ರೋಹಿತ್ ಪಡೆಗೆ ಸರಣಿ ಕ್ಲೀನ್ ಸ್ವೀಪ್! ODI ನಂಬರ್ ಒನ್ ಸ್ಥಾನಕ್ಕೇರಿದ ಟೀಂ ಇಂಡಿಯಾ

ಇಂದೋರ್ : ನಾಯಕ ರೋಹಿತ್ ಶರ್ಮಾ ಹಾಗೂ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರ ದ್ವಿಶತಕದ ಜೊತೆಯಾಟದ ಜೊತೆಗೆ ಶಾದು೯ಲ್ ಠಾಕೂರ್ ಹಾಗೂ ಕುಲದೀಪ್ ಯಾದವ್ ಅವರ ಅದ್ಭುತ ಬೌಲಿಂಗ್ ಬಲದಿಂದ ಕೊನೆಯ ಪಂದ್ಯದಲ್ಲಿ 90 ರನ್‌ಗಳ ಅಂತರದಿಂದ ಗೆದ್ದು ಭಾರತ ತಂಡ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ನಂಬರ್ ಒನ್ ಸ್ಥಾನ ತನ್ನದಾಗಿಸಿಕೊಂಡಿತು.

ಮದ್ಯಪ್ರದೇಶದ ಇಂದೋರ್ ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ತಂಡದ ನಾಯಕ ಟಾಮ್ ಲ್ಯಾಥಮ್ ಭಾರತವನ್ನು ಬ್ಯಾಟಿಂಗ್ ಗೆ ಆಹ್ವಾನಿಸುವ ಮೂಲಕ ರೋಹಿತ್ ಶರ್ಮಾ ಪಡೆಯನ್ನು ಕಟ್ಟಿಹಾಕುವ ಆಲೋಚನೆಯಲ್ಲಿದ್ದರು.

ಪ್ರವಾಸಿ ತಂಡದ ಆಹ್ವಾನದ ಮೇರೆಗೆ ಬ್ಯಾಂಕಿಂಗ್ ಗೆ ಬಂದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 9 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 101 ರನ್ ಹಾಗೂ ಆರಂಭಿಕ ಆಟಗಾರ ಶುಭ್ ಮನ್ ಗಿಲ್ 13 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 112 ರನ್ ಗಳಿಸುವ ಮೂಲಕ ಮೊದಲ ವಿಕೆಟ್ ಜೊತೆಯಾಟದಲ್ಲಿ 212 ರನ್ ಗಳಿಸಿ ಭದ್ರ ಬುನಾದಿ ಹಾಕಿದರು.

ರೋಹಿತ್ ಶರ್ಮಾ ಅವರನ್ನು ಔಟ್ ಮಾಡುವಲ್ಲಿ ಯಶಸ್ವಿಯಾದ ಸ್ಪಿನ್ನರ್ ಬ್ರೈಸ್ ವೆಲ್ ಮೊದಲ ಬ್ರೇಕ್ ನೀಡಿದರು, ನಂತರ ಶುಭ್ಮಮನ್ ಗಿಲ್ ಟಿಕ್ಕರ್ ಗೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಹಿರಿಯ ಆಟಗಾರ ವಿರಾಟ್ ಕೊಹ್ಲಿ 30 ರನ್ ಗಳಿಸಿ ವಿಕೆಟ್ ಒಪ್ಪಿಸಿದರು, ಇಶಾನ್ ಕಿಶನ್, ಸೂರ್ಯ ಕುಮಾರ್ ಯಾದವ್ ಹಾಗೂ ವಾಶಿಂಗ್ಟನ್ ಸುಂದರ್ ಬೇಗನೇ ವಿಕೆಟ್ ಒಪ್ಪಿಸಿದರು.

