Categories: ಕೋಲಾರ

ರೋಟರಿ ಸಂಸ್ಥೆಯ ವತಿಯಿಂದ ಪಲ್ಸ್ ಪೋಲಿಯೋ ಅಭಿಯಾನದ ಜಾಗೃತಿ ಜಾಥಾ

ಕೋಲಾರ: ವಿಶ್ವ ಪೋಲಿಯೋ ದಿನದ ಅಂಗವಾಗಿ ನಗರದಲ್ಲಿ ಕೋಲಾರ ರೋಟರಿ ಸಂಸ್ಥೆ ವತಿಯಿಂದ ಶನಿವಾರ ಅಭಿಯಾನದ ಜಾಗೃತಿ ಜಾಥಾವನ್ನು ನಗರದ ಅಮರ ಜ್ಯೋತಿ ಪಬ್ಲಿಕ್ ಶಾಲೆಯಿಂದ ಪ್ರಾರಂಭವಾಗಿ ಹೊಸ ಬಸ್ ನಿಲ್ದಾಣ, ಅಂತರಗಂಗೆ ರಸ್ತೆ, ಸೇರಿದಂತೆ ಕೀಲುಕೋಟೆಯ ಮುಖಾಂತರ ಸಾಗಿ ಸಾರ್ವಜನಿಕರಲ್ಲಿ ಪೋಲಿಯೋ ನಿರ್ಮೂಲನೆ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಸಂಸ್ಥೆ ನಿರ್ಗಮಿತ ಅಧ್ಯಕ್ಷ ಹಾಗೂ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆಯು ಬಹಳ ದೊಡ್ಡ ಪಾತ್ರವನ್ನು ವಹಿಸಿದೆ ಜಗತ್ತಿನಾದ್ಯಂತ ಜಾಗತಿಕ ಪಿಡುಗಾಗಿದ್ದ ಪೋಲಿಯೋ ನಿರ್ಮೂಲನೆ ಮಾಡಲು ರೋಟರಿ ಸಂಸ್ಥೆ 1985ರಲ್ಲಿ ಪಣ ತೊಟ್ಟಿತು. ಜಗತ್ತಿನಾದ್ಯಂತ ಸರ್ಕಾರಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಜತೆಯಲ್ಲಿ ಕೈಜೋಡಿಸಿ ಪೋಲಿಯೋ ನಿರ್ಮೂಲನೆ ಮಾಡಲು ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡು ಅದರಲ್ಲಿ ಯಶಸ್ವಿಯಾಗಿದೆ ಎಂದರು.

ಮನುಷ್ಯನ ಅಂಗವಿಕಲತೆಯನ್ನು ಹೋಗಲಾಡಿಸಲು ಪಲ್ಸ್ ಪೋಲಿಯೊ ಸಹಕಾರಿಯಾಗಿದೆ ಅದರಿಂದಲೇ ವಿಶ್ವವನ್ನು ಪೋಲಿಯೊ ಮುಕ್ತಗೊಳಿಸಲು ಸಂಕಲ್ಪ ತೊಟ್ಟಿದೆ ಇದರ ಗುರಿ ಸಾಧನೆಗೆ ನಿರಂತರವಾಗಿ ಸಾರ್ವಜನಿಕರು ತಮ್ಮ ಜವಾಬ್ದಾರಿ ಎನ್ನುವ ರೀತಿಯಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕು ವಿಧ್ಯಾರ್ಥಿಗಳು ಸಹ ಇಂತಹ ವಿಚಾರಗಳ ಬಗ್ಗೆ ತಮ್ಮ ಮನೆಗಳಲ್ಲಿ ಮನವಿ ಮಾಡಿಸಬೇಕು ಪೋಲಿಯೊ ಮುಕ್ತ ರಾಷ್ಟ್ರವಾಗಿ ಮಾಡಲು ಮಾರ್ಚ್ ೩ ರಂದು ತಮ್ಮ ಮನೆಯ ಮತ್ತು ಸುತ್ತಮುತ್ತಲಿನಲ್ಲಿರುವ ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕು ಅರೋಗ್ಯ ಅಧಿಕಾರಿ ಡಾ.ನಾರಾಯಣಸ್ವಾಮಿ ಮಾತನಾಡಿ ವಿಶ್ವ ಆರೋಗ್ಯ ಸಂಸ್ಥೆಯು 2014 ರಲ್ಲೇ ಭಾರತವನ್ನು ಪೊಲಿಯೋ ಮುಕ್ತ ರಾಷ್ಟ್ರ ಎಂದು ಘೋಷಿಸಿದೆ. ಆದರೆ, ನೆರೆಯ ರಾಷ್ಟ್ರಗಳಲ್ಲಿ ಕೆಲ ಪೋಲಿಯೊ ಪ್ರಕರಣಗಳು ಇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ದೇಶದಲ್ಲಿ ಇನ್ನೂ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ನಡೆಸಲಾಗುತ್ತಿದೆ ಪೋಷಕರು 5 ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ ಅಭಿಯಾನ ಆಶಯ ಈಡೇರಿಕೆಗೆ ಸಹಕರಿಸಬೇಕು ಎಂದರು

ಈ ಸಂದರ್ಭದಲ್ಲಿ ಕೋಲಾರ ರೋಟರಿ ಸಂಸ್ಥೆಯ ಅಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ವಿಶ್ವನಾಥ್, ಸೇವಾದಳ ಜಿಲ್ಲಾ ಅಧ್ಯಕ್ಷ ಕೆ.ಎಸ್ ಗಣೇಶ್, ಬಲಿಜ ಸಂಘದ ತೋಟಗಳ ಅಶೋಕ್, ರೋಟರಿ ಸಂಸ್ಥೆಯ ಸುಧಾಕರ್, ರಮೇಶ್, ಅಮರಾ ಜ್ಯೋತಿ ಶಾಲೆಯ ಮುಖ್ಯಸ್ಥ ಕೆ.ಎಸ್.ಆರ್.ಟಿ.ಸಿ ಮುನಿಯಪ್ಪ, ಸೇರಿದಂತೆ ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

9 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago