ರೋಹಿತ್ ಪಡೆಗೆ ಸರಣಿ ಕ್ಲೀನ್ ಸ್ವೀಪ್! ODI ನಂಬರ್ ಒನ್ ಸ್ಥಾನಕ್ಕೇರಿದ ಟೀಂ ಇಂಡಿಯಾ

ಇಂದೋರ್ : ನಾಯಕ ರೋಹಿತ್ ಶರ್ಮಾ ಹಾಗೂ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರ ದ್ವಿಶತಕದ ಜೊತೆಯಾಟದ ಜೊತೆಗೆ ಶಾದು೯ಲ್ ಠಾಕೂರ್ ಹಾಗೂ ಕುಲದೀಪ್ ಯಾದವ್ ಅವರ ಅದ್ಭುತ ಬೌಲಿಂಗ್ ಬಲದಿಂದ ಕೊನೆಯ ಪಂದ್ಯದಲ್ಲಿ 90 ರನ್‌ಗಳ ಅಂತರದಿಂದ ಗೆದ್ದು ಭಾರತ ತಂಡ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ನಂಬರ್ ಒನ್ ಸ್ಥಾನ ತನ್ನದಾಗಿಸಿಕೊಂಡಿತು.

ಮದ್ಯಪ್ರದೇಶದ ಇಂದೋರ್ ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ತಂಡದ ನಾಯಕ ಟಾಮ್ ಲ್ಯಾಥಮ್ ಭಾರತವನ್ನು ಬ್ಯಾಟಿಂಗ್ ಗೆ ಆಹ್ವಾನಿಸುವ ಮೂಲಕ ರೋಹಿತ್ ಶರ್ಮಾ ಪಡೆಯನ್ನು ಕಟ್ಟಿಹಾಕುವ ಆಲೋಚನೆಯಲ್ಲಿದ್ದರು.

ಪ್ರವಾಸಿ ತಂಡದ ಆಹ್ವಾನದ ಮೇರೆಗೆ ಬ್ಯಾಂಕಿಂಗ್ ಗೆ ಬಂದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 9 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 101 ರನ್ ಹಾಗೂ ಆರಂಭಿಕ ಆಟಗಾರ ಶುಭ್ ಮನ್ ಗಿಲ್ 13 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 112 ರನ್ ಗಳಿಸುವ ಮೂಲಕ ಮೊದಲ ವಿಕೆಟ್ ಜೊತೆಯಾಟದಲ್ಲಿ 212 ರನ್ ಗಳಿಸಿ ಭದ್ರ ಬುನಾದಿ ಹಾಕಿದರು.

ರೋಹಿತ್ ಶರ್ಮಾ ಅವರನ್ನು ಔಟ್ ಮಾಡುವಲ್ಲಿ ಯಶಸ್ವಿಯಾದ ಸ್ಪಿನ್ನರ್ ಬ್ರೈಸ್ ವೆಲ್ ಮೊದಲ ಬ್ರೇಕ್ ನೀಡಿದರು, ನಂತರ ಶುಭ್ಮಮನ್ ಗಿಲ್ ಟಿಕ್ಕರ್ ಗೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಹಿರಿಯ ಆಟಗಾರ ವಿರಾಟ್ ಕೊಹ್ಲಿ 30 ರನ್ ಗಳಿಸಿ ವಿಕೆಟ್ ಒಪ್ಪಿಸಿದರು, ಇಶಾನ್ ಕಿಶನ್, ಸೂರ್ಯ ಕುಮಾರ್ ಯಾದವ್ ಹಾಗೂ ವಾಶಿಂಗ್ಟನ್ ಸುಂದರ್ ಬೇಗನೇ ವಿಕೆಟ್ ಒಪ್ಪಿಸಿದರು.

