Categories: ಕೋಲಾರ

ರೋಟರಿ ಸಂಸ್ಥೆಯ ವತಿಯಿಂದ ಪಲ್ಸ್ ಪೋಲಿಯೋ ಅಭಿಯಾನದ ಜಾಗೃತಿ ಜಾಥಾ

ಕೋಲಾರ: ವಿಶ್ವ ಪೋಲಿಯೋ ದಿನದ ಅಂಗವಾಗಿ ನಗರದಲ್ಲಿ ಕೋಲಾರ ರೋಟರಿ ಸಂಸ್ಥೆ ವತಿಯಿಂದ ಶನಿವಾರ ಅಭಿಯಾನದ ಜಾಗೃತಿ ಜಾಥಾವನ್ನು ನಗರದ ಅಮರ ಜ್ಯೋತಿ ಪಬ್ಲಿಕ್ ಶಾಲೆಯಿಂದ ಪ್ರಾರಂಭವಾಗಿ ಹೊಸ ಬಸ್ ನಿಲ್ದಾಣ, ಅಂತರಗಂಗೆ ರಸ್ತೆ, ಸೇರಿದಂತೆ ಕೀಲುಕೋಟೆಯ ಮುಖಾಂತರ ಸಾಗಿ ಸಾರ್ವಜನಿಕರಲ್ಲಿ ಪೋಲಿಯೋ ನಿರ್ಮೂಲನೆ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಸಂಸ್ಥೆ ನಿರ್ಗಮಿತ ಅಧ್ಯಕ್ಷ ಹಾಗೂ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆಯು ಬಹಳ ದೊಡ್ಡ ಪಾತ್ರವನ್ನು ವಹಿಸಿದೆ ಜಗತ್ತಿನಾದ್ಯಂತ ಜಾಗತಿಕ ಪಿಡುಗಾಗಿದ್ದ ಪೋಲಿಯೋ ನಿರ್ಮೂಲನೆ ಮಾಡಲು ರೋಟರಿ ಸಂಸ್ಥೆ 1985ರಲ್ಲಿ ಪಣ ತೊಟ್ಟಿತು. ಜಗತ್ತಿನಾದ್ಯಂತ ಸರ್ಕಾರಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಜತೆಯಲ್ಲಿ ಕೈಜೋಡಿಸಿ ಪೋಲಿಯೋ ನಿರ್ಮೂಲನೆ ಮಾಡಲು ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡು ಅದರಲ್ಲಿ ಯಶಸ್ವಿಯಾಗಿದೆ ಎಂದರು.

ಮನುಷ್ಯನ ಅಂಗವಿಕಲತೆಯನ್ನು ಹೋಗಲಾಡಿಸಲು ಪಲ್ಸ್ ಪೋಲಿಯೊ ಸಹಕಾರಿಯಾಗಿದೆ ಅದರಿಂದಲೇ ವಿಶ್ವವನ್ನು ಪೋಲಿಯೊ ಮುಕ್ತಗೊಳಿಸಲು ಸಂಕಲ್ಪ ತೊಟ್ಟಿದೆ ಇದರ ಗುರಿ ಸಾಧನೆಗೆ ನಿರಂತರವಾಗಿ ಸಾರ್ವಜನಿಕರು ತಮ್ಮ ಜವಾಬ್ದಾರಿ ಎನ್ನುವ ರೀತಿಯಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕು ವಿಧ್ಯಾರ್ಥಿಗಳು ಸಹ ಇಂತಹ ವಿಚಾರಗಳ ಬಗ್ಗೆ ತಮ್ಮ ಮನೆಗಳಲ್ಲಿ ಮನವಿ ಮಾಡಿಸಬೇಕು ಪೋಲಿಯೊ ಮುಕ್ತ ರಾಷ್ಟ್ರವಾಗಿ ಮಾಡಲು ಮಾರ್ಚ್ ೩ ರಂದು ತಮ್ಮ ಮನೆಯ ಮತ್ತು ಸುತ್ತಮುತ್ತಲಿನಲ್ಲಿರುವ ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕು ಅರೋಗ್ಯ ಅಧಿಕಾರಿ ಡಾ.ನಾರಾಯಣಸ್ವಾಮಿ ಮಾತನಾಡಿ ವಿಶ್ವ ಆರೋಗ್ಯ ಸಂಸ್ಥೆಯು 2014 ರಲ್ಲೇ ಭಾರತವನ್ನು ಪೊಲಿಯೋ ಮುಕ್ತ ರಾಷ್ಟ್ರ ಎಂದು ಘೋಷಿಸಿದೆ. ಆದರೆ, ನೆರೆಯ ರಾಷ್ಟ್ರಗಳಲ್ಲಿ ಕೆಲ ಪೋಲಿಯೊ ಪ್ರಕರಣಗಳು ಇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ದೇಶದಲ್ಲಿ ಇನ್ನೂ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ನಡೆಸಲಾಗುತ್ತಿದೆ ಪೋಷಕರು 5 ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ ಅಭಿಯಾನ ಆಶಯ ಈಡೇರಿಕೆಗೆ ಸಹಕರಿಸಬೇಕು ಎಂದರು

ಈ ಸಂದರ್ಭದಲ್ಲಿ ಕೋಲಾರ ರೋಟರಿ ಸಂಸ್ಥೆಯ ಅಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ವಿಶ್ವನಾಥ್, ಸೇವಾದಳ ಜಿಲ್ಲಾ ಅಧ್ಯಕ್ಷ ಕೆ.ಎಸ್ ಗಣೇಶ್, ಬಲಿಜ ಸಂಘದ ತೋಟಗಳ ಅಶೋಕ್, ರೋಟರಿ ಸಂಸ್ಥೆಯ ಸುಧಾಕರ್, ರಮೇಶ್, ಅಮರಾ ಜ್ಯೋತಿ ಶಾಲೆಯ ಮುಖ್ಯಸ್ಥ ಕೆ.ಎಸ್.ಆರ್.ಟಿ.ಸಿ ಮುನಿಯಪ್ಪ, ಸೇರಿದಂತೆ ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

12 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

16 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

17 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

19 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

19 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

23 hours ago