ರೋಹಿತ್ ಪಡೆಗೆ ಸರಣಿ ಕ್ಲೀನ್ ಸ್ವೀಪ್! ODI ನಂಬರ್ ಒನ್ ಸ್ಥಾನಕ್ಕೇರಿದ ಟೀಂ ಇಂಡಿಯಾ

ಇಂದೋರ್ : ನಾಯಕ ರೋಹಿತ್ ಶರ್ಮಾ ಹಾಗೂ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರ ದ್ವಿಶತಕದ ಜೊತೆಯಾಟದ ಜೊತೆಗೆ ಶಾದು೯ಲ್ ಠಾಕೂರ್ ಹಾಗೂ ಕುಲದೀಪ್ ಯಾದವ್ ಅವರ ಅದ್ಭುತ ಬೌಲಿಂಗ್ ಬಲದಿಂದ ಕೊನೆಯ ಪಂದ್ಯದಲ್ಲಿ 90 ರನ್‌ಗಳ ಅಂತರದಿಂದ ಗೆದ್ದು ಭಾರತ ತಂಡ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ನಂಬರ್ ಒನ್ ಸ್ಥಾನ ತನ್ನದಾಗಿಸಿಕೊಂಡಿತು.

ಮದ್ಯಪ್ರದೇಶದ ಇಂದೋರ್ ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ತಂಡದ ನಾಯಕ ಟಾಮ್ ಲ್ಯಾಥಮ್ ಭಾರತವನ್ನು ಬ್ಯಾಟಿಂಗ್ ಗೆ ಆಹ್ವಾನಿಸುವ ಮೂಲಕ ರೋಹಿತ್ ಶರ್ಮಾ ಪಡೆಯನ್ನು ಕಟ್ಟಿಹಾಕುವ ಆಲೋಚನೆಯಲ್ಲಿದ್ದರು.

ಪ್ರವಾಸಿ ತಂಡದ ಆಹ್ವಾನದ ಮೇರೆಗೆ ಬ್ಯಾಂಕಿಂಗ್ ಗೆ ಬಂದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 9 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 101 ರನ್ ಹಾಗೂ ಆರಂಭಿಕ ಆಟಗಾರ ಶುಭ್ ಮನ್ ಗಿಲ್ 13 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 112 ರನ್ ಗಳಿಸುವ ಮೂಲಕ ಮೊದಲ ವಿಕೆಟ್ ಜೊತೆಯಾಟದಲ್ಲಿ 212 ರನ್ ಗಳಿಸಿ ಭದ್ರ ಬುನಾದಿ ಹಾಕಿದರು.

ರೋಹಿತ್ ಶರ್ಮಾ ಅವರನ್ನು ಔಟ್ ಮಾಡುವಲ್ಲಿ ಯಶಸ್ವಿಯಾದ ಸ್ಪಿನ್ನರ್ ಬ್ರೈಸ್ ವೆಲ್ ಮೊದಲ ಬ್ರೇಕ್ ನೀಡಿದರು, ನಂತರ ಶುಭ್ಮಮನ್ ಗಿಲ್ ಟಿಕ್ಕರ್ ಗೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಹಿರಿಯ ಆಟಗಾರ ವಿರಾಟ್ ಕೊಹ್ಲಿ 30 ರನ್ ಗಳಿಸಿ ವಿಕೆಟ್ ಒಪ್ಪಿಸಿದರು, ಇಶಾನ್ ಕಿಶನ್, ಸೂರ್ಯ ಕುಮಾರ್ ಯಾದವ್ ಹಾಗೂ ವಾಶಿಂಗ್ಟನ್ ಸುಂದರ್ ಬೇಗನೇ ವಿಕೆಟ್ ಒಪ್ಪಿಸಿದರು.

ಈ ಸಂದರ್ಭದಲ್ಲಿ ಜೊತೆಯಾದ ಉಪನಾಯಕ ಹಾರ್ದಿಕ್ ಪಾಂಡ್ಯ(54) ಹಾಗೂ ಆಲ್ ರೌಂಡರ್ ಲಾಡ್೯ ಶಾದು೯ಲ್ ಠಾಕೂರ್ (25) ರನ್ ಗಳಿಸಿ ತಂಡದ ಮೊತ್ತವನ್ನು 385ರ ಗಡಿ ದಾಟಿಸಿ ಬೃಹತ್ ಮೊತ್ತ ಕಲೆ ಹಾಕಿದರು, ನ್ಯೂಜಿಲೆಂಡ್ ಪರ ಫರ್ಗುಸನ್ ಹಾಗೂ ಜಾಕೋಬ್ ತಲಾ 3 ವಿಕೆಟ್ ಪಡೆದು ಗಮನ ಸೆಳೆದರು.

ಬೃಹತ್ ಮೊತ್ತ ಬೆನ್ನಟ್ಟಿದ ಪ್ರವಾಸಿ ನ್ಯೂಜಿಲೆಂಡ್ ತಂಡ ರನ್ ಗಳಿಸುವ ಮೊದಲೇ ಫಿನ್ ಅಲೆನ್ (0) ಅವರಿಗೆ ಹಾರ್ದಿಕ್ ಪಾಂಡ್ಯ ಪೆವಿಲಿಯನ್ ದಾರಿ ತೋರಿಸಿದರು, ನಂತರ ಒಂದಾದ ಕಾನ್ವೆ 12 ಬೌಂಡರಿ ಹಾಗೂ 8 ಸಿಕ್ಸರ್ ನೆರವಿನಿಂದ (138)ರನ್ ಗಳಿಸಿದರೆ ನಿಕೊಲಾಸ್ 42 ರನ್ ಗಳಿಸಿ ಎರಡನೇ ವಿಕೆಟ್‍ಗೆ 106 ರನ್ ಗಳಿಸುವ ಮೂಲಕ ಆಸರೆಯಾದರು.

ಡೇನಿಯಲ್ ಮಿಚೆಲ್, ಸ್ಯಾಂಟ್ನರ್ ಹಾಗೂ ಬ್ರೆಸ್ವೆಲ್ ಅಲ್ಪ ಪ್ರಮಾಣದ ಪ್ರತಿರೋಧ ತೋರಿದರೂ ಸಹ 295 ರನ್ ಗಳಿಸಲಷ್ಟೇ ಸಾಧ್ಯವಾಯಿತು, ಭಾರತದ ಪರವಾಗಿ ಶಾದು೯ಲ್ ಠಾಕೂರ್ ಹಾಗೂ ಕುಲದೀಪ್ ಯಾದವ್ ಅವರಿಗೆ 3 ವಿಕೆಟ್ ಹಾಗೂ ಯಜುವೇಂದ್ರ ಚಹಲ್ 2 ವಿಕೆಟ್ ಕಬಳಿಸಿದರು.

90 ರನ್ ಅಂತರದ ಜಯ ಸಾಧಿಸುವ ಮೂಲಕ ಸರಣಿಯ ಎಲ್ಲಾ ಪಂದ್ಯಗಳನ್ನು ಗೆದ್ದ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್ ಮಾಡುವುದರ ಜೊತೆಗೆ ಏಕದಿನ ರ್ಯಾಂಕಿಂಗ್ ನಲ್ಲಿ ಪ್ರಥಮ ಸ್ಥಾನ ಪಡೆದಿದೆ, ಉತ್ತಮ ಪ್ರದರ್ಶನ ತೋರಿದ ಆಲ್ ರೌಂಡರ್ ಶಾದು೯ಲ್ ಠಾಕೂರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಸರಣಿಯಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ ಶುಭಮನ್ ಗಿಲ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

5 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

7 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

8 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

9 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

10 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

16 hours ago