Categories: ರಾಜ್ಯ

ರೋಹಿಣಿ ಸಿಂಧೂರಿ ಹಾಗೂ ರೂಪಾ ಮೌದ್ಗಿಲ್ ನಡುವಿನ ಜಟಾಪಟಿ ಪ್ರಕರಣ: ಕೋರ್ಟ್ ಗೆ ಹಾಜರಾಗಿ ಜಾಮೀನು ಪಡೆದ ಡಿ.ರೂಪಾ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ನಡುವಿನ ಜಟಾಪಟಿ ಪ್ರಕರಣ ಈಗ ಮತ್ತೊಂದು ಟ್ವಿಸ್ಟ್‌ ಪಡೆದುಕೊಂಡಿದೆ. ಐಪಿಎಸ್‌ ಅಧಿಕಾರಿ ಡಿ. ರೂಪಾ ವಿರುದ್ಧ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ಈ ಹಿನ್ನೆಲೆ ಡಿ. ರೂಪಾ ಅವರು ನಗರದ ಕೋರ್ಟ್‌ಗೆ ಹಾಜರಾಗಿದ್ದರು.

ಈ ಮೂಲಕ ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳಿಬ್ಬರ ಜಟಾಪಟಿ ಮತ್ತೊಂದು ಹಂತಕ್ಕೆ ಹೋಗಿದೆ. ಮಾನನಷ್ಟ ‌ಮೊಕದ್ದಮೆ ಹಿನ್ನೆಲೆ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಐಜಿಪಿ ರೂಪಾ ಮೌದ್ಗಿಲ್‌ಗೆ ಸಮನ್ಸ್‌ ಜಾರಿ ಮಾಡಿತ್ತು. ಸಮನ್ಸ್ ಜಾರಿ ಹಿನ್ನೆಲೆ ಮಂಗಳವಾರ ಡಿ. ರೂಪಾ ಕೋರ್ಟ್‌ಗೆ ಹಾಜರಾಗಿ ಜಾಮೀನು ಪಡೆದಿದ್ದಾರೆ. 25 ಸಾವಿರ ಬಾಂಡ್ ಷರತ್ತಿನೊಂದಿಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಐಜಿಪಿ ಡಿ. ರೂಪಾ ಮೌದ್ಗಿಲ್‌ ಅವರಿಗೆ ಜಾಮೀನು ನೀಡಿದೆ ಎಂದು ತಿಳಿದುಬಂದಿದೆ.

ಈ ಇಬ್ಬರು ಅಧಿಕಾರಿಗಳ ಜಟಾಪಟಿಗೆ ಕಾರಣ

ರೂಪಾ ಮೌದ್ಗಿಲ್‌ ಅವರು 2023ರ ಫೆಬ್ರವರಿ 18 ಮತ್ತು 19ರಂದು ತಮ್ಮ ಫೇಸ್‌ಬುಕ್‌ ಅಕೌಂಟ್‌ನಲ್ಲಿ ತಮ್ಮ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ಹಾಗೆ ಸಾಮಾಜಿಕ ಜಾಲತಾಣದಲ್ಲೂ ಹೇಳಿಕೆ ನೀಡಿದ್ದರು. ಆ ಆರೋಪಗಳು ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ತಮ್ಮ ತೇಜೋವಧೆ ಮಾಡುವ ದುರುದ್ದೇಶದಿಂದಲೇ ರೂಪಾ ಅವರು ಈ ಕೃತ್ಯ ಎಸಗಿದ್ದಾರೆ. ಅವರ ಈ ಕೃತ್ಯ ತಮ್ಮ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಮಾನಸಿಕ ಯಾತನೆ ಉಂಟು ಮಾಡಿವೆ ಎಂದು ರೋಹಿಣಿ ಸಿಂಧೂರಿ ಆರೋಪಿಸಿದ್ದಾರೆ.

ಅಲ್ಲದೆ, ಮಾನಹಾನಿ ಮಾಡಿ ಮಾನಸಿಕ ಯಾತನೆ ಉಂಟು ಮಾಡಿರುವುದಕ್ಕಾಗಿ ಡಿ. ರೂಪಾ ಅವರಿಂದ ಒಂದು ಕೋಟಿ ರೂಪಾಯಿಯನ್ನು ಪರಿಹಾರವಾಗಿ ಕೊಡಿಸಿಕೊಡಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ರೋಹಿಣಿ ಸಿಂಧೂರಿ ಅವರು ದೂರಿನಲ್ಲಿ ಕೋರಿದ್ದಾರೆ.

Ramesh Babu

Journalist

Recent Posts

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

2 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

2 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

9 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

9 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

12 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

15 hours ago