ರೋಹಿತ್ ಪಡೆಗೆ ಸರಣಿ ಕ್ಲೀನ್ ಸ್ವೀಪ್! ODI ನಂಬರ್ ಒನ್ ಸ್ಥಾನಕ್ಕೇರಿದ ಟೀಂ ಇಂಡಿಯಾ

ಇಂದೋರ್ : ನಾಯಕ ರೋಹಿತ್ ಶರ್ಮಾ ಹಾಗೂ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರ ದ್ವಿಶತಕದ ಜೊತೆಯಾಟದ ಜೊತೆಗೆ ಶಾದು೯ಲ್ ಠಾಕೂರ್ ಹಾಗೂ ಕುಲದೀಪ್ ಯಾದವ್ ಅವರ ಅದ್ಭುತ ಬೌಲಿಂಗ್ ಬಲದಿಂದ ಕೊನೆಯ ಪಂದ್ಯದಲ್ಲಿ 90 ರನ್‌ಗಳ ಅಂತರದಿಂದ ಗೆದ್ದು ಭಾರತ ತಂಡ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ನಂಬರ್ ಒನ್ ಸ್ಥಾನ ತನ್ನದಾಗಿಸಿಕೊಂಡಿತು.

ಮದ್ಯಪ್ರದೇಶದ ಇಂದೋರ್ ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ತಂಡದ ನಾಯಕ ಟಾಮ್ ಲ್ಯಾಥಮ್ ಭಾರತವನ್ನು ಬ್ಯಾಟಿಂಗ್ ಗೆ ಆಹ್ವಾನಿಸುವ ಮೂಲಕ ರೋಹಿತ್ ಶರ್ಮಾ ಪಡೆಯನ್ನು ಕಟ್ಟಿಹಾಕುವ ಆಲೋಚನೆಯಲ್ಲಿದ್ದರು.

ಪ್ರವಾಸಿ ತಂಡದ ಆಹ್ವಾನದ ಮೇರೆಗೆ ಬ್ಯಾಂಕಿಂಗ್ ಗೆ ಬಂದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 9 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 101 ರನ್ ಹಾಗೂ ಆರಂಭಿಕ ಆಟಗಾರ ಶುಭ್ ಮನ್ ಗಿಲ್ 13 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 112 ರನ್ ಗಳಿಸುವ ಮೂಲಕ ಮೊದಲ ವಿಕೆಟ್ ಜೊತೆಯಾಟದಲ್ಲಿ 212 ರನ್ ಗಳಿಸಿ ಭದ್ರ ಬುನಾದಿ ಹಾಕಿದರು.

ರೋಹಿತ್ ಶರ್ಮಾ ಅವರನ್ನು ಔಟ್ ಮಾಡುವಲ್ಲಿ ಯಶಸ್ವಿಯಾದ ಸ್ಪಿನ್ನರ್ ಬ್ರೈಸ್ ವೆಲ್ ಮೊದಲ ಬ್ರೇಕ್ ನೀಡಿದರು, ನಂತರ ಶುಭ್ಮಮನ್ ಗಿಲ್ ಟಿಕ್ಕರ್ ಗೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಹಿರಿಯ ಆಟಗಾರ ವಿರಾಟ್ ಕೊಹ್ಲಿ 30 ರನ್ ಗಳಿಸಿ ವಿಕೆಟ್ ಒಪ್ಪಿಸಿದರು, ಇಶಾನ್ ಕಿಶನ್, ಸೂರ್ಯ ಕುಮಾರ್ ಯಾದವ್ ಹಾಗೂ ವಾಶಿಂಗ್ಟನ್ ಸುಂದರ್ ಬೇಗನೇ ವಿಕೆಟ್ ಒಪ್ಪಿಸಿದರು.

