Categories: ಕೋಲಾರ

ರೋಟರಿ ಸಂಸ್ಥೆಯ ವತಿಯಿಂದ ಪಲ್ಸ್ ಪೋಲಿಯೋ ಅಭಿಯಾನದ ಜಾಗೃತಿ ಜಾಥಾ

ಕೋಲಾರ: ವಿಶ್ವ ಪೋಲಿಯೋ ದಿನದ ಅಂಗವಾಗಿ ನಗರದಲ್ಲಿ ಕೋಲಾರ ರೋಟರಿ ಸಂಸ್ಥೆ ವತಿಯಿಂದ ಶನಿವಾರ ಅಭಿಯಾನದ ಜಾಗೃತಿ ಜಾಥಾವನ್ನು ನಗರದ ಅಮರ ಜ್ಯೋತಿ ಪಬ್ಲಿಕ್ ಶಾಲೆಯಿಂದ ಪ್ರಾರಂಭವಾಗಿ ಹೊಸ ಬಸ್ ನಿಲ್ದಾಣ, ಅಂತರಗಂಗೆ ರಸ್ತೆ, ಸೇರಿದಂತೆ ಕೀಲುಕೋಟೆಯ ಮುಖಾಂತರ ಸಾಗಿ ಸಾರ್ವಜನಿಕರಲ್ಲಿ ಪೋಲಿಯೋ ನಿರ್ಮೂಲನೆ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಸಂಸ್ಥೆ ನಿರ್ಗಮಿತ ಅಧ್ಯಕ್ಷ ಹಾಗೂ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆಯು ಬಹಳ ದೊಡ್ಡ ಪಾತ್ರವನ್ನು ವಹಿಸಿದೆ ಜಗತ್ತಿನಾದ್ಯಂತ ಜಾಗತಿಕ ಪಿಡುಗಾಗಿದ್ದ ಪೋಲಿಯೋ ನಿರ್ಮೂಲನೆ ಮಾಡಲು ರೋಟರಿ ಸಂಸ್ಥೆ 1985ರಲ್ಲಿ ಪಣ ತೊಟ್ಟಿತು. ಜಗತ್ತಿನಾದ್ಯಂತ ಸರ್ಕಾರಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಜತೆಯಲ್ಲಿ ಕೈಜೋಡಿಸಿ ಪೋಲಿಯೋ ನಿರ್ಮೂಲನೆ ಮಾಡಲು ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡು ಅದರಲ್ಲಿ ಯಶಸ್ವಿಯಾಗಿದೆ ಎಂದರು.

ಮನುಷ್ಯನ ಅಂಗವಿಕಲತೆಯನ್ನು ಹೋಗಲಾಡಿಸಲು ಪಲ್ಸ್ ಪೋಲಿಯೊ ಸಹಕಾರಿಯಾಗಿದೆ ಅದರಿಂದಲೇ ವಿಶ್ವವನ್ನು ಪೋಲಿಯೊ ಮುಕ್ತಗೊಳಿಸಲು ಸಂಕಲ್ಪ ತೊಟ್ಟಿದೆ ಇದರ ಗುರಿ ಸಾಧನೆಗೆ ನಿರಂತರವಾಗಿ ಸಾರ್ವಜನಿಕರು ತಮ್ಮ ಜವಾಬ್ದಾರಿ ಎನ್ನುವ ರೀತಿಯಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕು ವಿಧ್ಯಾರ್ಥಿಗಳು ಸಹ ಇಂತಹ ವಿಚಾರಗಳ ಬಗ್ಗೆ ತಮ್ಮ ಮನೆಗಳಲ್ಲಿ ಮನವಿ ಮಾಡಿಸಬೇಕು ಪೋಲಿಯೊ ಮುಕ್ತ ರಾಷ್ಟ್ರವಾಗಿ ಮಾಡಲು ಮಾರ್ಚ್ ೩ ರಂದು ತಮ್ಮ ಮನೆಯ ಮತ್ತು ಸುತ್ತಮುತ್ತಲಿನಲ್ಲಿರುವ ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕು ಅರೋಗ್ಯ ಅಧಿಕಾರಿ ಡಾ.ನಾರಾಯಣಸ್ವಾಮಿ ಮಾತನಾಡಿ ವಿಶ್ವ ಆರೋಗ್ಯ ಸಂಸ್ಥೆಯು 2014 ರಲ್ಲೇ ಭಾರತವನ್ನು ಪೊಲಿಯೋ ಮುಕ್ತ ರಾಷ್ಟ್ರ ಎಂದು ಘೋಷಿಸಿದೆ. ಆದರೆ, ನೆರೆಯ ರಾಷ್ಟ್ರಗಳಲ್ಲಿ ಕೆಲ ಪೋಲಿಯೊ ಪ್ರಕರಣಗಳು ಇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ದೇಶದಲ್ಲಿ ಇನ್ನೂ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ನಡೆಸಲಾಗುತ್ತಿದೆ ಪೋಷಕರು 5 ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ ಅಭಿಯಾನ ಆಶಯ ಈಡೇರಿಕೆಗೆ ಸಹಕರಿಸಬೇಕು ಎಂದರು

ಈ ಸಂದರ್ಭದಲ್ಲಿ ಕೋಲಾರ ರೋಟರಿ ಸಂಸ್ಥೆಯ ಅಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ವಿಶ್ವನಾಥ್, ಸೇವಾದಳ ಜಿಲ್ಲಾ ಅಧ್ಯಕ್ಷ ಕೆ.ಎಸ್ ಗಣೇಶ್, ಬಲಿಜ ಸಂಘದ ತೋಟಗಳ ಅಶೋಕ್, ರೋಟರಿ ಸಂಸ್ಥೆಯ ಸುಧಾಕರ್, ರಮೇಶ್, ಅಮರಾ ಜ್ಯೋತಿ ಶಾಲೆಯ ಮುಖ್ಯಸ್ಥ ಕೆ.ಎಸ್.ಆರ್.ಟಿ.ಸಿ ಮುನಿಯಪ್ಪ, ಸೇರಿದಂತೆ ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

7 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

8 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

16 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago