Categories: ಕೋಲಾರ

ರೋಟರಿ ಸಂಸ್ಥೆಯ ವತಿಯಿಂದ ಪಲ್ಸ್ ಪೋಲಿಯೋ ಅಭಿಯಾನದ ಜಾಗೃತಿ ಜಾಥಾ

ಕೋಲಾರ: ವಿಶ್ವ ಪೋಲಿಯೋ ದಿನದ ಅಂಗವಾಗಿ ನಗರದಲ್ಲಿ ಕೋಲಾರ ರೋಟರಿ ಸಂಸ್ಥೆ ವತಿಯಿಂದ ಶನಿವಾರ ಅಭಿಯಾನದ ಜಾಗೃತಿ ಜಾಥಾವನ್ನು ನಗರದ ಅಮರ ಜ್ಯೋತಿ ಪಬ್ಲಿಕ್ ಶಾಲೆಯಿಂದ ಪ್ರಾರಂಭವಾಗಿ ಹೊಸ ಬಸ್ ನಿಲ್ದಾಣ, ಅಂತರಗಂಗೆ ರಸ್ತೆ, ಸೇರಿದಂತೆ ಕೀಲುಕೋಟೆಯ ಮುಖಾಂತರ ಸಾಗಿ ಸಾರ್ವಜನಿಕರಲ್ಲಿ ಪೋಲಿಯೋ ನಿರ್ಮೂಲನೆ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಸಂಸ್ಥೆ ನಿರ್ಗಮಿತ ಅಧ್ಯಕ್ಷ ಹಾಗೂ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆಯು ಬಹಳ ದೊಡ್ಡ ಪಾತ್ರವನ್ನು ವಹಿಸಿದೆ ಜಗತ್ತಿನಾದ್ಯಂತ ಜಾಗತಿಕ ಪಿಡುಗಾಗಿದ್ದ ಪೋಲಿಯೋ ನಿರ್ಮೂಲನೆ ಮಾಡಲು ರೋಟರಿ ಸಂಸ್ಥೆ 1985ರಲ್ಲಿ ಪಣ ತೊಟ್ಟಿತು. ಜಗತ್ತಿನಾದ್ಯಂತ ಸರ್ಕಾರಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಜತೆಯಲ್ಲಿ ಕೈಜೋಡಿಸಿ ಪೋಲಿಯೋ ನಿರ್ಮೂಲನೆ ಮಾಡಲು ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡು ಅದರಲ್ಲಿ ಯಶಸ್ವಿಯಾಗಿದೆ ಎಂದರು.

ಮನುಷ್ಯನ ಅಂಗವಿಕಲತೆಯನ್ನು ಹೋಗಲಾಡಿಸಲು ಪಲ್ಸ್ ಪೋಲಿಯೊ ಸಹಕಾರಿಯಾಗಿದೆ ಅದರಿಂದಲೇ ವಿಶ್ವವನ್ನು ಪೋಲಿಯೊ ಮುಕ್ತಗೊಳಿಸಲು ಸಂಕಲ್ಪ ತೊಟ್ಟಿದೆ ಇದರ ಗುರಿ ಸಾಧನೆಗೆ ನಿರಂತರವಾಗಿ ಸಾರ್ವಜನಿಕರು ತಮ್ಮ ಜವಾಬ್ದಾರಿ ಎನ್ನುವ ರೀತಿಯಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕು ವಿಧ್ಯಾರ್ಥಿಗಳು ಸಹ ಇಂತಹ ವಿಚಾರಗಳ ಬಗ್ಗೆ ತಮ್ಮ ಮನೆಗಳಲ್ಲಿ ಮನವಿ ಮಾಡಿಸಬೇಕು ಪೋಲಿಯೊ ಮುಕ್ತ ರಾಷ್ಟ್ರವಾಗಿ ಮಾಡಲು ಮಾರ್ಚ್ ೩ ರಂದು ತಮ್ಮ ಮನೆಯ ಮತ್ತು ಸುತ್ತಮುತ್ತಲಿನಲ್ಲಿರುವ ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕು ಅರೋಗ್ಯ ಅಧಿಕಾರಿ ಡಾ.ನಾರಾಯಣಸ್ವಾಮಿ ಮಾತನಾಡಿ ವಿಶ್ವ ಆರೋಗ್ಯ ಸಂಸ್ಥೆಯು 2014 ರಲ್ಲೇ ಭಾರತವನ್ನು ಪೊಲಿಯೋ ಮುಕ್ತ ರಾಷ್ಟ್ರ ಎಂದು ಘೋಷಿಸಿದೆ. ಆದರೆ, ನೆರೆಯ ರಾಷ್ಟ್ರಗಳಲ್ಲಿ ಕೆಲ ಪೋಲಿಯೊ ಪ್ರಕರಣಗಳು ಇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ದೇಶದಲ್ಲಿ ಇನ್ನೂ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ನಡೆಸಲಾಗುತ್ತಿದೆ ಪೋಷಕರು 5 ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ ಅಭಿಯಾನ ಆಶಯ ಈಡೇರಿಕೆಗೆ ಸಹಕರಿಸಬೇಕು ಎಂದರು

ಈ ಸಂದರ್ಭದಲ್ಲಿ ಕೋಲಾರ ರೋಟರಿ ಸಂಸ್ಥೆಯ ಅಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ವಿಶ್ವನಾಥ್, ಸೇವಾದಳ ಜಿಲ್ಲಾ ಅಧ್ಯಕ್ಷ ಕೆ.ಎಸ್ ಗಣೇಶ್, ಬಲಿಜ ಸಂಘದ ತೋಟಗಳ ಅಶೋಕ್, ರೋಟರಿ ಸಂಸ್ಥೆಯ ಸುಧಾಕರ್, ರಮೇಶ್, ಅಮರಾ ಜ್ಯೋತಿ ಶಾಲೆಯ ಮುಖ್ಯಸ್ಥ ಕೆ.ಎಸ್.ಆರ್.ಟಿ.ಸಿ ಮುನಿಯಪ್ಪ, ಸೇರಿದಂತೆ ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.

Ramesh Babu

Journalist

Recent Posts

ನೇಪಾಳದ ದಂಗೆ……

ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…

4 hours ago

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

7 hours ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

17 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

18 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

21 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

23 hours ago