ಕೋಲಾರ: ವಿಶ್ವ ಪೋಲಿಯೋ ದಿನದ ಅಂಗವಾಗಿ ನಗರದಲ್ಲಿ ಕೋಲಾರ ರೋಟರಿ ಸಂಸ್ಥೆ ವತಿಯಿಂದ ಶನಿವಾರ ಅಭಿಯಾನದ ಜಾಗೃತಿ ಜಾಥಾವನ್ನು ನಗರದ ಅಮರ ಜ್ಯೋತಿ ಪಬ್ಲಿಕ್ ಶಾಲೆಯಿಂದ ಪ್ರಾರಂಭವಾಗಿ ಹೊಸ ಬಸ್ ನಿಲ್ದಾಣ, ಅಂತರಗಂಗೆ ರಸ್ತೆ, ಸೇರಿದಂತೆ ಕೀಲುಕೋಟೆಯ ಮುಖಾಂತರ ಸಾಗಿ ಸಾರ್ವಜನಿಕರಲ್ಲಿ ಪೋಲಿಯೋ ನಿರ್ಮೂಲನೆ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ರೋಟರಿ ಸಂಸ್ಥೆ ನಿರ್ಗಮಿತ ಅಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆಯು ಬಹಳ ದೊಡ್ಡ ಪಾತ್ರವನ್ನು ವಹಿಸಿದೆ ಜಗತ್ತಿನಾದ್ಯಂತ ಜಾಗತಿಕ ಪಿಡುಗಾಗಿದ್ದ ಪೋಲಿಯೋ ನಿರ್ಮೂಲನೆ ಮಾಡಲು ರೋಟರಿ ಸಂಸ್ಥೆ 1985ರಲ್ಲಿ ಪಣ ತೊಟ್ಟಿತು. ಜಗತ್ತಿನಾದ್ಯಂತ ಸರ್ಕಾರಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಜತೆಯಲ್ಲಿ ಕೈಜೋಡಿಸಿ ಪೋಲಿಯೋ ನಿರ್ಮೂಲನೆ ಮಾಡಲು ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡು ಅದರಲ್ಲಿ ಯಶಸ್ವಿಯಾಗಿದೆ ಎಂದರು.
ಮನುಷ್ಯನ ಅಂಗವಿಕಲತೆಯನ್ನು ಹೋಗಲಾಡಿಸಲು ಪಲ್ಸ್ ಪೋಲಿಯೊ ಸಹಕಾರಿಯಾಗಿದೆ ಅದರಿಂದಲೇ ವಿಶ್ವವನ್ನು ಪೋಲಿಯೊ ಮುಕ್ತಗೊಳಿಸಲು ಸಂಕಲ್ಪ ತೊಟ್ಟಿದೆ ಇದರ ಗುರಿ ಸಾಧನೆಗೆ ನಿರಂತರವಾಗಿ ಸಾರ್ವಜನಿಕರು ತಮ್ಮ ಜವಾಬ್ದಾರಿ ಎನ್ನುವ ರೀತಿಯಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕು ವಿಧ್ಯಾರ್ಥಿಗಳು ಸಹ ಇಂತಹ ವಿಚಾರಗಳ ಬಗ್ಗೆ ತಮ್ಮ ಮನೆಗಳಲ್ಲಿ ಮನವಿ ಮಾಡಿಸಬೇಕು ಪೋಲಿಯೊ ಮುಕ್ತ ರಾಷ್ಟ್ರವಾಗಿ ಮಾಡಲು ಮಾರ್ಚ್ ೩ ರಂದು ತಮ್ಮ ಮನೆಯ ಮತ್ತು ಸುತ್ತಮುತ್ತಲಿನಲ್ಲಿರುವ ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕು ಅರೋಗ್ಯ ಅಧಿಕಾರಿ ಡಾ.ನಾರಾಯಣಸ್ವಾಮಿ ಮಾತನಾಡಿ ವಿಶ್ವ ಆರೋಗ್ಯ ಸಂಸ್ಥೆಯು 2014 ರಲ್ಲೇ ಭಾರತವನ್ನು ಪೊಲಿಯೋ ಮುಕ್ತ ರಾಷ್ಟ್ರ ಎಂದು ಘೋಷಿಸಿದೆ. ಆದರೆ, ನೆರೆಯ ರಾಷ್ಟ್ರಗಳಲ್ಲಿ ಕೆಲ ಪೋಲಿಯೊ ಪ್ರಕರಣಗಳು ಇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ದೇಶದಲ್ಲಿ ಇನ್ನೂ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ನಡೆಸಲಾಗುತ್ತಿದೆ ಪೋಷಕರು 5 ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ ಅಭಿಯಾನ ಆಶಯ ಈಡೇರಿಕೆಗೆ ಸಹಕರಿಸಬೇಕು ಎಂದರು
ಈ ಸಂದರ್ಭದಲ್ಲಿ ಕೋಲಾರ ರೋಟರಿ ಸಂಸ್ಥೆಯ ಅಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ವಿಶ್ವನಾಥ್, ಸೇವಾದಳ ಜಿಲ್ಲಾ ಅಧ್ಯಕ್ಷ ಕೆ.ಎಸ್ ಗಣೇಶ್, ಬಲಿಜ ಸಂಘದ ತೋಟಗಳ ಅಶೋಕ್, ರೋಟರಿ ಸಂಸ್ಥೆಯ ಸುಧಾಕರ್, ರಮೇಶ್, ಅಮರಾ ಜ್ಯೋತಿ ಶಾಲೆಯ ಮುಖ್ಯಸ್ಥ ಕೆ.ಎಸ್.ಆರ್.ಟಿ.ಸಿ ಮುನಿಯಪ್ಪ, ಸೇರಿದಂತೆ ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…