ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ನಡುವಿನ ಜಟಾಪಟಿ ಪ್ರಕರಣ ಈಗ ಮತ್ತೊಂದು ಟ್ವಿಸ್ಟ್ ಪಡೆದುಕೊಂಡಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ಈ ಹಿನ್ನೆಲೆ ಡಿ. ರೂಪಾ ಅವರು ನಗರದ ಕೋರ್ಟ್ಗೆ ಹಾಜರಾಗಿದ್ದರು.
ಈ ಮೂಲಕ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಿಬ್ಬರ ಜಟಾಪಟಿ ಮತ್ತೊಂದು ಹಂತಕ್ಕೆ ಹೋಗಿದೆ. ಮಾನನಷ್ಟ ಮೊಕದ್ದಮೆ ಹಿನ್ನೆಲೆ ಮ್ಯಾಜಿಸ್ಟ್ರೇಟ್ ಕೋರ್ಟ್ ಐಜಿಪಿ ರೂಪಾ ಮೌದ್ಗಿಲ್ಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿ ಹಿನ್ನೆಲೆ ಮಂಗಳವಾರ ಡಿ. ರೂಪಾ ಕೋರ್ಟ್ಗೆ ಹಾಜರಾಗಿ ಜಾಮೀನು ಪಡೆದಿದ್ದಾರೆ. 25 ಸಾವಿರ ಬಾಂಡ್ ಷರತ್ತಿನೊಂದಿಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಐಜಿಪಿ ಡಿ. ರೂಪಾ ಮೌದ್ಗಿಲ್ ಅವರಿಗೆ ಜಾಮೀನು ನೀಡಿದೆ ಎಂದು ತಿಳಿದುಬಂದಿದೆ.
ಈ ಇಬ್ಬರು ಅಧಿಕಾರಿಗಳ ಜಟಾಪಟಿಗೆ ಕಾರಣ
ರೂಪಾ ಮೌದ್ಗಿಲ್ ಅವರು 2023ರ ಫೆಬ್ರವರಿ 18 ಮತ್ತು 19ರಂದು ತಮ್ಮ ಫೇಸ್ಬುಕ್ ಅಕೌಂಟ್ನಲ್ಲಿ ತಮ್ಮ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ಹಾಗೆ ಸಾಮಾಜಿಕ ಜಾಲತಾಣದಲ್ಲೂ ಹೇಳಿಕೆ ನೀಡಿದ್ದರು. ಆ ಆರೋಪಗಳು ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ತಮ್ಮ ತೇಜೋವಧೆ ಮಾಡುವ ದುರುದ್ದೇಶದಿಂದಲೇ ರೂಪಾ ಅವರು ಈ ಕೃತ್ಯ ಎಸಗಿದ್ದಾರೆ. ಅವರ ಈ ಕೃತ್ಯ ತಮ್ಮ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಮಾನಸಿಕ ಯಾತನೆ ಉಂಟು ಮಾಡಿವೆ ಎಂದು ರೋಹಿಣಿ ಸಿಂಧೂರಿ ಆರೋಪಿಸಿದ್ದಾರೆ.
ಅಲ್ಲದೆ, ಮಾನಹಾನಿ ಮಾಡಿ ಮಾನಸಿಕ ಯಾತನೆ ಉಂಟು ಮಾಡಿರುವುದಕ್ಕಾಗಿ ಡಿ. ರೂಪಾ ಅವರಿಂದ ಒಂದು ಕೋಟಿ ರೂಪಾಯಿಯನ್ನು ಪರಿಹಾರವಾಗಿ ಕೊಡಿಸಿಕೊಡಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ರೋಹಿಣಿ ಸಿಂಧೂರಿ ಅವರು ದೂರಿನಲ್ಲಿ ಕೋರಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…