ರೋಬೋಟ್‌ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟ ಸಚಿವ ರಾಮಲಿಂಗಾರೆಡ್ಡಿ: ತಮ್ಮ ಶೀಘ್ರ ಚೇತರಿಕೆಯ ಅನುಭವ ಹಂಚಿಕೊಂಡ ಸಚಿವ

ಬೆಂಗಳೂರು: ರೋಬೋಟ್‌ ನೆರವಿನಿಂದ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದು, ನನ್ನ ಶೀಘ್ರಚೇತರಿಕೆಗೆ ಹೆಚ್ಚು ಸಹಕಾರಿಯಾಯಿತು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೊಣಕಾಲು ಕೀಲು ಬದಲಾವಣೆ ಶಸ್ತ್ರಚಿಕಿತ್ಸೆ ಒಳಪಟ್ಟು, ಚೇತರಿಸಿಕೊಂಡವರ ಬೆಂಬಲಕ್ಕಾಗಿ ಆಯೋಜಿಸಿದ್ದ “ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌” ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೆಲವು ಸಮಯದಿಂದ ಮೊಣಕಾಲಿನ ನೋವು ಕಾಡಲಾರಂಭಿಸಿತು, ಮೆಟ್ಟಿಲು ಸಹ ಹತ್ತಲು ಸಾಧ್ಯವಾಗುತ್ತಿರಲಿಲ್ಲ, ಹಲವಾರು ಜನ ಹಲವು ರೀತಿಯ ಸಲಹೆ ನೀಡಿದರು, ಮಂಡಿನೋವಿಗೆ ತೈಲವನ್ನೂ ಸಹ ಹಚ್ಚಿಬಿಟ್ಟೆ, ಆದರೂ ಯಾವುದೇ ಪ್ರಯೋಜನ ಕಾಣಲಿಲ್ಲ. ನಂತರ ಸ್ನೇಹಿತರ ಸಲಹೆಯಂತೆ ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಡಾ.ನಾರಾಯಣ್ ಹುಲ್ಸೆ ಅವರನ್ನು ಭೇಟಿ ಮಾಡಿ, ತಪಾಸಣೆಗೆ ಒಳಗಾದಾಗ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯ ಸಲಹೆ ನೀಡಿದರು. ಪ್ರಾರಂಭದಲ್ಲಿ ಶಸ್ತ್ರಚಿಕಿತ್ಸೆ ಬಗ್ಗೆ ಹಿಂಜರಿಕೆ ಇತ್ತು, ಆದರೆ, ರೋಬೋಟ್‌ ನೆರವಿನಿಂದ ನಿಖರವಾಗಿ ಹಾಗೂ ಅತಿವೇಗವಾಗಿ ಚೇತರಿಕೆ ಕಾಣಬಹುದು ಎಂಬುದರ ಬಗ್ಗೆ ವೈದ್ಯರ ಭರವಸೆ ನೀಡಿದ ಬಳಿಕ ತೆರೆದ ಶಸ್ತ್ರಚಿಕಿತ್ಸೆ ಬದಲು ರೋಬೋಟ್‌ ನೆರವಿನ ಶಸ್ತ್ರಚಿಕಿತ್ಸೆ ಆಯ್ದುಕೊಂಡೆ. ಅಂತೆಯೇ ಶಸ್ತ್ರಚಿಕಿತ್ಸೆ ಬಳಿಕ ನನ್ನ ನಿರೀಕ್ಷೆಗೂ ಮೀರಿ ಶೀಘ್ರವಾಗಿ ಚೇತರಿಕೆ ಕಂಡಿದ್ದೇನೆ. ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಗಾಗುವವರು ರೋಬೋಟ್‌ ನೆರವನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ ಎಂಬುದು ನನ್ನ ಅನಿಸಿಕೆ. ಇಲ್ಲಿನ ವೈದ್ಯ ತಂಡವು ಸಹ ಸೂಕ್ತ ಮಾಹಿತಿಯೊಂದಿಗೆ, ಅತ್ಯಾಧುನಿಕ ತಂತ್ರಜ್ಞಾನ ಬಳಕೆಯಿಂದ ಉತ್ತಮ ರೀತಿಯಲ್ಲಿ ನನ್ನ ಕ್ಷೇಮಸಮಾಚಾರ ನೋಡಿಕೊಂಡರು ಎಂದು ಹೇಳಿದರು.

ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಗಾದ ಪ್ರತಿಯೊಬ್ಬರು ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌ ಕಾರ್ಯಕ್ರಮದ ಅಡಿ ಭಾಗಿಯಾಗಿರುವುದು ಸಾಕಷ್ಟು ಜನರಿಗೆ ಸ್ಪೂರ್ತಿದಾಯಕವಾಗಿದೆ. ಹಲವರು ಮೊಣಕಾಲು ನೋವಿನಿಂದ ಬಳಲುತ್ತಿದ್ದರೂ, ಶಸ್ತ್ರಚಿಕಿತ್ಸೆಯ ಬೀತಿಯಿಂದ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೇ ನೋವಿನಲ್ಲೇ ನರಳುತ್ತಿರುತ್ತಾರೆ, ನಮ್ಮಂತಹ ನೂರಾರು ಜನರ ಅನುಭವವು ಬೇರೆಯವರಿಗೆ ಸ್ಪೂರ್ತಿಯಾಗಲಿ ಎಂದರು.

ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಶಾಖೆಯ ಅಧ್ಯಕ್ಷರಾದ ಡಾ.ವಿ.ವಿ. ಚಿನಿವಾಲರ್‌ ಮಾತನಾಡಿ, ನಾನೂ ಸಹ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟು, ಚೇತರಿಕೆ ಕಂಡಿದ್ದೇನೆ, ವೈದ್ಯಕೀಯ ಲೋಕದಲ್ಲಿ ರೋಬೋಟ್‌ನ ಆಗಮನ ರೋಗಿಗಳಿಗೆ ಹೆಚ್ಚು ಅನುಕೂಲವಾಗಿದೆ ಎಂದರು.

ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಡಾ.ನಾರಾಯಣ್ ಹುಲ್ಸೆ ಮಾತನಾಡಿ, ಇಂದು ರೋಬೋಟ್‌ ನೆರವು ವೈದ್ಯಲೋಕದಲ್ಲಿ ಹೊಸ ಅದ್ಯಾಯ ಸೃಷ್ಟಿಸಿದೆ. ಅದರಲ್ಲೂ ಮೊಣಕಾಲು, ಸೊಂಟ ಇತರೆ ಕೀಲು ಬದಲಾವಣೆಗೆ ರೋಬೋಟ್‌ ಅತ್ಯಂತ ನಿಖರವಾಗಿ ಶಸ್ತ್ರಚಿಕಿತ್ಸೆಗೆ ಸಹಕಾರಿಯಾಗಿದೆ. ಹೀಗಾಗಿಯೇ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌ ಕಾರ್ಯಕ್ರಮ ಚಾಲನೆ ನೀಡಿದ್ದೇನೆ. ಫೋರ್ಟಿಸ್ ಸ್ಟ್ರೈಡ್ ಎನ್ನುವುದು ಕೀಲು ಆರೋಗ್ಯ ಸವಾಲುಗಳಿಂದ ಪ್ರಭಾವಿತ ವ್ಯಕ್ತಿಗಳನ್ನು ಸಬಲೀಕರಣಗೊಳಿಸಲು ವಿನ್ಯಾಸಗೊಳಿಸಲಾದ ಬೆಂಬಲ ಗುಂಪಾಗಿದೆ. ಇದು ಅನುಭವಗಳನ್ನು ಹಂಚಿಕೊಳ್ಳಲು, ತಜ್ಞರ ಒಳನೋಟಗಳನ್ನು ಪಡೆಯಲು ಮತ್ತು ಸುಧಾರಿತ ಚೇತರಿಕೆಗಾಗಿ ಅಮೂಲ್ಯವಾದ ಮಾರ್ಗದರ್ಶನವನ್ನು ಪಡೆಯುವ ವೇದಿಕೆಯಾಗಿದೆ ಎಂದು ವಿವರಿಸಿದರು.

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

7 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

8 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

9 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

11 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

18 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

18 hours ago