ಈ ಸಂದರ್ಭದಲ್ಲಿ ಜೊತೆಯಾದ ಉಪನಾಯಕ ಹಾರ್ದಿಕ್ ಪಾಂಡ್ಯ(54) ಹಾಗೂ ಆಲ್ ರೌಂಡರ್ ಲಾಡ್೯ ಶಾದು೯ಲ್ ಠಾಕೂರ್ (25) ರನ್ ಗಳಿಸಿ ತಂಡದ ಮೊತ್ತವನ್ನು 385ರ ಗಡಿ ದಾಟಿಸಿ ಬೃಹತ್ ಮೊತ್ತ ಕಲೆ ಹಾಕಿದರು, ನ್ಯೂಜಿಲೆಂಡ್ ಪರ ಫರ್ಗುಸನ್ ಹಾಗೂ ಜಾಕೋಬ್ ತಲಾ 3 ವಿಕೆಟ್ ಪಡೆದು ಗಮನ ಸೆಳೆದರು.

ಬೃಹತ್ ಮೊತ್ತ ಬೆನ್ನಟ್ಟಿದ ಪ್ರವಾಸಿ ನ್ಯೂಜಿಲೆಂಡ್ ತಂಡ ರನ್ ಗಳಿಸುವ ಮೊದಲೇ ಫಿನ್ ಅಲೆನ್ (0) ಅವರಿಗೆ ಹಾರ್ದಿಕ್ ಪಾಂಡ್ಯ ಪೆವಿಲಿಯನ್ ದಾರಿ ತೋರಿಸಿದರು, ನಂತರ ಒಂದಾದ ಕಾನ್ವೆ 12 ಬೌಂಡರಿ ಹಾಗೂ 8 ಸಿಕ್ಸರ್ ನೆರವಿನಿಂದ (138)ರನ್ ಗಳಿಸಿದರೆ ನಿಕೊಲಾಸ್ 42 ರನ್ ಗಳಿಸಿ ಎರಡನೇ ವಿಕೆಟ್‍ಗೆ 106 ರನ್ ಗಳಿಸುವ ಮೂಲಕ ಆಸರೆಯಾದರು.

ಡೇನಿಯಲ್ ಮಿಚೆಲ್, ಸ್ಯಾಂಟ್ನರ್ ಹಾಗೂ ಬ್ರೆಸ್ವೆಲ್ ಅಲ್ಪ ಪ್ರಮಾಣದ ಪ್ರತಿರೋಧ ತೋರಿದರೂ ಸಹ 295 ರನ್ ಗಳಿಸಲಷ್ಟೇ ಸಾಧ್ಯವಾಯಿತು, ಭಾರತದ ಪರವಾಗಿ ಶಾದು೯ಲ್ ಠಾಕೂರ್ ಹಾಗೂ ಕುಲದೀಪ್ ಯಾದವ್ ಅವರಿಗೆ 3 ವಿಕೆಟ್ ಹಾಗೂ ಯಜುವೇಂದ್ರ ಚಹಲ್ 2 ವಿಕೆಟ್ ಕಬಳಿಸಿದರು.

90 ರನ್ ಅಂತರದ ಜಯ ಸಾಧಿಸುವ ಮೂಲಕ ಸರಣಿಯ ಎಲ್ಲಾ ಪಂದ್ಯಗಳನ್ನು ಗೆದ್ದ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್ ಮಾಡುವುದರ ಜೊತೆಗೆ ಏಕದಿನ ರ್ಯಾಂಕಿಂಗ್ ನಲ್ಲಿ ಪ್ರಥಮ ಸ್ಥಾನ ಪಡೆದಿದೆ, ಉತ್ತಮ ಪ್ರದರ್ಶನ ತೋರಿದ ಆಲ್ ರೌಂಡರ್ ಶಾದು೯ಲ್ ಠಾಕೂರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಸರಣಿಯಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ ಶುಭಮನ್ ಗಿಲ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

4 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

5 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

23 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

23 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

24 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

1 day ago