ರೋಬೋಟ್‌ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟ ಸಚಿವ ರಾಮಲಿಂಗಾರೆಡ್ಡಿ: ತಮ್ಮ ಶೀಘ್ರ ಚೇತರಿಕೆಯ ಅನುಭವ ಹಂಚಿಕೊಂಡ ಸಚಿವ

ಬೆಂಗಳೂರು: ರೋಬೋಟ್‌ ನೆರವಿನಿಂದ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದು, ನನ್ನ ಶೀಘ್ರಚೇತರಿಕೆಗೆ ಹೆಚ್ಚು ಸಹಕಾರಿಯಾಯಿತು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೊಣಕಾಲು ಕೀಲು ಬದಲಾವಣೆ ಶಸ್ತ್ರಚಿಕಿತ್ಸೆ ಒಳಪಟ್ಟು, ಚೇತರಿಸಿಕೊಂಡವರ ಬೆಂಬಲಕ್ಕಾಗಿ ಆಯೋಜಿಸಿದ್ದ “ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌” ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೆಲವು ಸಮಯದಿಂದ ಮೊಣಕಾಲಿನ ನೋವು ಕಾಡಲಾರಂಭಿಸಿತು, ಮೆಟ್ಟಿಲು ಸಹ ಹತ್ತಲು ಸಾಧ್ಯವಾಗುತ್ತಿರಲಿಲ್ಲ, ಹಲವಾರು ಜನ ಹಲವು ರೀತಿಯ ಸಲಹೆ ನೀಡಿದರು, ಮಂಡಿನೋವಿಗೆ ತೈಲವನ್ನೂ ಸಹ ಹಚ್ಚಿಬಿಟ್ಟೆ, ಆದರೂ ಯಾವುದೇ ಪ್ರಯೋಜನ ಕಾಣಲಿಲ್ಲ. ನಂತರ ಸ್ನೇಹಿತರ ಸಲಹೆಯಂತೆ ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಡಾ.ನಾರಾಯಣ್ ಹುಲ್ಸೆ ಅವರನ್ನು ಭೇಟಿ ಮಾಡಿ, ತಪಾಸಣೆಗೆ ಒಳಗಾದಾಗ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯ ಸಲಹೆ ನೀಡಿದರು. ಪ್ರಾರಂಭದಲ್ಲಿ ಶಸ್ತ್ರಚಿಕಿತ್ಸೆ ಬಗ್ಗೆ ಹಿಂಜರಿಕೆ ಇತ್ತು, ಆದರೆ, ರೋಬೋಟ್‌ ನೆರವಿನಿಂದ ನಿಖರವಾಗಿ ಹಾಗೂ ಅತಿವೇಗವಾಗಿ ಚೇತರಿಕೆ ಕಾಣಬಹುದು ಎಂಬುದರ ಬಗ್ಗೆ ವೈದ್ಯರ ಭರವಸೆ ನೀಡಿದ ಬಳಿಕ ತೆರೆದ ಶಸ್ತ್ರಚಿಕಿತ್ಸೆ ಬದಲು ರೋಬೋಟ್‌ ನೆರವಿನ ಶಸ್ತ್ರಚಿಕಿತ್ಸೆ ಆಯ್ದುಕೊಂಡೆ. ಅಂತೆಯೇ ಶಸ್ತ್ರಚಿಕಿತ್ಸೆ ಬಳಿಕ ನನ್ನ ನಿರೀಕ್ಷೆಗೂ ಮೀರಿ ಶೀಘ್ರವಾಗಿ ಚೇತರಿಕೆ ಕಂಡಿದ್ದೇನೆ. ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಗಾಗುವವರು ರೋಬೋಟ್‌ ನೆರವನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ ಎಂಬುದು ನನ್ನ ಅನಿಸಿಕೆ. ಇಲ್ಲಿನ ವೈದ್ಯ ತಂಡವು ಸಹ ಸೂಕ್ತ ಮಾಹಿತಿಯೊಂದಿಗೆ, ಅತ್ಯಾಧುನಿಕ ತಂತ್ರಜ್ಞಾನ ಬಳಕೆಯಿಂದ ಉತ್ತಮ ರೀತಿಯಲ್ಲಿ ನನ್ನ ಕ್ಷೇಮಸಮಾಚಾರ ನೋಡಿಕೊಂಡರು ಎಂದು ಹೇಳಿದರು.

ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಗಾದ ಪ್ರತಿಯೊಬ್ಬರು ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌ ಕಾರ್ಯಕ್ರಮದ ಅಡಿ ಭಾಗಿಯಾಗಿರುವುದು ಸಾಕಷ್ಟು ಜನರಿಗೆ ಸ್ಪೂರ್ತಿದಾಯಕವಾಗಿದೆ. ಹಲವರು ಮೊಣಕಾಲು ನೋವಿನಿಂದ ಬಳಲುತ್ತಿದ್ದರೂ, ಶಸ್ತ್ರಚಿಕಿತ್ಸೆಯ ಬೀತಿಯಿಂದ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೇ ನೋವಿನಲ್ಲೇ ನರಳುತ್ತಿರುತ್ತಾರೆ, ನಮ್ಮಂತಹ ನೂರಾರು ಜನರ ಅನುಭವವು ಬೇರೆಯವರಿಗೆ ಸ್ಪೂರ್ತಿಯಾಗಲಿ ಎಂದರು.

ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಶಾಖೆಯ ಅಧ್ಯಕ್ಷರಾದ ಡಾ.ವಿ.ವಿ. ಚಿನಿವಾಲರ್‌ ಮಾತನಾಡಿ, ನಾನೂ ಸಹ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟು, ಚೇತರಿಕೆ ಕಂಡಿದ್ದೇನೆ, ವೈದ್ಯಕೀಯ ಲೋಕದಲ್ಲಿ ರೋಬೋಟ್‌ನ ಆಗಮನ ರೋಗಿಗಳಿಗೆ ಹೆಚ್ಚು ಅನುಕೂಲವಾಗಿದೆ ಎಂದರು.

ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಡಾ.ನಾರಾಯಣ್ ಹುಲ್ಸೆ ಮಾತನಾಡಿ, ಇಂದು ರೋಬೋಟ್‌ ನೆರವು ವೈದ್ಯಲೋಕದಲ್ಲಿ ಹೊಸ ಅದ್ಯಾಯ ಸೃಷ್ಟಿಸಿದೆ. ಅದರಲ್ಲೂ ಮೊಣಕಾಲು, ಸೊಂಟ ಇತರೆ ಕೀಲು ಬದಲಾವಣೆಗೆ ರೋಬೋಟ್‌ ಅತ್ಯಂತ ನಿಖರವಾಗಿ ಶಸ್ತ್ರಚಿಕಿತ್ಸೆಗೆ ಸಹಕಾರಿಯಾಗಿದೆ. ಹೀಗಾಗಿಯೇ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌ ಕಾರ್ಯಕ್ರಮ ಚಾಲನೆ ನೀಡಿದ್ದೇನೆ. ಫೋರ್ಟಿಸ್ ಸ್ಟ್ರೈಡ್ ಎನ್ನುವುದು ಕೀಲು ಆರೋಗ್ಯ ಸವಾಲುಗಳಿಂದ ಪ್ರಭಾವಿತ ವ್ಯಕ್ತಿಗಳನ್ನು ಸಬಲೀಕರಣಗೊಳಿಸಲು ವಿನ್ಯಾಸಗೊಳಿಸಲಾದ ಬೆಂಬಲ ಗುಂಪಾಗಿದೆ. ಇದು ಅನುಭವಗಳನ್ನು ಹಂಚಿಕೊಳ್ಳಲು, ತಜ್ಞರ ಒಳನೋಟಗಳನ್ನು ಪಡೆಯಲು ಮತ್ತು ಸುಧಾರಿತ ಚೇತರಿಕೆಗಾಗಿ ಅಮೂಲ್ಯವಾದ ಮಾರ್ಗದರ್ಶನವನ್ನು ಪಡೆಯುವ ವೇದಿಕೆಯಾಗಿದೆ ಎಂದು ವಿವರಿಸಿದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

8 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

20 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

21 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

22 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

22 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago