ರೋಬೋಟ್‌ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟ ಸಚಿವ ರಾಮಲಿಂಗಾರೆಡ್ಡಿ: ತಮ್ಮ ಶೀಘ್ರ ಚೇತರಿಕೆಯ ಅನುಭವ ಹಂಚಿಕೊಂಡ ಸಚಿವ

ಬೆಂಗಳೂರು: ರೋಬೋಟ್‌ ನೆರವಿನಿಂದ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದು, ನನ್ನ ಶೀಘ್ರಚೇತರಿಕೆಗೆ ಹೆಚ್ಚು ಸಹಕಾರಿಯಾಯಿತು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೊಣಕಾಲು ಕೀಲು ಬದಲಾವಣೆ ಶಸ್ತ್ರಚಿಕಿತ್ಸೆ ಒಳಪಟ್ಟು, ಚೇತರಿಸಿಕೊಂಡವರ ಬೆಂಬಲಕ್ಕಾಗಿ ಆಯೋಜಿಸಿದ್ದ “ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌” ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೆಲವು ಸಮಯದಿಂದ ಮೊಣಕಾಲಿನ ನೋವು ಕಾಡಲಾರಂಭಿಸಿತು, ಮೆಟ್ಟಿಲು ಸಹ ಹತ್ತಲು ಸಾಧ್ಯವಾಗುತ್ತಿರಲಿಲ್ಲ, ಹಲವಾರು ಜನ ಹಲವು ರೀತಿಯ ಸಲಹೆ ನೀಡಿದರು, ಮಂಡಿನೋವಿಗೆ ತೈಲವನ್ನೂ ಸಹ ಹಚ್ಚಿಬಿಟ್ಟೆ, ಆದರೂ ಯಾವುದೇ ಪ್ರಯೋಜನ ಕಾಣಲಿಲ್ಲ. ನಂತರ ಸ್ನೇಹಿತರ ಸಲಹೆಯಂತೆ ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಡಾ.ನಾರಾಯಣ್ ಹುಲ್ಸೆ ಅವರನ್ನು ಭೇಟಿ ಮಾಡಿ, ತಪಾಸಣೆಗೆ ಒಳಗಾದಾಗ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯ ಸಲಹೆ ನೀಡಿದರು. ಪ್ರಾರಂಭದಲ್ಲಿ ಶಸ್ತ್ರಚಿಕಿತ್ಸೆ ಬಗ್ಗೆ ಹಿಂಜರಿಕೆ ಇತ್ತು, ಆದರೆ, ರೋಬೋಟ್‌ ನೆರವಿನಿಂದ ನಿಖರವಾಗಿ ಹಾಗೂ ಅತಿವೇಗವಾಗಿ ಚೇತರಿಕೆ ಕಾಣಬಹುದು ಎಂಬುದರ ಬಗ್ಗೆ ವೈದ್ಯರ ಭರವಸೆ ನೀಡಿದ ಬಳಿಕ ತೆರೆದ ಶಸ್ತ್ರಚಿಕಿತ್ಸೆ ಬದಲು ರೋಬೋಟ್‌ ನೆರವಿನ ಶಸ್ತ್ರಚಿಕಿತ್ಸೆ ಆಯ್ದುಕೊಂಡೆ. ಅಂತೆಯೇ ಶಸ್ತ್ರಚಿಕಿತ್ಸೆ ಬಳಿಕ ನನ್ನ ನಿರೀಕ್ಷೆಗೂ ಮೀರಿ ಶೀಘ್ರವಾಗಿ ಚೇತರಿಕೆ ಕಂಡಿದ್ದೇನೆ. ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಗಾಗುವವರು ರೋಬೋಟ್‌ ನೆರವನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ ಎಂಬುದು ನನ್ನ ಅನಿಸಿಕೆ. ಇಲ್ಲಿನ ವೈದ್ಯ ತಂಡವು ಸಹ ಸೂಕ್ತ ಮಾಹಿತಿಯೊಂದಿಗೆ, ಅತ್ಯಾಧುನಿಕ ತಂತ್ರಜ್ಞಾನ ಬಳಕೆಯಿಂದ ಉತ್ತಮ ರೀತಿಯಲ್ಲಿ ನನ್ನ ಕ್ಷೇಮಸಮಾಚಾರ ನೋಡಿಕೊಂಡರು ಎಂದು ಹೇಳಿದರು.

ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಗಾದ ಪ್ರತಿಯೊಬ್ಬರು ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌ ಕಾರ್ಯಕ್ರಮದ ಅಡಿ ಭಾಗಿಯಾಗಿರುವುದು ಸಾಕಷ್ಟು ಜನರಿಗೆ ಸ್ಪೂರ್ತಿದಾಯಕವಾಗಿದೆ. ಹಲವರು ಮೊಣಕಾಲು ನೋವಿನಿಂದ ಬಳಲುತ್ತಿದ್ದರೂ, ಶಸ್ತ್ರಚಿಕಿತ್ಸೆಯ ಬೀತಿಯಿಂದ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೇ ನೋವಿನಲ್ಲೇ ನರಳುತ್ತಿರುತ್ತಾರೆ, ನಮ್ಮಂತಹ ನೂರಾರು ಜನರ ಅನುಭವವು ಬೇರೆಯವರಿಗೆ ಸ್ಪೂರ್ತಿಯಾಗಲಿ ಎಂದರು.

ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಶಾಖೆಯ ಅಧ್ಯಕ್ಷರಾದ ಡಾ.ವಿ.ವಿ. ಚಿನಿವಾಲರ್‌ ಮಾತನಾಡಿ, ನಾನೂ ಸಹ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟು, ಚೇತರಿಕೆ ಕಂಡಿದ್ದೇನೆ, ವೈದ್ಯಕೀಯ ಲೋಕದಲ್ಲಿ ರೋಬೋಟ್‌ನ ಆಗಮನ ರೋಗಿಗಳಿಗೆ ಹೆಚ್ಚು ಅನುಕೂಲವಾಗಿದೆ ಎಂದರು.

ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಡಾ.ನಾರಾಯಣ್ ಹುಲ್ಸೆ ಮಾತನಾಡಿ, ಇಂದು ರೋಬೋಟ್‌ ನೆರವು ವೈದ್ಯಲೋಕದಲ್ಲಿ ಹೊಸ ಅದ್ಯಾಯ ಸೃಷ್ಟಿಸಿದೆ. ಅದರಲ್ಲೂ ಮೊಣಕಾಲು, ಸೊಂಟ ಇತರೆ ಕೀಲು ಬದಲಾವಣೆಗೆ ರೋಬೋಟ್‌ ಅತ್ಯಂತ ನಿಖರವಾಗಿ ಶಸ್ತ್ರಚಿಕಿತ್ಸೆಗೆ ಸಹಕಾರಿಯಾಗಿದೆ. ಹೀಗಾಗಿಯೇ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌ ಕಾರ್ಯಕ್ರಮ ಚಾಲನೆ ನೀಡಿದ್ದೇನೆ. ಫೋರ್ಟಿಸ್ ಸ್ಟ್ರೈಡ್ ಎನ್ನುವುದು ಕೀಲು ಆರೋಗ್ಯ ಸವಾಲುಗಳಿಂದ ಪ್ರಭಾವಿತ ವ್ಯಕ್ತಿಗಳನ್ನು ಸಬಲೀಕರಣಗೊಳಿಸಲು ವಿನ್ಯಾಸಗೊಳಿಸಲಾದ ಬೆಂಬಲ ಗುಂಪಾಗಿದೆ. ಇದು ಅನುಭವಗಳನ್ನು ಹಂಚಿಕೊಳ್ಳಲು, ತಜ್ಞರ ಒಳನೋಟಗಳನ್ನು ಪಡೆಯಲು ಮತ್ತು ಸುಧಾರಿತ ಚೇತರಿಕೆಗಾಗಿ ಅಮೂಲ್ಯವಾದ ಮಾರ್ಗದರ್ಶನವನ್ನು ಪಡೆಯುವ ವೇದಿಕೆಯಾಗಿದೆ ಎಂದು ವಿವರಿಸಿದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

14 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

19 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

19 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

24 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago