ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ನಡುವಿನ ಜಟಾಪಟಿ ಪ್ರಕರಣ ಈಗ ಮತ್ತೊಂದು ಟ್ವಿಸ್ಟ್ ಪಡೆದುಕೊಂಡಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ಈ ಹಿನ್ನೆಲೆ ಡಿ. ರೂಪಾ ಅವರು ನಗರದ ಕೋರ್ಟ್ಗೆ ಹಾಜರಾಗಿದ್ದರು.
ಈ ಮೂಲಕ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಿಬ್ಬರ ಜಟಾಪಟಿ ಮತ್ತೊಂದು ಹಂತಕ್ಕೆ ಹೋಗಿದೆ. ಮಾನನಷ್ಟ ಮೊಕದ್ದಮೆ ಹಿನ್ನೆಲೆ ಮ್ಯಾಜಿಸ್ಟ್ರೇಟ್ ಕೋರ್ಟ್ ಐಜಿಪಿ ರೂಪಾ ಮೌದ್ಗಿಲ್ಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿ ಹಿನ್ನೆಲೆ ಮಂಗಳವಾರ ಡಿ. ರೂಪಾ ಕೋರ್ಟ್ಗೆ ಹಾಜರಾಗಿ ಜಾಮೀನು ಪಡೆದಿದ್ದಾರೆ. 25 ಸಾವಿರ ಬಾಂಡ್ ಷರತ್ತಿನೊಂದಿಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಐಜಿಪಿ ಡಿ. ರೂಪಾ ಮೌದ್ಗಿಲ್ ಅವರಿಗೆ ಜಾಮೀನು ನೀಡಿದೆ ಎಂದು ತಿಳಿದುಬಂದಿದೆ.
ಈ ಇಬ್ಬರು ಅಧಿಕಾರಿಗಳ ಜಟಾಪಟಿಗೆ ಕಾರಣ
ರೂಪಾ ಮೌದ್ಗಿಲ್ ಅವರು 2023ರ ಫೆಬ್ರವರಿ 18 ಮತ್ತು 19ರಂದು ತಮ್ಮ ಫೇಸ್ಬುಕ್ ಅಕೌಂಟ್ನಲ್ಲಿ ತಮ್ಮ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ಹಾಗೆ ಸಾಮಾಜಿಕ ಜಾಲತಾಣದಲ್ಲೂ ಹೇಳಿಕೆ ನೀಡಿದ್ದರು. ಆ ಆರೋಪಗಳು ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ತಮ್ಮ ತೇಜೋವಧೆ ಮಾಡುವ ದುರುದ್ದೇಶದಿಂದಲೇ ರೂಪಾ ಅವರು ಈ ಕೃತ್ಯ ಎಸಗಿದ್ದಾರೆ. ಅವರ ಈ ಕೃತ್ಯ ತಮ್ಮ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಮಾನಸಿಕ ಯಾತನೆ ಉಂಟು ಮಾಡಿವೆ ಎಂದು ರೋಹಿಣಿ ಸಿಂಧೂರಿ ಆರೋಪಿಸಿದ್ದಾರೆ.
ಅಲ್ಲದೆ, ಮಾನಹಾನಿ ಮಾಡಿ ಮಾನಸಿಕ ಯಾತನೆ ಉಂಟು ಮಾಡಿರುವುದಕ್ಕಾಗಿ ಡಿ. ರೂಪಾ ಅವರಿಂದ ಒಂದು ಕೋಟಿ ರೂಪಾಯಿಯನ್ನು ಪರಿಹಾರವಾಗಿ ಕೊಡಿಸಿಕೊಡಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ರೋಹಿಣಿ ಸಿಂಧೂರಿ ಅವರು ದೂರಿನಲ್ಲಿ ಕೋರಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…