Categories: ಕೋಲಾರ

ರೋಟರಿ ಸಂಸ್ಥೆಯ ವತಿಯಿಂದ ಪಲ್ಸ್ ಪೋಲಿಯೋ ಅಭಿಯಾನದ ಜಾಗೃತಿ ಜಾಥಾ

ಕೋಲಾರ: ವಿಶ್ವ ಪೋಲಿಯೋ ದಿನದ ಅಂಗವಾಗಿ ನಗರದಲ್ಲಿ ಕೋಲಾರ ರೋಟರಿ ಸಂಸ್ಥೆ ವತಿಯಿಂದ ಶನಿವಾರ ಅಭಿಯಾನದ ಜಾಗೃತಿ ಜಾಥಾವನ್ನು ನಗರದ ಅಮರ ಜ್ಯೋತಿ ಪಬ್ಲಿಕ್ ಶಾಲೆಯಿಂದ ಪ್ರಾರಂಭವಾಗಿ ಹೊಸ ಬಸ್ ನಿಲ್ದಾಣ, ಅಂತರಗಂಗೆ ರಸ್ತೆ, ಸೇರಿದಂತೆ ಕೀಲುಕೋಟೆಯ ಮುಖಾಂತರ ಸಾಗಿ ಸಾರ್ವಜನಿಕರಲ್ಲಿ ಪೋಲಿಯೋ ನಿರ್ಮೂಲನೆ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಸಂಸ್ಥೆ ನಿರ್ಗಮಿತ ಅಧ್ಯಕ್ಷ ಹಾಗೂ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆಯು ಬಹಳ ದೊಡ್ಡ ಪಾತ್ರವನ್ನು ವಹಿಸಿದೆ ಜಗತ್ತಿನಾದ್ಯಂತ ಜಾಗತಿಕ ಪಿಡುಗಾಗಿದ್ದ ಪೋಲಿಯೋ ನಿರ್ಮೂಲನೆ ಮಾಡಲು ರೋಟರಿ ಸಂಸ್ಥೆ 1985ರಲ್ಲಿ ಪಣ ತೊಟ್ಟಿತು. ಜಗತ್ತಿನಾದ್ಯಂತ ಸರ್ಕಾರಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಜತೆಯಲ್ಲಿ ಕೈಜೋಡಿಸಿ ಪೋಲಿಯೋ ನಿರ್ಮೂಲನೆ ಮಾಡಲು ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡು ಅದರಲ್ಲಿ ಯಶಸ್ವಿಯಾಗಿದೆ ಎಂದರು.

ಮನುಷ್ಯನ ಅಂಗವಿಕಲತೆಯನ್ನು ಹೋಗಲಾಡಿಸಲು ಪಲ್ಸ್ ಪೋಲಿಯೊ ಸಹಕಾರಿಯಾಗಿದೆ ಅದರಿಂದಲೇ ವಿಶ್ವವನ್ನು ಪೋಲಿಯೊ ಮುಕ್ತಗೊಳಿಸಲು ಸಂಕಲ್ಪ ತೊಟ್ಟಿದೆ ಇದರ ಗುರಿ ಸಾಧನೆಗೆ ನಿರಂತರವಾಗಿ ಸಾರ್ವಜನಿಕರು ತಮ್ಮ ಜವಾಬ್ದಾರಿ ಎನ್ನುವ ರೀತಿಯಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕು ವಿಧ್ಯಾರ್ಥಿಗಳು ಸಹ ಇಂತಹ ವಿಚಾರಗಳ ಬಗ್ಗೆ ತಮ್ಮ ಮನೆಗಳಲ್ಲಿ ಮನವಿ ಮಾಡಿಸಬೇಕು ಪೋಲಿಯೊ ಮುಕ್ತ ರಾಷ್ಟ್ರವಾಗಿ ಮಾಡಲು ಮಾರ್ಚ್ ೩ ರಂದು ತಮ್ಮ ಮನೆಯ ಮತ್ತು ಸುತ್ತಮುತ್ತಲಿನಲ್ಲಿರುವ ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕು ಅರೋಗ್ಯ ಅಧಿಕಾರಿ ಡಾ.ನಾರಾಯಣಸ್ವಾಮಿ ಮಾತನಾಡಿ ವಿಶ್ವ ಆರೋಗ್ಯ ಸಂಸ್ಥೆಯು 2014 ರಲ್ಲೇ ಭಾರತವನ್ನು ಪೊಲಿಯೋ ಮುಕ್ತ ರಾಷ್ಟ್ರ ಎಂದು ಘೋಷಿಸಿದೆ. ಆದರೆ, ನೆರೆಯ ರಾಷ್ಟ್ರಗಳಲ್ಲಿ ಕೆಲ ಪೋಲಿಯೊ ಪ್ರಕರಣಗಳು ಇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ದೇಶದಲ್ಲಿ ಇನ್ನೂ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ನಡೆಸಲಾಗುತ್ತಿದೆ ಪೋಷಕರು 5 ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ ಅಭಿಯಾನ ಆಶಯ ಈಡೇರಿಕೆಗೆ ಸಹಕರಿಸಬೇಕು ಎಂದರು

ಈ ಸಂದರ್ಭದಲ್ಲಿ ಕೋಲಾರ ರೋಟರಿ ಸಂಸ್ಥೆಯ ಅಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ವಿಶ್ವನಾಥ್, ಸೇವಾದಳ ಜಿಲ್ಲಾ ಅಧ್ಯಕ್ಷ ಕೆ.ಎಸ್ ಗಣೇಶ್, ಬಲಿಜ ಸಂಘದ ತೋಟಗಳ ಅಶೋಕ್, ರೋಟರಿ ಸಂಸ್ಥೆಯ ಸುಧಾಕರ್, ರಮೇಶ್, ಅಮರಾ ಜ್ಯೋತಿ ಶಾಲೆಯ ಮುಖ್ಯಸ್ಥ ಕೆ.ಎಸ್.ಆರ್.ಟಿ.ಸಿ ಮುನಿಯಪ್ಪ, ಸೇರಿದಂತೆ ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.

Ramesh Babu

Journalist

Recent Posts

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

14 minutes ago

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

12 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

14 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

15 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

21 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

22 hours ago