ಕೋಲಾರ: ವಿಶ್ವ ಪೋಲಿಯೋ ದಿನದ ಅಂಗವಾಗಿ ನಗರದಲ್ಲಿ ಕೋಲಾರ ರೋಟರಿ ಸಂಸ್ಥೆ ವತಿಯಿಂದ ಶನಿವಾರ ಅಭಿಯಾನದ ಜಾಗೃತಿ ಜಾಥಾವನ್ನು ನಗರದ ಅಮರ ಜ್ಯೋತಿ ಪಬ್ಲಿಕ್ ಶಾಲೆಯಿಂದ ಪ್ರಾರಂಭವಾಗಿ ಹೊಸ ಬಸ್ ನಿಲ್ದಾಣ, ಅಂತರಗಂಗೆ ರಸ್ತೆ, ಸೇರಿದಂತೆ ಕೀಲುಕೋಟೆಯ ಮುಖಾಂತರ ಸಾಗಿ ಸಾರ್ವಜನಿಕರಲ್ಲಿ ಪೋಲಿಯೋ ನಿರ್ಮೂಲನೆ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ರೋಟರಿ ಸಂಸ್ಥೆ ನಿರ್ಗಮಿತ ಅಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆಯು ಬಹಳ ದೊಡ್ಡ ಪಾತ್ರವನ್ನು ವಹಿಸಿದೆ ಜಗತ್ತಿನಾದ್ಯಂತ ಜಾಗತಿಕ ಪಿಡುಗಾಗಿದ್ದ ಪೋಲಿಯೋ ನಿರ್ಮೂಲನೆ ಮಾಡಲು ರೋಟರಿ ಸಂಸ್ಥೆ 1985ರಲ್ಲಿ ಪಣ ತೊಟ್ಟಿತು. ಜಗತ್ತಿನಾದ್ಯಂತ ಸರ್ಕಾರಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಜತೆಯಲ್ಲಿ ಕೈಜೋಡಿಸಿ ಪೋಲಿಯೋ ನಿರ್ಮೂಲನೆ ಮಾಡಲು ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡು ಅದರಲ್ಲಿ ಯಶಸ್ವಿಯಾಗಿದೆ ಎಂದರು.
ಮನುಷ್ಯನ ಅಂಗವಿಕಲತೆಯನ್ನು ಹೋಗಲಾಡಿಸಲು ಪಲ್ಸ್ ಪೋಲಿಯೊ ಸಹಕಾರಿಯಾಗಿದೆ ಅದರಿಂದಲೇ ವಿಶ್ವವನ್ನು ಪೋಲಿಯೊ ಮುಕ್ತಗೊಳಿಸಲು ಸಂಕಲ್ಪ ತೊಟ್ಟಿದೆ ಇದರ ಗುರಿ ಸಾಧನೆಗೆ ನಿರಂತರವಾಗಿ ಸಾರ್ವಜನಿಕರು ತಮ್ಮ ಜವಾಬ್ದಾರಿ ಎನ್ನುವ ರೀತಿಯಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕು ವಿಧ್ಯಾರ್ಥಿಗಳು ಸಹ ಇಂತಹ ವಿಚಾರಗಳ ಬಗ್ಗೆ ತಮ್ಮ ಮನೆಗಳಲ್ಲಿ ಮನವಿ ಮಾಡಿಸಬೇಕು ಪೋಲಿಯೊ ಮುಕ್ತ ರಾಷ್ಟ್ರವಾಗಿ ಮಾಡಲು ಮಾರ್ಚ್ ೩ ರಂದು ತಮ್ಮ ಮನೆಯ ಮತ್ತು ಸುತ್ತಮುತ್ತಲಿನಲ್ಲಿರುವ ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕು ಅರೋಗ್ಯ ಅಧಿಕಾರಿ ಡಾ.ನಾರಾಯಣಸ್ವಾಮಿ ಮಾತನಾಡಿ ವಿಶ್ವ ಆರೋಗ್ಯ ಸಂಸ್ಥೆಯು 2014 ರಲ್ಲೇ ಭಾರತವನ್ನು ಪೊಲಿಯೋ ಮುಕ್ತ ರಾಷ್ಟ್ರ ಎಂದು ಘೋಷಿಸಿದೆ. ಆದರೆ, ನೆರೆಯ ರಾಷ್ಟ್ರಗಳಲ್ಲಿ ಕೆಲ ಪೋಲಿಯೊ ಪ್ರಕರಣಗಳು ಇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ದೇಶದಲ್ಲಿ ಇನ್ನೂ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ನಡೆಸಲಾಗುತ್ತಿದೆ ಪೋಷಕರು 5 ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ ಅಭಿಯಾನ ಆಶಯ ಈಡೇರಿಕೆಗೆ ಸಹಕರಿಸಬೇಕು ಎಂದರು
ಈ ಸಂದರ್ಭದಲ್ಲಿ ಕೋಲಾರ ರೋಟರಿ ಸಂಸ್ಥೆಯ ಅಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ವಿಶ್ವನಾಥ್, ಸೇವಾದಳ ಜಿಲ್ಲಾ ಅಧ್ಯಕ್ಷ ಕೆ.ಎಸ್ ಗಣೇಶ್, ಬಲಿಜ ಸಂಘದ ತೋಟಗಳ ಅಶೋಕ್, ರೋಟರಿ ಸಂಸ್ಥೆಯ ಸುಧಾಕರ್, ರಮೇಶ್, ಅಮರಾ ಜ್ಯೋತಿ ಶಾಲೆಯ ಮುಖ್ಯಸ್ಥ ಕೆ.ಎಸ್.ಆರ್.ಟಿ.ಸಿ ಮುನಿಯಪ್ಪ, ಸೇರಿದಂತೆ ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…