ಈ ಸಂದರ್ಭದಲ್ಲಿ ಜೊತೆಯಾದ ಉಪನಾಯಕ ಹಾರ್ದಿಕ್ ಪಾಂಡ್ಯ(54) ಹಾಗೂ ಆಲ್ ರೌಂಡರ್ ಲಾಡ್೯ ಶಾದು೯ಲ್ ಠಾಕೂರ್ (25) ರನ್ ಗಳಿಸಿ ತಂಡದ ಮೊತ್ತವನ್ನು 385ರ ಗಡಿ ದಾಟಿಸಿ ಬೃಹತ್ ಮೊತ್ತ ಕಲೆ ಹಾಕಿದರು, ನ್ಯೂಜಿಲೆಂಡ್ ಪರ ಫರ್ಗುಸನ್ ಹಾಗೂ ಜಾಕೋಬ್ ತಲಾ 3 ವಿಕೆಟ್ ಪಡೆದು ಗಮನ ಸೆಳೆದರು.

ಬೃಹತ್ ಮೊತ್ತ ಬೆನ್ನಟ್ಟಿದ ಪ್ರವಾಸಿ ನ್ಯೂಜಿಲೆಂಡ್ ತಂಡ ರನ್ ಗಳಿಸುವ ಮೊದಲೇ ಫಿನ್ ಅಲೆನ್ (0) ಅವರಿಗೆ ಹಾರ್ದಿಕ್ ಪಾಂಡ್ಯ ಪೆವಿಲಿಯನ್ ದಾರಿ ತೋರಿಸಿದರು, ನಂತರ ಒಂದಾದ ಕಾನ್ವೆ 12 ಬೌಂಡರಿ ಹಾಗೂ 8 ಸಿಕ್ಸರ್ ನೆರವಿನಿಂದ (138)ರನ್ ಗಳಿಸಿದರೆ ನಿಕೊಲಾಸ್ 42 ರನ್ ಗಳಿಸಿ ಎರಡನೇ ವಿಕೆಟ್‍ಗೆ 106 ರನ್ ಗಳಿಸುವ ಮೂಲಕ ಆಸರೆಯಾದರು.

ಡೇನಿಯಲ್ ಮಿಚೆಲ್, ಸ್ಯಾಂಟ್ನರ್ ಹಾಗೂ ಬ್ರೆಸ್ವೆಲ್ ಅಲ್ಪ ಪ್ರಮಾಣದ ಪ್ರತಿರೋಧ ತೋರಿದರೂ ಸಹ 295 ರನ್ ಗಳಿಸಲಷ್ಟೇ ಸಾಧ್ಯವಾಯಿತು, ಭಾರತದ ಪರವಾಗಿ ಶಾದು೯ಲ್ ಠಾಕೂರ್ ಹಾಗೂ ಕುಲದೀಪ್ ಯಾದವ್ ಅವರಿಗೆ 3 ವಿಕೆಟ್ ಹಾಗೂ ಯಜುವೇಂದ್ರ ಚಹಲ್ 2 ವಿಕೆಟ್ ಕಬಳಿಸಿದರು.

90 ರನ್ ಅಂತರದ ಜಯ ಸಾಧಿಸುವ ಮೂಲಕ ಸರಣಿಯ ಎಲ್ಲಾ ಪಂದ್ಯಗಳನ್ನು ಗೆದ್ದ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್ ಮಾಡುವುದರ ಜೊತೆಗೆ ಏಕದಿನ ರ್ಯಾಂಕಿಂಗ್ ನಲ್ಲಿ ಪ್ರಥಮ ಸ್ಥಾನ ಪಡೆದಿದೆ, ಉತ್ತಮ ಪ್ರದರ್ಶನ ತೋರಿದ ಆಲ್ ರೌಂಡರ್ ಶಾದು೯ಲ್ ಠಾಕೂರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಸರಣಿಯಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ ಶುಭಮನ್ ಗಿಲ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

46 minutes ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

3 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

5 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

7 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

18 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

18 hours ago