬೌಲಿಂಗ್ ಮಾಡಿದ ಜಸ್ಪ್ರಿತ್ ಬುಮ್ರಾ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು, ಫೈನಲ್ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಟಿ-ಟ್ವೆಂಟಿ ಕ್ರಿಕೆಟ್ ಗೆ ವಿದಾಯ ಹೇಳುವ ಮೂಲಕ ತಮ್ಮ ವರ್ಣರಂಜಿತ ಟಿ-ಟ್ವೆಂಟಿ ಕ್ರಿಕೆಟ್ ಗೆ ತೆರೆ ಎಳೆದರು.

ಕನ್ನಡಿಗ ರಾಹುಲ್ ದ್ರಾವಿಡ್ ಅವರು ಆಟಗಾರನಾಗಿ ಕಪ್ ಗೆಲ್ಲುವಲ್ಲಿ ವಿಫಲರಾದರೂ ಸಹ ಭಾರತ ತಂಡದ ಕೋಚ್ ಆಗಿ ಟಿ-ಟ್ವೆಂಟಿ ವಿಶ್ವಕಪ್ ಗೆಲ್ಲಿಸುವಲ್ಲಿ ಸಫಲರಾಗಿದ್ದಾರೆ.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

3 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

10 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

11 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

1 day ago