ಈ ಸಂದರ್ಭದಲ್ಲಿ ಜೊತೆಯಾದ ಉಪನಾಯಕ ಹಾರ್ದಿಕ್ ಪಾಂಡ್ಯ(54) ಹಾಗೂ ಆಲ್ ರೌಂಡರ್ ಲಾಡ್೯ ಶಾದು೯ಲ್ ಠಾಕೂರ್ (25) ರನ್ ಗಳಿಸಿ ತಂಡದ ಮೊತ್ತವನ್ನು 385ರ ಗಡಿ ದಾಟಿಸಿ ಬೃಹತ್ ಮೊತ್ತ ಕಲೆ ಹಾಕಿದರು, ನ್ಯೂಜಿಲೆಂಡ್ ಪರ ಫರ್ಗುಸನ್ ಹಾಗೂ ಜಾಕೋಬ್ ತಲಾ 3 ವಿಕೆಟ್ ಪಡೆದು ಗಮನ ಸೆಳೆದರು.

ಬೃಹತ್ ಮೊತ್ತ ಬೆನ್ನಟ್ಟಿದ ಪ್ರವಾಸಿ ನ್ಯೂಜಿಲೆಂಡ್ ತಂಡ ರನ್ ಗಳಿಸುವ ಮೊದಲೇ ಫಿನ್ ಅಲೆನ್ (0) ಅವರಿಗೆ ಹಾರ್ದಿಕ್ ಪಾಂಡ್ಯ ಪೆವಿಲಿಯನ್ ದಾರಿ ತೋರಿಸಿದರು, ನಂತರ ಒಂದಾದ ಕಾನ್ವೆ 12 ಬೌಂಡರಿ ಹಾಗೂ 8 ಸಿಕ್ಸರ್ ನೆರವಿನಿಂದ (138)ರನ್ ಗಳಿಸಿದರೆ ನಿಕೊಲಾಸ್ 42 ರನ್ ಗಳಿಸಿ ಎರಡನೇ ವಿಕೆಟ್‍ಗೆ 106 ರನ್ ಗಳಿಸುವ ಮೂಲಕ ಆಸರೆಯಾದರು.

ಡೇನಿಯಲ್ ಮಿಚೆಲ್, ಸ್ಯಾಂಟ್ನರ್ ಹಾಗೂ ಬ್ರೆಸ್ವೆಲ್ ಅಲ್ಪ ಪ್ರಮಾಣದ ಪ್ರತಿರೋಧ ತೋರಿದರೂ ಸಹ 295 ರನ್ ಗಳಿಸಲಷ್ಟೇ ಸಾಧ್ಯವಾಯಿತು, ಭಾರತದ ಪರವಾಗಿ ಶಾದು೯ಲ್ ಠಾಕೂರ್ ಹಾಗೂ ಕುಲದೀಪ್ ಯಾದವ್ ಅವರಿಗೆ 3 ವಿಕೆಟ್ ಹಾಗೂ ಯಜುವೇಂದ್ರ ಚಹಲ್ 2 ವಿಕೆಟ್ ಕಬಳಿಸಿದರು.

90 ರನ್ ಅಂತರದ ಜಯ ಸಾಧಿಸುವ ಮೂಲಕ ಸರಣಿಯ ಎಲ್ಲಾ ಪಂದ್ಯಗಳನ್ನು ಗೆದ್ದ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್ ಮಾಡುವುದರ ಜೊತೆಗೆ ಏಕದಿನ ರ್ಯಾಂಕಿಂಗ್ ನಲ್ಲಿ ಪ್ರಥಮ ಸ್ಥಾನ ಪಡೆದಿದೆ, ಉತ್ತಮ ಪ್ರದರ್ಶನ ತೋರಿದ ಆಲ್ ರೌಂಡರ್ ಶಾದು೯ಲ್ ಠಾಕೂರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಸರಣಿಯಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ ಶುಭಮನ್ ಗಿಲ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

6 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

7 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

12 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

24 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

1 day ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

1 day ago